ಕಾಂಗ್ರೆಸ್‌ನ ಎರಡೂ ಕ್ಷೇತ್ರದಲ್ಲೂ ಬಿಜೆಪಿಗೆ ಲೀಡ್‌!

ಬಿಜೆಪಿ ಶಾಸಕರ ಕ್ಷೇತ್ರದಲ್ಲೂ ಉತ್ತಮ ಸಾಧನೆ

Team Udayavani, May 25, 2019, 10:28 AM IST

Udayavani Kannada Newspaper

ದಾವಣಗೆರೆ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಬ್ಬರು ಕಾಂಗ್ರೆಸ್‌ ಶಾಸಕರ ಕ್ಷೇತ್ರದಲ್ಲೇ ಬಿಜೆಪಿ ಲೀಡ್‌ ಪಡೆದಿದೆ.

ಬಿಜೆಪಿಯ ಪಾಲಿಗೆ ಕಠಿಣ… ಎಂದೇ ಪರಿಗಣಿಸಲ್ಪಡುವ, ಕಾಂಗ್ರೆಸ್‌ ಅಭೇದ್ಯ ಕೋಟೆ, ಹಿರಿಯ ಕಾಂಗ್ರೆಸ್ಸಿಗ ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸುತ್ತಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲೇ ಬಿಜೆಪಿ 8,516 ಮತಗಳ ಮಹತ್ತರ ಲೀಡ್‌ ಪಡೆದುಕೊಂಡಿದೆ.

ದಾವಣಗೆರೆ ಮಹಾನಗರ ಪಾಲಿಕೆಯ 1 ರಿಂದ 17 ಮತ್ತು 23ನೇ ವಾರ್ಡ್‌ ಹಾಗೂ ಹದಡಿ ಜಿಲ್ಲಾ ಪಂಚಾಯತ್‌ ಕ್ಷೇತ್ರ ವ್ಯಾಪ್ತಿ ಹೊಂದಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 65 ಸಾವಿರದಷ್ಟಿರುವ ಅಲ್ಪಸಂಖ್ಯಾತರ ಮತಗಳೇ ನಿರ್ಣಾಯಕ. ಹದಡಿ ಜಿಲ್ಲಾ ಪಂಚಾಯತ್‌ ಕಾಂಗ್ರೆಸ್‌ ತೆಕ್ಕೆಯಲ್ಲಿದೆ. ಶಾಮನೂರು ಶಿವಶಂಕರಪ್ಪ ಕಳೆದ 15 ವರ್ಷದಿಂದ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ.

ರಾಜಕೀಯದ ಪ್ರತಿಕೂಲ ಪರಿಸ್ಥಿತಿ ನಡುವೆಯೂ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ್‌ 8,516 ಲೀಡ್‌ ಗಳಿಸಿದ್ದಾರೆ. ಸಿದ್ದೇಶ್ವರ್‌ 70,765 ಮತ ಪಡೆದಿದ್ದರೆ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ 62,249 ಮತ ಗಳಿಸಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ 8,516 ಮತಗಳ ಮುನ್ನಡೆ ಕಂಡಿರುವುದು ಬಿಜೆಪಿ ಮಟ್ಟಿಗಂತೂ ಗಮನಾರ್ಹ ಸಾಧನೆ.

ಕಾಂಗ್ರೆಸ್‌ ಶಾಸಕ ಎಸ್‌. ರಾಮಪ್ಪ ಪ್ರತಿನಿಧಿಸುವ ಹರಿಹರ ಕ್ಷೇತ್ರದಲ್ಲಿ ಸಹ ಬಿಜೆಪಿ ಲೀಡ್‌ ಪಡೆದುಕೊಂಡಿದೆ. ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲೂ ಸೋಲಿನ ಕಹಿ ಕಂಡಿರುವ ಹರಿಹರ ಕ್ಷೇತ್ರದಲ್ಲಿ ಬಿಜೆಪಿ ಲೀಡ್‌ ಗಳಿಸಿಕೊಂಡಿರುವುದು ಮುಂದಿನ ಚುನಾವಣೆಯಲ್ಲಿನ ಬದಲಾವಣೆಯ ಮುನ್ಸೂಚನೆ.

ಹರಿಹರ ಕ್ಷೇತ್ರದಲ್ಲಿ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್‌ 80,779 ಮತ ಗಳಿಸಿದರೆ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ 67,215 ಮತ ಪಡೆದಿದ್ದಾರೆ. ಸಿದ್ದೇಶ್ವರ್‌ 13,564 ಮತಗಳ ಲೀಡ್‌ ಗಳಿಸಿದ್ದಾರೆ.

ಹರಿಹರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ ಅವರ ಕುರುಬ ಸಮುದಾಯದ ಮತಗಳು ನಿರ್ಣಾಯಕ. ಮೈತ್ರಿ ಅಭ್ಯರ್ಥಿ ಪರವಾದ ಪ್ರಬಲ ಅಲೆಯೂ ಇತ್ತು. ಹಾಗಾಗಿ ಹರಿಹರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಅತೀ ಹೆಚ್ಚಿನ ಮತ ಪಡೆಯಲಿದ್ದಾರೆ ಎಂಬ ಲೆಕ್ಕಾಚಾರ ಇತ್ತು. ಆ ನಡುವೆಯೂ ಬಿಜೆಪಿ ಹರಿಹರದಲ್ಲಿ ಲೀಡ್‌ ಪಡೆಯುವ ಮೂಲಕ ಮತ್ತೆ ಕಮಲದ ಕರಾಮತ್‌… ಪ್ರದರ್ಶಿಸಿದೆ.

ಕಾಂಗ್ರೆಸ್‌ ಶಾಸಕರು ಇರುವಂತಹ ಹರಿಹರ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಲೀಡ್‌ ಪಡೆದಿರುವ ಬಿಜೆಪಿ ತನ್ನದೇ ಶಾಸಕರ ಕ್ಷೇತ್ರದಲ್ಲೂ ಭರ್ಜರಿ ಎನ್ನುವಂತಹ ಲೀಡ್‌ ಪಡೆದುಕೊಂಡಿದೆ.

2013ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಃ ಬಿಜೆಪಿಯವರೇ ನಿಬ್ಬೆರಗಾಗುವಂತಹ ಶಾಕಿಂಗ್‌ ಫಲಿತಾಂಶ ನೀಡಿದ್ದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗಳಿಸಿರುವ ಮತಗಳು ಮತ್ತು ಲೀಡ್‌ ದಾವಣಗೆರೆ ಉತ್ತರ ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾರಿ ಸಾರಿ ಹೇಳುವಂತಿವೆ.

ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್‌ ಬರೋಬರಿ 1,04,480 ಮತ ಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಗೆ ದೊರೆತಿರುವ ಲೀಡ್‌ ಪ್ರಮಾಣ 54,106 ಮತಗಳು. ಸಿದ್ದೇಶ್ವರ್‌ ಗೆಲುವು ಸಾಧಿಸಿರುವ 1,69,702 ಮತಗಳ ಅಂತರದಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಪಾಲೇ ಸುಮಾರು ಮೂರರಲ್ಲಿ ಒಂದರಷ್ಟು.

ದಾವಣಗೆರೆ ಉತ್ತರ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಕಾರ್ಯಕ್ಷೇತ್ರ. ತಮ್ಮ ನೆಚ್ಚಿನ ಶಿಷ್ಯನನ್ನ ಅಖಾಡಕ್ಕಿಳಿಸಿ, ಗೆಲ್ಲಿಸುವ ಮೂಲಕ ತಮ್ಮ ಶಕ್ತಿ, ಪಾರಮ್ಯ ಏನು ಎಂಬುದನ್ನ ಜಗಜ್ಜಾಹೀರುಗೊಳಿಸಲು ಮತ್ತು ದಾವಣಗೆರೆ ಉತ್ತರದಲ್ಲಿ ಖದರ್‌…. ಇದೆ. ಸೋತ ಮಾತ್ರಕ್ಕೆ ತಮ್ಮ ಪ್ರಭಾವ ಕಡಿಮೆ ಆಗಿಲ್ಲ ಎಂದು ತೋರಿಸಲು ಸ್ವತಃ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಕಾಲಿಗೆ ಚಕ್ರ ಕಟ್ಟಿಕೊಂಡಿರುವಂತೆ ಭಾರೀ ಪ್ರಚಾರ ನಡೆಸಿದ್ದರು.

ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ ಹೆಚ್ಚಿನ ಮತಗಳು ಮಾತ್ರವಲ್ಲ ಲೀಡ್‌ ಪಡೆದೇ ತೀರುತ್ತಾರೆ ಎಂಬ ಲೆಕ್ಕಾಚಾರ ಇತ್ತು. ಆದರೆ, ಮತದಾರರು ಬಿಜೆಪಿಯತ್ತ ಭಾರೀ ಒಲವು ತೋರಿದ್ದಲ್ಲದೆ ಭರ್ಜರಿ ಲೀಡ್‌ ಸಹ ನೀಡಿದ್ದಾರೆ.

ಈಗ ಬಳ್ಳಾರಿ ಜಿಲ್ಲೆಗೆ ಸೇರಿದ್ದರೂ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯಲ್ಲಿನ ಕೆಲವಾರು ಆಂತರಿಕ ವಿಚಾರ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂದೇ ಊಹಿಸಲಾಗಿತ್ತಾದರೂ ಬಿಜೆಪಿ 22,016 ಲೀಡ್‌ ಪಡೆದಿದೆ. ಜಿ.ಎಂ. ಸಿದ್ದೇಶ್ವರ್‌ 80,779 ಮತ ಪಡೆದಿದ್ದರೆ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ 61,210 ಮತ ಗಳಿಸಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ ಮೂಲ ಹೊನ್ನಾಳಿಯಲ್ಲೂ ಬಿಜೆಪಿ 13,375 ಮತಗಳ ಲೀಡ್‌ ಪಡೆದಿದೆ. ಚನ್ನಯ್ಯ ಒಡೆಯರ್‌ ನಂತರ ಹಿಂದುಳಿದ ಸಮಾಜ ಅಭ್ಯರ್ಥಿಯೊಬ್ಬರು ಕಣದಲ್ಲಿದ್ದಾರೆ ಎನ್ನುವ ಜೊತೆಗೆ ಮಂಜಪ್ಪ ಅವರ ಸಮುದಾಯದ ಮತಗಳು ಹೆಚ್ಚಿರುವುದು, ನಮ್ಮ ತಾಲೂಕಿನವರಿಗೆ ಅವಕಾಶ ನೀಡೋಣ… ಎಂಬ ಮಾತುಗಳು ಪ್ರಬಲವಾಗಿ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ ಹೊನ್ನಾಳಿ ಕ್ಷೇತ್ರದಲ್ಲಿ ಲೀಡ್‌ ಪಡೆದೇ ಪಡೆಯುತ್ತಾರೆ ಎಂದು ಅಂದಾಜಿಸಲಾಗಿತ್ತು.

ಆದರೂ, ಬಿಜೆಪಿ 13,375 ಲೀಡ್‌ ಪಡೆಯುವ ಮೂಲಕ ಹೊನ್ನಾಳಿ ಬಿಜೆಪಿಯ ಭದ್ರಕೋಟೆ ಎಂಬುದು ಸಾಬೀತುಪಡಿಸಿದೆ. ಜಿ.ಎಂ. ಸಿದ್ದೇಶ್ವರ್‌ 79,857 ಮತ ಪಡೆದರೆ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ 66,482 ಮತ ಗಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ನೆಲೆ ಒದಗಿಸಿಕೊಟ್ಟ ಖ್ಯಾತಿಯ ಮಾಯಕೊಂಡ ಮೀಸಲು ಕ್ಷೇತ್ರ ಎಂದಿನಂತೆ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಒಲವು ತೋರಿದೆ. ಜಿ.ಎಂ. ಸಿದ್ದೇಶ್ವರ್‌ 80,955 ಮತಗಳನ್ನ ಪಡೆದಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ 59,534 ಮತ ಗಳಿಸಿದ್ದಾರೆ. ಬಿಜೆಪಿಯ ಜಿ.ಎಂ. ಸಿದ್ದೇಶ್ವರ್‌ಗೆ ಇಲ್ಲಿ 21,421 ಮತಗಳ ಲೀಡ್‌ ದೊರೆತಿದೆ.

ಕಳೆದ ಎರಡು ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಅತೀ ನಿರ್ಣಾಯಕ ಪಾತ್ರ ವಹಿಸಿದ್ದ ಅಡಕೆ ನಾಡು ಚನ್ನಗಿರಿಯಲ್ಲೂ ಕಮಲ… ಕಂಗೊಳಿಸಿದೆ. ಬಿಜೆಪಿ ಅತಿ ನಂಬಿಕೆ ಇಟ್ಟುಕೊಳ್ಳಬಹುದಾದ ಚನ್ನಗಿರಿಯಲ್ಲಿ ಬಿಜೆಪಿ ಈ ಬಾರಿ 19,692 ಮತಗಳ ಲೀಡ್‌ ಗಳಿಸಿದೆ. ಬಿಜೆಪಿಯ ಜಿ.ಎಂ. ಸಿದ್ದೇಶ್ವರ್‌ 79,857 ಮತ ಗಳಿಸಿದರೆ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ 66,482 ಮತ ಗಳಿಸಿದ್ದಾರೆ.

ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರ ಜಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್‌ 72,942 ಮತ ಗಳಿಸಿದ್ದಾರೆ. ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ 56,968 ಮತ ಪಡೆದಿದ್ದಾರೆ. ಜಗಳೂರು ಕ್ಷೇತ್ರದಲ್ಲಿ ಬಿಜೆಪಿಗೆ 15,974 ಮತಗಳ ಲೀಡ್‌ ಸಿಕ್ಕಿದೆ.

ಕಾಂಗ್ರೆಸ್‌ ಶಾಸಕರು ಇರುವ ಎರಡೂ ಕ್ಷೇತ್ರದಲ್ಲಿ ಲೀಡ್‌ ಪಡೆಯುವ ಜೊತೆಗೆ ತನ್ನದೇ ಶಾಸಕರು ಇರುವ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿರುವ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್‌ ಸತತ ನಾಲ್ಕನೇ ಬಾರಿ ಗೆಲ್ಲುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ರಾ. ರವಿಬಾಬು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.