ಫಾಸ್ಟ್‌ ಟ್ಯಾಗ್‌ಗೆ ಸಕಲ ಸಿದ್ಧತೆ

ಈವರೆಗೆ ಶೇ. 30 ವಾಹನಗಳಿಗೆ ಅಳವಡಿಕೆಸುಗಮ ಸಂಚಾರಕ್ಕೆ ಅನುಕೂಲ

Team Udayavani, Nov 30, 2019, 11:15 AM IST

30-November-3

„ರಾ. ರವಿಬಾಬು
ದಾವಣಗೆರೆ:
ಭಾನುವಾರದಿಂದ(ಡಿ.1) ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್‌ (ನಗದು ರಹಿತ ಪ್ರಯಣ) ಸೌಲಭ್ಯಕ್ಕೆ ದಾವಣಗೆರೆ ತಾಲೂಕಿನ ಹೆಬ್ಟಾಳು ಟೋಲ್‌ಗೇಟ್‌ನಲ್ಲಿ ಶೇ.30ರಷ್ಟು ವಾಹನಗಳು ಫಾಸ್ಟ್‌ಟ್ಯಾಗ್‌ ಅಳವಡಿಸಿಕೊಂಡಿವೆ. ದಾವಣಗೆರೆ ಜಿಲ್ಲೆಯಲ್ಲಿ ಈ ಹಿಂದಿನ ರಾಷ್ಟ್ರೀಯ ಹೆದ್ದಾರಿ-4 ಈಗ ರಾಷ್ಟ್ರೀಯ ಹೆದ್ದಾರಿ-48 ಆಗಿ ಪರಿವರ್ತನೆ ಗೊಂಡಿದೆ. ಹೆಬ್ಟಾಳು ಟೋಲ್‌ ಪ್ಲಾಜಾದಲ್ಲಿ ದಿನಕ್ಕೆ ಸರಾಸರಿ 20-25 ಸಾವಿರದಷ್ಟು ವಾಹನ ಸಂಚರಿಸುತ್ತವೆ. ಅವುಗಳಲ್ಲಿ ಈವರೆಗೆ ಶೇ.30 ರಷ್ಟು ವಾಹನಗಳು ಫಾಸ್ಟ್‌ಟ್ಯಾಗ್‌ ಅಳವಡಿಸಿಕೊಂಡಿದ್ದು, ಇನ್ನೂ ಕಾಲಾವಕಾಶ ಇರುವ ಕಾರಣಕ್ಕೆ ಫಾಸ್ಟ್‌ಟ್ಯಾಗ್‌ ಅಳವಡಿಕೊಳ್ಳುವ ವಾಹನಗಳ ಸಂಖ್ಯೆ ಹೆಚ್ಚಾಗಬಹುದು ಎಂಬುದು ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ನಿರೀಕ್ಷೆ.

ಡಿ.1ರ ಭಾನುವಾರದಿಂದ ಫಾಸ್ಟ್‌ಟ್ಯಾಗ್‌ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ ಹೆಬ್ಟಾಳು ಟೋಲ್‌ ಪ್ಲಾಜಾದಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಕಡೆಯ ವಾಹನಗಳಿಗೆ ಪ್ರತ್ಯೇಕವಾಗಿ ಮೂರು ಪಾಯಿಂಟ್‌ ನಲ್ಲಿ ಅವಕಾಶ ಮಾಡಿಕೊಡಲಾಗಿದೆ. ಫಾಸ್ಟ್‌ಟ್ಯಾಗ್‌ ಅಳವಡಿಸಿಕೊಂಡಿರುವ ವಾಹನಗಳು ತಮಗಾಗಿ ನಿಗದಿಪಡಿಸಿರುವ ಪಾಯಿಂಟ್‌ ಮೂಲಕ ಸಂಚರಿಸುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಒಂದೊಮ್ಮೆ ಗೊತ್ತಿದ್ದೂ, ಗೊತ್ತಿಲ್ಲದೆಯೋ ಫಾಸ್ಟ್‌ ಟ್ಯಾಗ್‌ ಅಳವಡಿಸಿಕೊಂಡಿರದ ವಾಹನಗಳು ಫಾಸ್ಟ್‌ಟ್ಯಾಗ್‌ ರೀಡರ್‌ ಪಾಯಿಂಟ್‌ನಲ್ಲಿ ಸಂಚರಿಸಿದರೆ ದುಪ್ಪಟ್ಟು ಟೋಲ್‌ ಶುಲ್ಕ ಪಾವತಿಸಬೇಕಾಗುತ್ತದೆ!. ಆ ಬಗ್ಗೆಯೂ ಟೋಲ್‌ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ.

ಫಾಸ್ಟ್‌ಟ್ಯಾಗ್‌ ಈಗಿನದ್ದಲ್ಲ…!: ಫಾಸ್ಟ್‌ಟ್ಯಾಗ್‌… ಎಂಬುದು ಈಗಿನದ್ದಲ್ಲ. 2007
ರಿಂದಲೂ ಫಾಸ್ಟ್‌ಟ್ಯಾಗ್‌ ಅಳವಡಿಕೆ ನಡೆದಿದೆ. ಆದರೆ, ಕೆಲವಾರು ಕಾರಣಗಳಿಂದ ಜಾರಿಗೆ ಬಂದಿರಲಿಲ್ಲ. ಇ-ಆಡಳಿತದ ಮೂಲಕ ಫಾಸ್ಟ್‌ಟ್ಯಾಗ್‌ ಅಳವಡಿಕೆಗೆ ಸಾಮಾನ್ಯ ಸೇವಾ ಕೇಂದ್ರಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ಕೆಲ ಸಮಯದ ನಂತರ ವಾಹನಗಳ ಶೋರೂಂನವರಿಗೆ ಅವಕಾಶ ಮಾಡಿಕೊಡಲಾಯಿತು. ನಿರೀಕ್ಷಿತ ಪ್ರಮಾಣದ ಪ್ರಗತಿ ಸಾಧ್ಯವಾಗಲಿಲ್ಲ. ಸಾಕಷ್ಟು ಹೋರಾಟದ ನಂತರ ಈಗ ಸಾಮಾನ್ಯ ಸೇವಾ ಕೇಂದ್ರಗಳಿಗೆ ಅವಕಾಶ ನೀಡಲಾಗಿದೆ. ಸಾಮಾನ್ಯ ಸೇವಾ ಕೇಂದ್ರಗಳಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಗೆ ಅವಕಾಶ ನೀಡುವುದರಿಂದ ಸಾಕಷ್ಟು ಅನುಕೂಲ ಆಗುತ್ತದೆ. ಸ್ಥಳೀಯರೇ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇರುವುದರಿಂದ ವಾಹನ ಮಾಲಿಕರಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಗೆ ಅನುಕೂಲ ಆಗುತ್ತದೆ. ಯಾವುದೇ ಸಂದರ್ಭದಲ್ಲಾದರೂ ರೀಚಾರ್ಜ್‌ ಮಾಡಿಸಿಕೊಳ್ಳಬಹುದು. ಅಲ್ಲದೆ ವಾಹನ ಮಾಲೀಕರು ನೇರ ಸಂಪರ್ಕಕ್ಕೆ ಬರುವುದರಿಂದ ಫಾಸ್ಟ್‌ಟ್ಯಾಗ್‌ ಬಗ್ಗೆ ಮಾಹಿತಿ, ಅನುಕೂಲ… ಎಲ್ಲವನ್ನೂ ತಿಳಿಸುವ ಮೂಲಕ ಸರ್ಕಾರದ ಯೋಜನೆ ಜಾರಿಗೆ ಬರಲು ನೆರವು ಆಗುತ್ತದೆ ಎನ್ನುತ್ತಾರೆ ಸಾಮಾನ್ಯ ಸೇವಾ ಕೇಂದ್ರದ ಎಂ.ಜಿ. ಶ್ರೀಕಾಂತ್‌.

ಉಚಿತ ಅಲ್ಲವೇ ಅಲ್ಲ: ದಾವಣಗೆರೆಯಲ್ಲಿ ಖಾಸಗಿ ಬ್ಯಾಂಕ್‌ ಜೊತೆಗೆ ಎರಡು ಸಾಮಾನ್ಯ ಸೇವಾ ಕೇಂದ್ರಗಳಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಗೆ ಅವಕಾಶ ನೀಡಲಾಗಿದೆ. ಪ್ರತಿ ನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಮಾಲೀಕರು ಫಾಸ್ಟ್‌ಟ್ಯಾಗ್‌ ಅಳವಡಿಕೆಗೆ ಮುಂದೆ ಬರುತ್ತಿದ್ದಾರೆ. ಈಚೆಗೆ ಮನೆ ಮನೆಗೆ ತೆರಳಿ ಫಾಸ್ಟ್‌ಟ್ಯಾಗ್‌ ಸೌಲಭ್ಯ ಒದಗಿಸಲಾಗುತ್ತಿದೆ. ಅನೇಕ ವಾಹನ ಮಾಲಿಕರು ಫಾಸ್ಟ್‌ಟ್ಯಾಗ್‌ ಉಚಿತ ಎಂದೇ ಭಾವಿಸಿದ್ದಾರೆ. ಫಾಸ್ಟ್‌ಟ್ಯಾಗ್‌ ಉಚಿತವಲ್ಲ. ಕ್ಲಾಸ್‌-1, ಕ್ಲಾಸ್‌-2, ಕ್ಲಾಸ್‌-3, ಕ್ಲಾಸ್‌-4, ಕ್ಲಾಸ್‌-5, 2, 3ಆ್ಯಕ್ಸೆಲ್‌, 16 ವ್ಹೀಲ್‌…
ಎಲ್‌ಎಂವಿ, ಎಲ್‌ಎಂಜಿ… ಹೀಗೆ ಪ್ರತಿಯೊಂದು ವಾಹನಕ್ಕೆ ನಿಗದಿಪಡಿಸಿರುವ ಫಾಸ್ಟ್‌ಟ್ಯಾಗ್‌ ದರ ಪ್ರತ್ಯೇಕವಾಗಿ ಪಾವತಿಸಿ, ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಅಳವಡಿಸಿಕೊಳ್ಳಬೇಕು.

ಫಾಸ್ಟ್‌ಟ್ಯಾಗ್‌ ಏಕೆ…?: ಯಾವುದೇ ಟೋಲ್‌ಗ‌ಳಲ್ಲಿ ಟೋಲ್‌ ಕಟ್ಟಲು ಗಂಟೆಗಟ್ಟಲೆ ಕಾಯಬೇಕಾದ ಅಗತ್ಯವೇ ಇಲ್ಲ. ಟೋಲ್‌ ಬಂದಾಕ್ಷಣ ಹಣಕ್ಕಾಗಿ ಹುಡುಕಾಟದ ಪ್ರಮೇಯವೇ ಬೀಳೊಲ್ಲ. ಚಿಲ್ಲರೆ ಮತ್ತೂಂದರ ಕಿರಿಕಿರಿ ಇರುವುದೇ ಇಲ್ಲ. ಟೋಲ್‌ನಲ್ಲೂ ಮುಕ್ತವಾಗಿ ಸಂಚಾರಕ್ಕೆ ಅವಕಾಶ. ನಗದುರಹಿತ ಪ್ರಯಾಣ ಸೌಲಭ್ಯಕ್ಕೆ ವಾಹನಗಳಲ್ಲಿ ಕಡ್ಡಾಯವಾಗಿ ಫಾಸ್ಟ್‌ಟ್ಯಾಗ್‌ ಅಳವಡಿಸಿರಲೇಬೇಕು. ಬ್ಯಾಂಕ್‌ ಖಾತೆಯಲ್ಲಿ ಹಣವಂತೂ ಇರಲೇಬೇಕು.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

18

Benjana Padavu: ನೇಣು ಬಿಗಿದು ಆತ್ಮಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.