ಪಾಕ್‌ ಭಾರತಕ್ಕೆ ಸೇರಿದಾಗಲೇ ಸಂಪೂರ್ಣ ನೆಮ್ಮದಿ

ಪರಿಚ್ಛೇದ 370 ರದ್ಧತಿಯಿಂದ ದಶಕಗಳ ಕನಸು ಸಾಕಾರ•ಏಕರೂಪ ನಾಗರಿಕ ಸಂಹಿತೆ ಮುಂದಿನ ಗುರಿ

Team Udayavani, Sep 20, 2019, 11:19 AM IST

20-Sepctember-3

ದಾವಣಗೆರೆ:ರೇಣುಕ ಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಒಂದು ದೇಶ ಒಂದು ಸಂವಿಧಾನ ವಿಚಾರ ಸಂಕಿರಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಉದ್ಘಾಟಿಸಿದರು.

ದಾವಣಗೆರೆ: ಪಾಕ್‌ ಆಕ್ರಮಿತ ಕಾಶ್ಮೀರವಲ್ಲ, ಇಡೀ ಪಾಕಿಸ್ತಾನ ಭಾರತಕ್ಕೆ ಸೇರಿದಾಗಲೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿ ಸ್ವರ್ಗದಲ್ಲಿರುವ ದೇಶಪ್ರೇಮಿಗಳ ಆತ್ಮಕ್ಕೆ ಸಂಪೂರ್ಣ ಶಾಂತಿ ಸಿಗಲಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ನಗರದಲ್ಲಿ ಗುರುವಾರ ಜಿಲ್ಲಾ ಬಿಜೆಪಿ ಘಟಕ ಆಯೋಜಿಸಿದ್ದ ಪರಿಚ್ಛೇದ 370 ರದ್ದತಿ, ಒಂದು ದೇಶ-ಒಂದು ಸಂವಿಧಾನ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿದ್ದ ಪರಿಚ್ಛೇದ 370 ರದ್ದತಿಯಿಂದ ದೇಶಪ್ರೇಮಿಗಳ 70 ವರ್ಷಗಳ ಕನಸು ನನಸಾಗಿದೆ. ಈ ಮಹತ್ಕಾರ್ಯಕ್ಕಾಗಿ ಹೋರಾಡಿ, ಪ್ರಾಣ ತ್ಯಾಗ ಮಾಡಿ ಸ್ವರ್ಗದಲ್ಲಿರುವ ಡಾ|ಶ್ಯಾಮಪ್ರಸಾದ ಮುಖರ್ಜಿ, ಪಂಡಿತ್‌ ದೀನ್‌ದಯಾಳ ಉಪಾಧ್ಯಾಯ ಸೇರಿದಂತೆ ಅನೇಕ ದೇಶಪ್ರೇಮಿಗಳ ಆತ್ಮಕ್ಕೆ ಒಂದಿಷ್ಟು ನೆಮ್ಮದಿ ಸಿಕ್ಕಿದೆ ಎಂದರು.

ಈವರೆಗೂ ದೇಶಕ್ಕೊಂದು ಸಂವಿಧಾನವಿದ್ದರೆ, ಅದು ಕಾಶ್ಮೀರಕ್ಕೆ ಅನ್ವಯಿಸುತ್ತಿರಲಿಲ್ಲ. ಹಲವು ದಶಕಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್‌ ಪಕ್ಷ ಭಾರತ ಹಾಗೂ ಕಾಶ್ಮೀರವನ್ನು ಬೇರೆ ಬೇರೆಯಾಗಿಸಿತ್ತು. ದೇಶದ ಎಲ್ಲಾ ರಾಜ್ಯಗಳಿಗೂ ಒಂದು ಕಾನೂನಾದರೆ ಕಾಶ್ಮೀರಕ್ಕೆ ಬೇರೆ ಕಾನೂನುಗಳಿದ್ದವು. 70 ವರ್ಷಗಳಲ್ಲಿ ದೇಶದಲ್ಲಿ ಹಲವು ಪ್ರಧಾನ ಮಂತ್ರಿಗಳು ಬಂದು ಹೋದರೂ ಯಾರೂ ಸಹ ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಹಾಕಲು ಮುಂದಾಗಲಿಲ್ಲ. ಆದರೆ, ಗಂಡುಗಲಿ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಪರಿಚ್ಛೇದ 370 ಕಿತ್ತು ಹಾಕಿ, ಹಲವು ವರ್ಷಗಳ ಕನಸು ಸಾಕಾರಗೊಳಿಸಿದ್ದಾರೆ. ಈ ಮಹತ್ಕಾರ್ಯಕ್ಕೆ ಕಾರಣರಾದ ಕೇಂದ್ರದ ಗೃಹಮಂತ್ರಿ ಅಮಿತ್‌ ಶಾ, ಸ್ವಾತಂತ್ರ್ಯ ನಂತರ ದೇಶದ ಮೊದಲ ಗೃಹಮಂತ್ರಿಯಾಗಿದ್ದ ಸರ್ದಾರ ವಲ್ಲಭಭಾಯ್‌ ಪಟೇಲರಂತೆ ಕಠಿಣ ನಿರ್ಧಾರ ಕೈಗೊಳ್ಳುವಲ್ಲಿ ಕಾರಣೀಭೂತರಾಗಿದ್ದಾರೆ ಎಂದು ಬಣ್ಣಿಸಿದರು.

ಕಾಶ್ಮೀರದಲ್ಲಿ ಪರಿಚ್ಛೇದ 370 ರದ್ದು ಮಾಡಿದಲ್ಲಿ ರಕ್ತಪಾತವಾಗಲಿದೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದರು. ಆದರೆ ಮೋದಿ-ಶಾ ಆ ಪರಿಚ್ಛೇದ ತೆಗೆದು ಹಾಕಿದ ನಂತರ ಇಡೀ ಭಾರತ ಒಂದಾಯಿತು. ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಭಾರತೀಯರಾಗಬೇಕು. ಎಲ್ಲರಿಗೂ ಒಂದೇ ಕಾನೂನು ಇರಬೇಕು. ಇಡೀ ಭಾರತವೇ ಒಂದು ಎಂದಾಗಲು ಏಕರೂಪ ನಾಗರಿಕ ಸಂಹಿತೆ ಜಾರಿಯೇ ಕೇಂದ್ರ ಸರ್ಕಾರದ ಮುಂದಿನ ಗುರಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಪ್ರಖರ ಹಿಂದುತ್ವವಾದಿ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕನಸು ನನಸು ಮಾಡಲು ರಾಜಕೀಯಕ್ಕೆ ಬಂದಿದ್ದಾರೆ. ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸು ಸಾಕಾರಕ್ಕೆ ಮೋದಿ ಮುಂದಾಗಿದ್ದಾರೆ. ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಒಂದೇ ಕಾನೂನು ಜಾರಿ ಮಾಡಲಿದ್ದಾರೆ ಎಂದು ಅವರು ಹೇಳಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಮಾತನಾಡಿ, ಕಾಶ್ಮೀರದಲ್ಲಿನ ಪರಿಚ್ಛೇದ 370 ರದ್ದತಿ ಹಿನ್ನೆಲೆ ವಿವರಿಸಿದರು. ಇದಕ್ಕೂ ಮುನ್ನ ಕಾಶ್ಮೀರದ ಹಿಂದಿನ ರಾಜಕೀಯ ಇತಿಹಾಸ ಬಗ್ಗೆ ಕಿರುಚಿತ್ರ ಪ್ರದರ್ಶಿಸಲಾಯಿತು. ಇದೇ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಾಗೂ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಸಂಸದ ಜಿ.ಎಂ.ಸಿದ್ದೇಶ್ವರ್‌, ಶಾಸಕರಾದ ಎಸ್‌.ಎ.ರವೀಂದ್ರನಾಥ್‌, ಪ್ರೊ|ಎನ್‌.ಲಿಂಗಣ್ಣ, ಎಸ್‌.ವಿ.ರಾಮಚಂದ್ರ, ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಜಿಪಂ ಅಧ್ಯಕ್ಷೆ ಶೈಲಜಾ ಬಸವರಾಜ್‌, ಉಪಾಧ್ಯಕ್ಷ ಸುರೇಂದ್ರ ನಾಯ್ಕ, ‘ಒಂದು ದೇಶ-ಒಂದು ಸಂವಿಧಾನ’ ಕಾರ್ಯಕ್ರಮ ರಾಜ್ಯ ಸಂಚಾಲಕ ಡಾ| ರಮೇಶಕುಮಾರ್‌ ಇನ್ನಿತರರು ಉಪಸ್ಥಿತರಿದ್ದರು. ಜಿಪಂ ಸದಸ್ಯ ಬಿ.ಎಂ.ವಾಗೀಶಸ್ವಾಮಿ ಸ್ವಾಗತಿಸಿದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.