ನಗರದಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಾಣವಾಗಲಿ

ರೈಲ್ವೆ ಹಳಿ ಬಳಿ ನಿರ್ಮಿಸಲಾಗಿರುವ ಜಿಲ್ಲಾ ರಂಗಮಂದಿರವು ನಯಾ ಪೈಸೆಗೂ ಯೋಗ್ಯವಿಲ್ಲ

Team Udayavani, Apr 10, 2019, 1:21 PM IST

10-April-15

ದಾವಣಗೆರೆ: ಶಿವಸಂಚಾರ ನಾಟಕೋತ್ಸವ-19ರ ಸಮಾರೋಪ ಕಾರ್ಯಕ್ರಮದಲ್ಲಿ ಹಿರಿಯ ರಂಗತಜ್ಞ ಬಸವಲಿಂಗಯ್ಯ ಮಾತನಾಡಿದರು.

ದಾವಣಗೆರೆ: ರಂಗಭೂಮಿಗೆ ಹೆಸರಾದ ದಾವಣಗೆರೆಯಲ್ಲಿ ಜನಪ್ರತಿನಿಧಿಗಳು, ದಾನಿಗಳ ಸಹಕಾರದಿಂದ ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಎಲ್ಲಾ ಹಿರಿಯ ನಾಗರಿಕರು
ಒತ್ತಾಯಿಸಿ ಎಂದು ಹಿರಿಯ ರಂಗತಜ್ಞ ಬಸವಲಿಂಗಯ್ಯ ಸಲಹೆ ನೀಡಿದರು.

ವಿದ್ಯಾನಗರದ ಕಾವ್ಯ ಮಂಟಪದಲ್ಲಿ ಮಂಗಳವಾರ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ಹಾಗೂ ಗ್ರಂಥ ಸರಸ್ವತಿ ಪ್ರತಿಭಾರಂಗ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ
ಶಿವಸಂಚಾರ ನಾಟಕೋತ್ಸವ-19ರ ಸಮಾರೋಪ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ದಾವಣಗೆರೆಯ ಅರುಣಾ ಚಿತ್ರಮಂದಿರ ಸಮೀಪದ ರೈಲ್ವೆಹಳಿ ಬಳಿ ಈಗಾಗಲೇ
ನಿರ್ಮಿಸಲಾಗಿರುವ ಜಿಲ್ಲಾ ರಂಗ ಮಂದಿರವು ನಾಟಕ ಪ್ರದರ್ಶಕ್ಕೆ ಅಗತ್ಯವಿರುವ ಸೂಕ್ತ ವಾತಾವರಣವನ್ನು ಹೊಂದಿಲ್ಲ. ಅದರ
ನಿರ್ಮಾಣಕ್ಕೆ ಬಳಸಿದ ಮಾನವ ಶಕ್ತಿ ಹಾಗೂ ಹಣ ಎಲ್ಲವೂ ವ್ಯರ್ಥವಾಗಿದ್ದು, ನಯಾ ಪೈಸೆಗೂ ಯೋಗ್ಯವಿಲ್ಲ. ಅದು ಕೇವಲ ಶಾದಿಮಹಲ್‌ ನಂತಿದೆ. ಅಲ್ಲಿ ಕೇವಲ ಮದುವೆ ಮುಂತಾದ
ಕಾರ್ಯಕ್ರಮಗಳನ್ನು ಮಾಡಬಹುದು ವಿನಃ ಉತ್ತಮ ನಾಟಕ ಪ್ರದರ್ಶನ ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈಗಿರುವ ಜಿಲ್ಲಾ ರಂಗಮಂದಿರ ನಾಟಕ ಪ್ರದರ್ಶನಕ್ಕೆ ಸೂಕ್ತವಾಗಿರದ ಕಾರಣ ನಗರದ ಹಿರಿಯ ನಾಗರಿಕರು ಸಂಸದರ 25ಕೋಟಿ ಅನುದಾನದಲ್ಲಿ 5ಕೋಟಿ ಅನುದಾನ ಕೇಳಿ.
ಇತರೆ ದಾನಿಗಳ ಮೊರೆ ಹೋಗಿ. ನಾಟಕ ಪ್ರದರ್ಶನಕ್ಕೆ ಬೇಕಾದ ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಎಂದರು.

ರಾಜಕೀಯ, ವಾಣಿಜ್ಯವಾಗಿ ದಾವಣಗೆರೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಆದರೆ ಸಾಂಸ್ಕೃತಿಕವಾಗಿ ಬಡವಾಗಿದೆ. ದೇಶದಲ್ಲಿ ಯಾವ ಇಲಾಖೆಗೂ ಸಿಗದಷ್ಟು ಅನುದಾನ ರಾಜ್ಯದ ಕನ್ನಡ ಸಂಸ್ಕೃತಿ ಇಲಾಖೆಗೆ ದೊರೆಯುತ್ತಿದೆ. ಅದು ಕಲಾವಿದರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಇನ್ನಷ್ಟು ಸದ್ಬಳಕೆ ಆಗಬೇಕು ಎಂದರು.

ಸಾಣೇಹಳ್ಳಿ ಶಿವಸಂಚಾರ ರಂಗ ತಂಡವು ದೇಶದುದ್ದಕ್ಕೂ ಉತ್ತಮ ಸಾಮಾಜಿಕ, ಪೌರಾಣಿಕ ನಾಟಕಗಳನ್ನು ಪ್ರದರ್ಶಿಸುತ್ತಿದ್ದು,
ಅಂತಹ ನಾಟಕಗಳನ್ನು ಇಂತಹ ಸಾರ್ವಜನಿಕರ ಬಳಕೆಯ ಪಾರ್ಕ್‌ನ ಕಾವ್ಯ ಮಂಟಪದಲ್ಲಿ ಪ್ರದರ್ಶನ ಮಾಡುವುದು ಕಲಾವಿದರಿಗೆ ಮಾಡುವ ಅವಮಾನ. ಈ ಹಿನ್ನೆಲೆಯಲ್ಲಿ ಹಿರಿಯ
ನಾಗರಿಕರು ದಾವಣಗೆರೆಯಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಮುಂದಾಗಿ ಬಸವಲಿಂಗಯ್ಯ ಒತ್ತಾಯಿಸಿದರು.

ಸಾಹಿತಿ ಬಾ.ಮಾ. ಬಸವರಾಜಯ್ಯ ಮಾತನಾಡಿ, ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘದ ಶಿವಸಂಚಾರ ರಂಗತಂಡವು
ರಾಷ್ಟ್ರವ್ಯಾಪಿ ಮನರಂಜನೆ ಜೊತೆ ಜೊತೆಗೆ ಜನರಲ್ಲಿ ಪ್ರಜ್ಞಾವಂತಿಕೆ, ವೈಚಾರಿಕ ಮನೋಭಾವ ಬಿತ್ತುವ ಅವಿಸ್ಮರಣೀಯ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಸಾಣೇಹಳ್ಳಿಯ ಪೀಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ರಚಿಸಿದ ಗುರುಮಾತೆ ಅಕ್ಕನಾಗಲಾಂಬಿಕೆ ನಾಟಕವನ್ನು ಶಿವಸಂಚಾರ ತಂಡದ ಕಲಾವಿದರು ಪ್ರದರ್ಶನ ಮಾಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್‌.ಟಿ. ಮಂಜುನಾಥ್‌, ಪ್ರತಿಮಾ ಸಭಾ ಅಧ್ಯಕ್ಷ ಎಸ್‌. ಹಾಲಪ್ಪ ಉಪಸ್ಥಿತರಿದ್ದರು. ಡಾ| ಶಿವಕುಮಾರ ಕುರ್ಕಿ ಕಾರ್ಯಕ್ರಮ ನಿರೂಪಿಸಿದರು.

ಸಾಮಾಜಿಕ ಪಿಡುಗುಗಳ ಜಾಗೃತಿ ಹೆಚ್ಚಾಗಲಿ ವೈಚಾರಿಕ ಮತ್ತು ಪೌರಾಣಿಕ ನಾಟಕ ಪ್ರದರ್ಶನಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದು, ಇದರ ಜೊತೆ ಜೊತೆಗೆ ಸಮಾಜದಲ್ಲಿ ವ್ಯಾಪಕವಾಗಿ
ಬೇರೂರಿರುವ ಬಾಲ್ಯವಿವಾಹ, ವರದಕ್ಷಿಣೆ, ಭ್ರೂಣಹತ್ಯೆಯಂತಹ
ಸಾಮಾಜಿಕ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ರಂಗ ತಂಡಗಳು ಮಾಡಬೇಕು. ಆಗ ಸಮಾಜದಲ್ಲಿನ ಶೋಷಣೆ ನಿವಾರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ
ನ್ಯಾಯಾಧೀಶ ಅಂಬಾದಾಸ್‌ ಕುಲಕರ್ಣಿ ಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.