ತಾನೇ ಉತ್ಪಾದಿಸುವ ತಂಬಾಕಿಗೆ ಮನುಷ್ಯ ಬಲಿ

ಡಾ| ರಾಜೇಶ್ವರಿ ಅಣ್ಣಿಗೇರಿ ವಿಷಾದಮಾಧ್ಯಮಗಳು ಮಾಡುತ್ತಿವೆ ತಂಬಾಕು ಬಳಕೆ ಪ್ರೇರೇಪಣೆ

Team Udayavani, Dec 13, 2019, 11:48 AM IST

13-December-5

ದಾವಣಗೆರೆ: ಮನುಷ್ಯ ಉತ್ಪಾದಿಸುವ ತಂಬಾಕು ಇಂದು ಆತನನ್ನೇ ಬಲಿ ಪಡೆಯುತ್ತಿದೆ. ತಂಬಾಕನ್ನು ವಿವಿಧ ರೀತಿಯಲ್ಲಿ ಬಳಸಿಕೊಳ್ಳುವುದರ ಮೂಲಕ ಮನುಷ್ಯ ಅದರ ದಾಸನಾಗುತ್ತಿದ್ದಾನೆ ಎಂದು ಓರಲ್‌ ಮೆಡಿಸಿನ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ನ ಓರಲ್‌ ಮೆಡಿಸಿನ್‌ ವಿಭಾಗದ ಮುಖ್ಯಸ್ಥೆ ಡಾ| ರಾಜೇಶ್ವರಿ ಅಣ್ಣಿಗೇರಿ ವಿಷಾದಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್‌ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ಗುರುವಾರ ಚೇತನಾ ಹೊಟೇಲ್‌ ಸಭಾ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕೋಟಾ³ ಕಾನೂನು ಅನುಷ್ಠಾನ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ, ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ದಿನಗಳಲ್ಲಿ ಯುವಜನಾಂಗ ತಂಬಾಕಿಗೆ ದಾಸಾರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪೂರ್ವಜರು ಆರಂಭಿಸಿದ ತಂಬಾಕು ಬೆಳೆ ಇಂದು ನಮ್ಮೆಲ್ಲರ ಆರೋಗ್ಯಕ್ಕೆ ಹಾನಿಕಾರಕ ಉತ್ಪನ್ನವಾಗಿ ಪರಿಣಮಿಸುತ್ತಿದೆ ಎಂದರು.

ತಂಬಾಕು ಉತ್ಪನ್ನವು 17ನೇ ಶತಮಾನದಲ್ಲಿ ಭಾರತಕ್ಕೆ ಪರಿಚಯವಾಯಿತು. ಅಂದಿನಿಂದಲೂ ಸಮಾಜದ ಎಲ್ಲಾ ವರ್ಗದ ಜನ ತಂಬಾಕು ಬಳಸುತ್ತಿದ್ದಾರೆ. ತಂಬಾಕಿನಲ್ಲಿ ನಿಕೋಟಿನ್‌ ಎಂಬ ರಾಸಾಯನಿಕ ಅಂಶವಿದ್ದು, ಇದು ದೇಹದೊಳಗೆ ಸೇರಿಕೊಂಡು ನಶೆ ಉಂಟು ಮಾಡಿ ತಾತ್ಕಾಲಿಕ ಖುಷಿ ನೀಡುವ ಕಾರಣದಿಂದಾಗಿ ತಂಬಾಕು ಉತ್ಪನ್ನಗಳನ್ನು ಬಳಸುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ತಂಬಾಕಿನಿಂದ ಗುಟ್ಕಾ, ಸಿಗರೇಟ್‌ ಹಾಗೂ ಇತರೆ ಮಾದಕ ದ್ರವ್ಯಗಳನ್ನು ತಯಾರಿಸಲಾಗುತ್ತದೆ. ಆರಂಭದಲ್ಲಿ ಜನರು ತಮ್ಮ ಜೀವನದ ಒತ್ತಡಗಳಿಂದ ಮುಕ್ತಿ ಹೊಂದಲು ಇಂತಹ ಉತ್ಪನ್ನಗಳ ಸೇವನೆಯನ್ನು ಅಭ್ಯಾಸ ಮಾಡಿಕೊಳ್ಳುತ್ತಾರೆ. ಆದರೆ ಕ್ರಮೇಣ ತಂಬಾಕಿನ ನಶೆ ರೂಢಿಯಾಗಿ ಆ ಉತ್ಪನ್ನವಿಲ್ಲದೇ ತಾವು ಬದುಕಲು ಸಾಧ್ಯವೇ ಇಲ್ಲ ಎನ್ನುವಷ್ಟರ ಮಟ್ಟಿಗೆ ದುಶ್ಚಟಕ್ಕೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.

ಪ್ರಸ್ತುತ ದಿನಗಳಲ್ಲಿ ಮಾಧ್ಯಮಗಳು ತಂಬಾಕು ಬಳಕೆಯನ್ನು ಪ್ರೇರೇಪಿಸುವಂತಹ ಕೆಲಸ ಮಾಡುತ್ತಿವೆ. ಮಾಧ್ಯಮಗಳಲ್ಲಿ ಬಿತ್ತರಿಸುವ ಜಾಹೀರಾತುಗಳು, ಚಲನಚಿತ್ರಗಳಲ್ಲಿ ಧೂಮಪಾನ ಮತ್ತು ಮದ್ಯಪಾನ ಯುವಜನರಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ಆಸಕ್ತಿ ಮೂಡಿಸುತ್ತಿವೆ. ಗುಟ್ಕಾ ಮನಷ್ಯರ ಮನಸ್ಸಿನ ಮೇಲೆಯೇ ಹಿಡಿತ ಸಾ ಧಿಸುವ ಹಂತಕ್ಕೆ ಬಂದಿದೆ.

ಒಂದು ಗುಟ್ಕಾ ಪ್ಯಾಕೆಟ್‌ನಲ್ಲಿ ಸುಮಾರು ಮೂರು ಸಾವಿರ ರಾಸಾಯನಿಕಗಳಿರುತ್ತವೆ. ಇವು ದೇಹದಲ್ಲಿ ಸೇರಿಕೊಂಡು ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಗುಟ್ಕಾ ಹಾಗೂ ಸಿಗರೇಟ್‌ ಸೇವನೆಯಿಂದ ಕೇವಲ ಆ ವ್ಯಕ್ತಿಗೆ ಮಾತ್ರವಲ್ಲದೇ ಅವನ ಸುತ್ತಮುತ್ತ ಇರುವ ವ್ಯಕ್ತಿಗಳ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದನ್ನು ಅವರು ವಿವರಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ತಂಬಾಕು ಉತ್ಪನ್ನಗಳ ಬಳಕೆಯಿಂದಾಗಿ ಅನೇಕ ಮಂದಿ ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹವರಿಗೆ ತಂಬಾಕು ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿವಳಿಕೆ ಮೂಡಿಸುವ ಕಾರ್ಯವಾಗಬೇಕು ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸೋಣ ಎಂದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ನಾವು ತಂಬಾಕು ನಿರ್ಮೂಲನೆ ಬಗ್ಗೆ ಮಾತನಾಡಿದರೆ ಸಾಲದು. ಅದಕ್ಕಾಗಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಉತ್ಸಾಹ ಮತ್ತು ಕಾಳಜಿ ವಹಿಸಿ ಕೆಲಸ ಮಾಡಬೇಕು.

ಶಾಲಾ, ಕಾಲೇಜು ವಲಯಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕಿನ ದುಷ್ಪರಿಣಾಮದ ಬಗ್ಗೆ ಪೋಸ್ಟರ್‌ ಅಳವಡಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಿ, ಅಳವಡಿಸದೇ ಇರುವರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಬೇಕು. ಡೆಂಟಲ್‌ ಕಾಲೇಜು ರಸ್ತೆಯುದ್ದಕ್ಕೂ ಇರುವ ಅಂಗಡಿಗಳಲ್ಲಿ ತಂಬಾಕು ದುಷ್ಪರಿಣಾಮ ತೋರುವ ಪೋಸ್ಟರ್‌ ಇಲ್ಲ. ಈ ನಿಟ್ಟಿನಲ್ಲಿ ಕೋಟಾ³ ಕಾಯ್ದೆಯಡಿ ಡಿ.31 ರೊಳಗೆ ಕನಿಷ್ಠ 20 ಕೇಸ್‌ ದಾಖಲಿಸುವಂತೆ ಸೂಚಿಸಿದರು.

ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ ಉಳ್ಳಾಗಡ್ಡಿ ಕೋಟ್ಪಾ ಕಾಯ್ದೆಯ ಕಲಂ 4, 5, 6 ಮತ್ತು 7ರ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಎಚ್‌.ವಿಜಯ್‌ ಕುಮಾರ್‌, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಗಂಗಾಧರ್‌, ತಾಲೂಕುಗಳ ತಹಶೀಲ್ದಾರರು, ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು, ವೈದ್ಯರು ಕಾರ್ಯಕ್ರಮದಲ್ಲಿದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.