ವಾರ್ಡ್‌ ಸಮಿತಿ ರಚನೆಗೆ ಪಿಐಎಲ್‌ ಸಲ್ಲಿಸಲು ನಿರ್ಧಾರ


Team Udayavani, Mar 25, 2019, 12:15 PM IST

highcourt2

ಬೆಂಗಳೂರು: ಸಂವಿಧಾನದ 74ನೇ ತಿದ್ದುಪಡಿಗೆ ಅನುಗುಣವಾಗಿ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವಾರ್ಡ್‌ ಸಮಿತಿ ರಚನೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲು ಹಲವು ಸಂಘಟನೆಗಳು ಸಿದ್ಧತೆ ನಡೆಸಿವೆ.

ಸಿವಿಕ್‌ ಬೆಂಗಳೂರು, ಇನ್‌ಸ್ಟಿಟ್ಯೂಟ್‌ ಆಫ್ ಪಬ್ಲಿಕ್‌ ಪಾಲಿಸಿ (ಎನ್‌ಎಲ್‌ಎಸ್‌ಐಯು) ಹಾಗೂ ನಾಗರಿಕ ಸಾಕ್ಷಿ ಸಂಘಟನೆಗಳಿಂದ ಭಾನುವಾರ ನಾಗರಬಾವಿಯ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಹಮ್ಮಿಕೊಂಡಿದ್ದ “ಸಂವಿಧಾನದ 74ನೇ ತಿದ್ದುಪಡಿ: ಸ್ಥಿತಿಗತಿ ಹಾಗೂ ಮುನ್ನೋಟ’ ವಿಷಯ ಕುರಿತ ಸಮಾಲೋಚನಾ ಸಭೆಯಲ್ಲಿ ವಿವಿಧ ಮಹಾನಗರ ಪಾಲಿಕೆಗಳಲ್ಲಿ 74ನೇ ತಿದ್ದುಪಡಿ ಅನುಷ್ಠಾನವಾಗಿರುವ ಕುರಿತು ಚರ್ಚಿಸಲಾಯಿತು.

ಬೆಂಗಳೂರು ಹೊರತುಪಡಿಸಿ ಉಳಿದ ಯಾವುದೇ ಮಹಾನಗರ ಪಾಲಿಕೆಗಳಲ್ಲಿ ವಾರ್ಡ್‌ ಸಮಿತಿ ರಚಿಸಲು ಸ್ಥಳೀಯ ಸಂಸ್ಥೆಗಳು ಮುಂದಾಗುತ್ತಿಲ್ಲ. ವಾರ್ಡ್‌ ಸಮಿತಿಗಳನ್ನು ರಚಿಸುವಂತೆ ಮೇಯರ್‌ ಹಾಗೂ ಆಯುಕ್ತರಿಗೆ ಮನವಿಗಳನ್ನು ನೀಡಲಾಗಿದೆ. ಆದರೆ, ಜನಪ್ರತಿನಿಧಿಗಳು ಅಧಿಕಾರ ಮೊಟಕುಗೊಳ್ಳುತ್ತದೆ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶವಿರುವುದಿಲ್ಲ ಎಂಬ ಕಾರಣದಿಂದ ಸಮಿತಿ ರಚಿಸುತ್ತಿಲ್ಲ ಎಂದು ಕೆಲವರು ಆರೋಪಿಸಿದರು.

ಸಭೆಯಲ್ಲಿ ಮಾತನಾಡಿದ ನಿವೃತ್ತ ಮುಖ್ಯ ಕಾರ್ಯದರ್ಶಿ ಡಾ.ಎ.ರವೀಂದ್ರನ್‌, ಸಂವಿಧಾನ 74ನೇ ತಿದ್ದುಪಡಿಯಂತೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡಲಾಗಿದೆ. ಜತೆಗೆ ಜಿಲ್ಲಾ ಯೋಜನಾ ಸಮಿತಿ ಹಾಗೂ ನಗರ ಯೋಜನಾ ಸಮಿತಿಗಳನ್ನೂ ರಚಿಸಲಾಗಿದೆ. ಆದರೆ, ಯೋಜನೆ ರೂಪಿಸುವ ಸಾಮರ್ಥಯ ಸ್ಥಳೀಯ ಸಂಸ್ಥೆಗಳಿಗೆ ಇಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಸಾಮರ್ಥಯ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಬೇಕಿದೆ ಎಂದು ಹೇಳಿದರು.

ಕಳೆದ 15 ವರ್ಷಗಳ ಹಿಂದೆ ವಾರ್ಡ್‌ ಕಮಿಟಿಗಳಿಗೆ ಚುನಾವಣೆಯ ಮೂಲಕ ಸದಸ್ಯರನ್ನು ನೇಮಿಸಬೇಕೆಂಬ ವಾದವಿತ್ತು. ಆದರೆ, ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಅದು ಜಾರಿಯಾಗಲಿಲ್ಲ. ಬಜೆಟ್‌ ಮಂಡಿಸುವ ಸಂದರ್ಭದಲ್ಲಿ ಅನುದಾನವನ್ನು ಯಾವ ಯೋಜನೆಗೆ ಬಳಸಬೇಕು, ಯಾವೆಲ್ಲ ಯೋಜನೆಗಳು ವಾರ್ಡ್‌ಗೆ ಬೇಕಾಗಿದೆ ಎಂಬುದನ್ನು ವಾರ್ಡ್‌ ಸಮಿತಿಯಲ್ಲಿ ನಿರ್ಧರಿಸಲು ಅವಕಾಶವಿರುತ್ತದೆ ಎಂದರು ಹೇಳಿದರು.

ವಾರ್ಡ್‌ ಸಮಿತಿಗಳು ವಾರ್ಡ್‌ನಲ್ಲಿ ನಡೆಯುವ ಕಾಮಗಾರಿಗಳ ಮೇಲೆ ನಿಗಾವಹಿಸಬೇಕು. ಹಳೆಯ ಕಲ್ಲು ಹೊಸ ಬಿಲ್ಲುಗಳಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಗ್ರಾಮಾಂತರ ಭಾಗದಲ್ಲಿ ಹೆಚ್ಚಿನ ಹಣ ಹಾಗೂ ಭೂಮಿಗೆ ಬೆಲೆಯಿಲ್ಲ. ಹೀಗಾಗಿ ಸಮಿತಿ ರಚನೆಗೆ ತೊಂದರೆಯಿಲ್ಲ. ಆದರೆ, ನಗರ ಭಾಗದಲ್ಲಿ ಹಣವೂ ಹೆಚ್ಚಾಗಿದ್ದು, ಭೂಮಿಯ ಬೆಲೆಯೂ ಹೆಚ್ಚಾಗಿದೆ. ಹೀಗಾಗಿ ನಮ್ಮ ಅಧಿಕಾರ ಮೊಟಕಾಗುತ್ತದೆ ಎಂಬ ಭಾವನೆ ಜನಪ್ರತಿನಿಧಗಳಲ್ಲಿದೆ ಎಂದರು.

ಸಭೆಯಲ್ಲಿ ಸಿವಿಕ್‌ ಬೆಂಗಳೂರು ಸಂಘಟನೆಯ ಕಾತ್ಯಾಯಿನಿ ಚಾಮರಾಜ್‌, ನಾಗರಿಕ ಸಾಕ್ಷಿ ಸಂಘಟನೆಯ ನರೇಂದ್ರ ಕುಮಾರ್‌, ಮೈಸೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಜಿ.ಆರ್‌.ವಿದ್ಯಾರಣ್ಯ, ಹುಬ್ಬಳ್ಳಿಯ ಸಂತೋಷ್‌, ಕಲಬುರ್ಗಿಯ ಸಿದ್ದುಹಿರೇಮs…, ಬಳ್ಳಾರಿಯ ವಿಜಯಕುಮಾರ್‌ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳಿಗೆ ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

ಸಮಾಲೋಚನಾ ಸಭೆ ನಿರ್ಣಯಗಳು
-ಎಲ್ಲ ಮಹಾನಗರ ಪಾಲಿಕೆಗಳಲ್ಲಿ ವಾರ್ಡ್‌ ಸಮಿತಿ ರಚನೆಗೆ ಪಿಐಎಲ್‌
-ಪಾಲಿಕೆ ಸದಸ್ಯರ ವೀಟೋ ಅಧಿಕಾರ ರದ್ದುಗೊಳಿಸುವುದು
-ಪ್ರತಿ ತಿಂಗಳು ವಾರ್ಡ್‌ ಸಮಿತಿ ಸಭೆಗೆ ದಿನಾಂಕ ನಿಗದಿ
-ಪ್ರತಿ ವಾರ್ಡ್‌ನಲ್ಲಿ ಮಾಹಿತಿ ಕೇಂದ್ರ ಸ್ಥಾಪನೆ
-ಮೂರು ಬಾರಿ ಸಭೆಗೆ ಗೈರಾಗುವ ಪಾಲಿಕೆ ಸದಸ್ಯರ ಅನರ್ಹ
-ವಾರ್ಡ್‌ ಸಮಿತಿ ನಿರ್ಣಯ ಪಾಲಿಸದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಅಧಿಕಾರ
-ಅವಿಶ್ವಾಸ ನಿರ್ಣಯ ಮಂಡಿಸುವ ಅಧಿಕಾರ
-ಕಡ್ಡಾಯವಾಗಿ ಪ್ರಗತಿ ಪರಿಶೀಲನಾ ವರದಿ ಮಂಡನೆ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.