ರಸ್ತೆ-ತಂಗುದಾಣ ದುರಸ್ತಿಗೆ ಆಗ್ರಹ
ಜೇರಬಂಡಿಯಲ್ಲಿ ಭರಪೂರ ಸಮಸ್ಯೆ
Team Udayavani, Apr 28, 2019, 4:37 PM IST
ದೇವದುರ್ಗ: ಪಾಳು ಬಿದ್ದ ಸರ್ಕಾರಿ ಶಾಲೆ, ನಿರ್ವಹಳೆ ಇಲ್ಲದೇ ಪಾಳು ಬಿದ್ದ ಬಸ್ ತಂಗುದಾಣ, ಡಾಂಬರ್ ಕಿತ್ತೋಗಿ ಕಂಕರ್ ಎದ್ದಿರುವ ರಸ್ತೆ ಇವು ತಾಲೂಕಿನ ಜೇರಬಂಡಿ ಗ್ರಾಮದಲ್ಲಿ ಕಂಡುಬರುವ ಸಮಸ್ಯೆ.
ಯರಮಸಾಳ ಗ್ರಾಮದಿಂದ ಚಿಕ್ಕಬೂದೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಎಲ್ಲೆಂದರಲ್ಲಿ ಕಿತ್ತು ಹೋಗಿದೆ. ಯರಮಸಾಳ, ಜೇರಬಂಡಿ, ಚಿಕ್ಕಬೂದೂರು, ಸಲಿಕ್ಯಾಪುರ ಸೇರಿ ಇತರೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದೆ. ವಾಹನ ಸವಾರರು ಅಧಿಕಾರಿ, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಲೇ ಸಂಚರಿಸಬೇಕಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ವಹಣೆ ಮಾಡದ್ದರಿಂದ ದಿನೇದಿನೆ ರಸ್ತೆ ಹಾಳಾಗುತ್ತಿದೆ. ಸರಕಾರ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕೋಟ್ಯಂತರ ರೂ. ವ್ಯಯಿಸುತ್ತಿದೆ. ಆದರೆ ಈ ಗ್ರಾಮಗಳ ರಸ್ತೆ ಮಾತ್ರ ಸುಧಾರಣೆ ಆಗುತ್ತಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಪಾಳು ಬಿದ್ದ ತಂಗುದಾಣ: ಜೇರಬಂಡಿ ಗ್ರಾಮದಲ್ಲಿ ನಿರ್ವಹಣೆ ಇಲ್ಲದೇ ಪ್ರಯಾಣಿಕರ ತಂಗುದಾಣ ಹಾಳಾಗಿದೆ. ಹೀಗಾಗಿ ಗ್ರಾಮಸ್ಥರು ಬಸ್ಗೆ ರಸ್ತೆಯಲ್ಲೇ ಕಾಯುವಂತಾಗಿದೆ.
ಪಾಳು ಬಿದ್ದ ಶಾಲಾ ಕಟ್ಟಡ: ಜೇರಬಂಡಿ ಗ್ರಾಮದ ಹೊರವಲಯದಲ್ಲಿ ನಿರ್ಮಿಸಿದ ಶಾಲಾ ಕಟ್ಟಡ ಪಾಳು ಬಿದ್ದಿದೆೆ. ಶಾಲಾ ಕಟ್ಟಡ ನಿರ್ಮಿಸಲು ಸರಕಾರ ಲಕ್ಷಾಂತರ ರೂ. ವ್ಯಯಿಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಮಕ್ಕಳ ಕಲಿಕೆಗೆ ಕಟ್ಟಡ ಅನುಕೂಲ ಕಲ್ಪಿಸದೇ ಇರುವುದರಿಂದ ನಿರುಪಯುಕ್ತವಾಗಿದೆ. ಪಾಳು ಬಿದ್ದಿರುವ ಕಟ್ಟಡಗಳ ದುರಸ್ತಿ ಕೈಗೊಂಡು ಇಲ್ಲಿನ ಕಟ್ಟಡದಲ್ಲಿ ಅಂಗನವಾಡಿ ನಡೆಸಲು ಗ್ರಾಪಂ ಆಡಳಿತ ಮಂಡಳಿ ಮುಂದಾಗಬೇಕು. ರಸ್ತೆ, ತಂಗುದಾಣ, ಶಾಲಾ ಕಟ್ಟಡಗಳ ದುರಸ್ತಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡು ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕು.ರಾಮಣ್ಣ ಎನ್.ಗಣೇಕಲ್ ಬಸವರಾಜ ನಾಯಕ, ಕೊತ್ತದೊಡ್ಡಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ