ಕರ್ಕಿಹಳ್ಳಿ-ಪರ್ತಾಪುರ ಗ್ರಾಮಸ್ಥರ ಸ್ಥಳಾಂತರ

•ಸಂತ್ರಸ್ತರಿಗಾಗಿ ದೇವದುರ್ಗ ಬಾಲಕಿಯರ ಕಾಲೇಜ್‌-ಮೊರಾರ್ಜಿ ವಸತಿ ಶಾಲೆಯಲ್ಲಿ ಗಂಜಿ ಕೇಂದ್ರ •ಮಧ್ಯಾಹ್ನದವರೆಗೆ ಊಟಕ್ಕೆ ಪರದಾಟ

Team Udayavani, Aug 11, 2019, 3:25 PM IST

11-Agust-34

ದೇವದುರ್ಗ: ಪರ್ತಾಪುರು ಗ್ರಾಮದ ನೆರೆ ಸಂತ್ರಸ್ತರು ಪಟ್ಟಣದ ಬಾಲಕಿಯರ ಕಾಲೇಜಿನಲ್ಲಿ ತೆರೆದ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.

ದೇವದುರ್ಗ: ಕೃಷ್ಣಾ ನದಿಗೆ ಶನಿವಾರ ಸುಮಾರು 5.75 ಲಕ್ಷ ಕ್ಯೂಸೆಕ್‌ ನೀರು ಬಿಟ್ಟ ಪರಿಣಾಮ ತಾಲೂಕಿನ ನದಿ ತೀರದ ಕರ್ಕಿಹಳ್ಳಿ ಮತ್ತು ಪರ್ತಾಪುರ ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಈ ಗ್ರಾಮಗಳ ಗ್ರಾಮಸ್ಥರನ್ನು ತಾಲೂಕು ಆಡಳಿತ ಬಸ್‌ ಮೂಲಕ ಪಟ್ಟಣದಲ್ಲಿ ತೆರೆದ ಗಂಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಯಿತು.

ಕರ್ಕಿಹಳ್ಳಿ ಮತ್ತು ಪರ್ತಾಪುರ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಎರಡೂ ಗ್ರಾಮಗಳ ನೂರಾರು ಎಕರೆ ಬೆಳೆ ಜಲಾವೃತವಾಗಿದೆ. ಜಾನುವಾರುಗಳು ಮೇವು, ನೀರಿಗಾಗಿ ಪರದಾಡುವಂತಾಗಿದೆ.

ಕರ್ಕಿಹಳ್ಳಿ ಗ್ರಾಮದ ಸುಮಾರು 150 ಕುಟುಂಬಗಳ 250ಕ್ಕೂ ಹೆಚ್ಚು ಜನರನ್ನು ಶನಿವಾರ ಬೆಳಗ್ಗೆ ಬಸ್‌ ಮೂಲಕ ದೇವದುರ್ಗ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆದ ಗಂಜಿ ಕೇಂದ್ರಕ್ಕೆ ಕರೆತರಲಾಯಿತು. ಮಧ್ಯಾಹ್ನದ ವೇಳೆಗೆ

ಪರ್ತಾಪುರ ಗ್ರಾಮದ 300 ಜನರನ್ನು ದೇವದುರ್ಗ ಬಾಲಕಿಯರ ಕಾಲೇಜಿನಲ್ಲಿ ತೆರೆದ ಗಂಜಿ ಕೇಂದ್ರಕ್ಕೆ ಕರೆತರಲಾಯಿತು.

ಊಟಕ್ಕಾಗಿ ಪರದಾಟ: ಪಟ್ಟಣದ ಹೊರವಲಯದ ಮೊರಾರ್ಜಿ ವಸತಿ ನಿಲಯದ ಗಂಜಿ ಕೇಂದ್ರದಲ್ಲಿ ಯಾವುದೇ ಪೂರ್ವ ತಯಾರಿ ಇಲ್ಲದೇ ಕರ್ಕಿಹಳ್ಳಿ ಗ್ರಾಮದ 150 ಕುಟುಂಬಗಳನ್ನು ಸ್ಥಳಾಂತರಿಸಿದ್ದರಿಂದ ಮಧ್ಯಾಹ್ನದವರೆಗೂ ಸಂತ್ರಸ್ತರು ಊಟದ ವ್ಯವಸ್ಥೆ ಇಲ್ಲದೇ ಮಹಿಳೆಯರು, ಮಕ್ಕಳು ಪರದಾಡಬೇಕಾಯಿತು. ಮನೆಯಿಂದ ತಂದ ರೊಟ್ಟಿಗೆ ಖಾರದ ಪುಡಿ ಹಾಕಿಕೊಂಡು ಬಾಲಕನೊಬ್ಬ ತಿನ್ನುವ ದೃಶ್ಯ ಕಂಡುಬಂತು. ಮಧ್ಯಾಹ್ನದ ವೇಳೆಗೆ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮಾಡಲು ತಾಲೂಕು ಆಡಳಿತ ಮುಂದಾಯಿತು.

ಜಾನುವಾರುಗಳೊಂದಿಗೆ ಬಂದ ಸಂತ್ರಸ್ತರು: ಶನಿವಾರ ಬೆಳಗ್ಗೆ ಕರ್ಕಿಹಳ್ಳಿ ಗ್ರಾಮದ ಕೆಲ ಸಂತ್ರಸ್ತರು ತಮ್ಮೊಂದಿಗೆ ಬಸ್‌ನಲ್ಲಿ ಕುರಿ-ಮೇಕೆಗಳೊಂದಿಗೆ ಬಂದರೆ, ಪುರುಷರು ಜಾನುವಾರುಗಳನ್ನು ಹೊಡೆದುಕೊಂಡು ಬರುತ್ತಿದ್ದರು. ವಸತಿ ನಿಲಯದ ಆವರಣದಲ್ಲಿ ಕುರಿ-ಮೇಕೆಗಳನ್ನು ಕಟ್ಟಿದ್ದು ಕಂಡುಬಂತು.

ಹದಗೆಟ್ಟ ಆಶ್ರಯ ಮನೆ: 2009ರಲ್ಲಿ ಕರ್ಕಿಹಳ್ಳಿ ಗ್ರಾಮದ ಆಸರೆ ಮನೆಗಳನ್ನು ನಿರ್ಮಿಸಲಾಗಿದೆ. ಆದರೆ ಅಲ್ಲಿ ತಾಲೂಕು ಆಡಳಿತ ಸೌಲಭ್ಯ ಕಲ್ಪಿಸದ್ದರಿಂದ ಗ್ರಾಮಸ್ಥರು ವಾಸಕ್ಕೆ ಹಿಂದೇಟು ಹಾಕಿದ ಪರಿಣಾಮ ಈಗ ಮನೆಗಳು ಪಾಳುಬಿದ್ದು ಹಾಳಾಗಿವೆ.

ಹೆಚ್ಚಿನ ಕೆಟ್ಟೆಚ್ಚರ: ಕೃಷ್ಣಾ ನದಿಗೆ ದಿನೇದಿನೇ ನೀರು ಹರಿವಿನ ಪ್ರಮಾಣ ಹೆಚ್ಚುತ್ತಿದೆ. ಶನಿವಾರ 5.75 ಲಕ್ಷ ಕ್ಯೂಸೆಕ್‌ ಬಿಟ್ಟಿದ್ದರೆ ಇದು ಇನ್ನೂ 6.5 ಲಕ್ಷ ಕ್ಯೂಸೆಕ್‌ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ತಾಲೂಕಿನಾದ್ಯಂತ ಜಿಲ್ಲಾ ಮತ್ತು ತಾಲೂಕು ಆಡಳಿತ ಕಟ್ಟೆಚ್ಚರ ವಹಿಸಿದೆ. ಹೇರುಂಡಿ ಗ್ರಾಮದ ಹತ್ತಿರಕ್ಕೆ ನೀರು ನುಗ್ಗಿದ್ದು, ಬೆಳೆ ಜಾಲವೃತವಾಗಿವೆ. ಮತ್ತೂಮ್ಮೆ ಪ್ರವಾಹ ಭೀತಿ ಶುರುವಾಗಿದೆ. ಪರತಾಪುರು, ಲಿಂಗದಹಳ್ಳಿ, ನಿಲವಂಜಿ, ಬಾಗೂರು, ಚಿಂಚೋಡಿ, ವೀರಗೋಟ, ಗೂಗಲ್ ಸೇರಿ ಇತರೆ ನದಿತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಪೂರ್ವ ತಯಾರಿಲ್ಲ: ಒಂದೆಡೆ ಕೃಷ್ಣಾ ನದಿ ಉಕ್ಕಿ ಹರಿದು ಗ್ರಾಮಗಳಿಗೆ ನುಗ್ಗುತ್ತಿದ್ದರೆ, ಇನ್ನೊಂದೆಡೆ ತಾಲೂಕು ಆಡಳಿತ ಯಾವುದೇ ಪೂರ್ವ ತಯಾರಿ ಇಲ್ಲದೇ ಗಂಜಿ ಕೇಂದ್ರಗಳನ್ನು ಸ್ಥಾಪಿಸಿ ಸಂತ್ರಸ್ತರನ್ನು ಸ್ಥಳಾಂತರಿಸುತ್ತಿದೆ. ಇದು ಸಂತ್ರಸ್ತರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ. ಇನ್ನೊಂದೆಡೆ ಸ್ಥಳಾಂತರಗೊಂಡ ಸಂತ್ರಸ್ತರಿಗೆ ತಮ್ಮ ಜಮೀನು, ಮನೆ, ಜಾನುವಾರುಗಳದ್ದೇ ಚಿಂತೆ ಕಾಡುತ್ತಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.