ಆಧಾರ್‌ ನೋಂದಣಿಗೆ ತಪ್ಪದ ಪರದಾಟ

•ಕೆಲಸ ಬಿಟ್ಟು ಬ್ಯಾಂಕ್‌ ಮುಂದೆ ನಿಲ್ಲುವ ಶಿಕ್ಷೆ •ಹೆಚ್ಚುವರಿ ಕೇಂದ್ರ ತೆರೆದ ಜಿಲ್ಲಾಡಳಿತ

Team Udayavani, Jul 12, 2019, 2:55 PM IST

12-JUly-25

ದೇವದುರ್ಗ: ಜಾಲಹಳ್ಳಿ ಗ್ರಾಮದ ಎಸ್‌ಬಿಐ ಬ್ಯಾಂಕ್‌ ಮುಂದೆ ಆಧಾರ್‌ ನೋಂದಣಿಗೆ ನಿಂತ ಜನರು.

ದೇವದುರ್ಗ: ಆಧಾರ್‌ ನೋಂದಣಿ ಮತ್ತು ತಿದ್ದುಪಡಿಗೆ ಸಾರ್ವಜನಿಕರು ಇಡೀ ದಿನ ದುಡಿಮೆ, ಕೆಲಸ ಕಾರ್ಯ ಬಿಟ್ಟು ಬ್ಯಾಂಕ್‌ ಮುಂದೆ ನಿಲ್ಲುವ ಶಿಕ್ಷೆ ತಪ್ಪದಂತಾಗಿದೆ.

ತಾಲೂಕಿನ ಜಾಲಹಳ್ಳಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಆಧಾರ್‌ ನೋಂದಣಿ ಕೇಂದ್ರ ಇದೆ. ದಿನಕ್ಕೆ 20 ಟೋಕನ್‌ ಮಾತ್ರ ನೀಡಲಾಗುತ್ತಿದೆ. ಹೀಗಾಗಿ ನೂರಾರು ಜನ ರಾತ್ರಿಯೇ ಆಗಮಿಸಿ ಬ್ಯಾಂಕ್‌ ಎದುರು ಮಲಗಿ ಬೆಳಗ್ಗೆ ಟೋಕನ್‌ ಪಡೆಯುತ್ತಿದ್ದಾರೆ. ನಿತ್ಯ ಅಲೆದಾಡಿದರೂ ಕೆಲವರಿಗೆ ಟೋಕನ್‌ ಸಿಗುತ್ತಿಲ್ಲ. ಆಧಾರ್‌ ನೋಂದಣಿ ಆಗುತ್ತಿಲ್ಲ. ಗ್ರಾಮೀಣ ಮತ್ತು ಪಟ್ಟಣದ ಜನತೆ ತಮ್ಮ ನಿತ್ಯದ ದುಡಿಮೆ, ಕೆಲಸ ಕಾರ್ಯ ಬಿಟ್ಟು ಮಕ್ಕಳು, ಮರಿಗಳೊಂದಿಗೆ ಬ್ಯಾಂಕ್‌ ಎದುರು ಕಾಯುವಂತಾಗಿದೆ. ಇದಕ್ಕಾಗಿ ಗ್ರಾಮೀಣ ಜನತೆ ನಿತ್ಯ ನೂರಾರು ರೂ. ಬಸ್‌ಗೆ ಸುರಿಯುವಂತಾಗಿದೆ.

ಆಧಾರ್‌ ನೋಂದಣಿಗಾಗಿ ಸಾರ್ವಜನಿಕರು ಅನುಭವಿಸುತ್ತಿರುವ ಗೋಳನ್ನು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಕೇಳುವ ಸ್ಥಿತಿಯಲ್ಲಿಲ್ಲ. ನಾಲ್ಕು ಹೋಬಳಿ ಕೇಂದ್ರ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಆಧಾರ್‌ ನೋಂದಣಿ ಸೌಲಭ್ಯ ಕಲ್ಪಿಸಬೇಕೆಂದು ವಿವಿಧ ಸಂಘಟನೆಗಳು ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಆದರೆ ಒಂದಿಲ್ಲೊಂದು ತಾಂತ್ರಿಕ ಸಮಸ್ಯೆ ಹೇಳುತ್ತ ಜಾರಿಕೊಳ್ಳುತ್ತಿದೆ.

ನೆಟ್ವರ್ಕ್‌ ಸಮಸ್ಯೆ: ಕೆಲವೊಮ್ಮೆ ಆಧಾರ್‌ ನೋಂದಣಿ ಸರದಿ ಬಂದರೂ ನೆಟೆವರ್ಕ್‌ ಕೈಕೊಡುತ್ತದೆ. ಹೀಗಾಗಿ ಟೋಕನ್‌ ಪಡೆದವರು ಆದಿನ ಕೆಲಸ ಆಗದಿದ್ದರೆ ಮತ್ತೇ ಮಾರನೆ ದಿನ ಬರಬೇಕು. ಸರಕಾರದ ಸೌಲಭ್ಯ ಪಡೆಯಲು, ಮಕ್ಕಳ ಶಾಲಾ ದಾಖಲಾತಿ, ಬ್ಯಾಂಕ್‌ ಖಾತೆ ತೆರೆಯಲು ಆಧಾರ್‌ ಕಾರ್ಡ್‌ ಕಡ್ಡಾಯವಾಗಿದೆ. ಹೊಸದಾಗಿ ನೋಂದಣಿ, ಹೆಸರು, ಜನ್ಮ ದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆ ಇನ್ನಿತರ ತಿದ್ದುಪಡಿಗಾಗಿ ಪರದಾಡುವಂತಾಗಿದೆ.

ದೇವದುರ್ಗದಲ್ಲೂ ತಪ್ಪದ ಪರದಾಟ: ಪಟ್ಟಣದ ಮಿನಿ ವಿಧಾನಸೌಧದ ಸರ್ವೇ ಕಚೇರಿ ಪಕ್ಕದ ಒಂದು ಕೋಣೆಯಲ್ಲಿ ಆಧಾರ್‌ ನೋಂದಣಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ದಿನಕ್ಕೆ 30 ಟೋಕನ್‌ ನೀಡುವುದರಿಂದ ಬಹುತೇಕರು ಬಂದು ವಾಪಸ್‌ ಹೋಗುವಂತ ಸ್ಥಿತಿ ಇದೆ. ಟೋಕನ್‌ ಸಿಗದೇ ಇದ್ದಾಗ ಹತ್ತಾರು ಜನರು ಗುಂಪು ಕಟ್ಟಿಕೊಂಡು ತಹಶೀಲ್ದಾರ್‌ಗೆ ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಜಿಲ್ಲಾಡಳಿತ ಇಂಥ ಸಮಸ್ಯೆ ಬಗ್ಗೆ ಹೆಚ್ಚು ಗಮನಹರಿಸದೇ ಇರುವುದರಿಂದ ನಿತ್ಯ ಗ್ರಾಮೀಣ ಜನರು ಆಧಾರ್‌ ನೋಂದಣಿಗಾಗಿ ಪರದಾಡುವಂತಾಗಿದೆ. ಜಿಲ್ಲಾಡಳಿತ ಸಮಸ್ಯೆಗೆ ಮುಕ್ತಿ ನೀಡಬೇಕು ಎಂದು ರೈತ ರಾಮಪ್ಪ ಆಗ್ರಹಿಸಿದರು.

ದಿನಕ್ಕೆ ಕೇವಲ 20 ಟೋಕನ್‌ ಕೊಡುವುದರಿಂದ ಬಹಳ ಸಮಸ್ಯೆ ಉಂಟಾಗುತ್ತಿದೆ. ಬಹುತೇಕ ಜನರು ರಾತ್ರಿ ಬ್ಯಾಂಕ್‌ ಮುಂದೆ ಮಲಗುತ್ತಿದ್ದಾರೆ. ನಾಡಕಚೇರಿಗಳಲ್ಲಿ ಆಧಾರ್‌ ನೋಂದಣಿ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಮತ್ತು ತಾಲೂಕು ಆಡಳಿತ ಗಮನಹರಿಸಬೇಕು.
ನರಸಣ್ಣ ನಾಯಕ,
ಜಾಲಹಳ್ಳಿ ರೈತ ಸಂಘದ ಅಧ್ಯಕ್ಷ

ತಾಲೂಕಿನ ಹೋಬಳಿ ಕೇಂದ್ರಗಳಲ್ಲಿ ಆಧಾರ್‌ ನೋಂದಣಿ ಕೇಂದ್ರ ಸ್ಥಾಪನೆ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ದಿನಕ್ಕೆ 20ರಿಂದ 30 ಟೋಕನ್‌ ನೀಡುವ ವ್ಯವಸ್ಥೆ ಮಾಡಲಾಗಿದೆ.
ಮಂಜುನಾಥ,
ತಹಶೀಲ್ದಾರ್‌ ದೇವದುರ್ಗ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.