ಗಲಗ ಗ್ರಾಮದ ರಸ್ತೆ ಕೆಸರುಗದ್ದೆ

ಗಲಗ-ಕಜ್ಜಿಬಂಡಿ ರಸ್ತೆಯಲ್ಲಿ ಬರೀ ಗುಂಡಿ „ ನಿರ್ವಹಣೆ ಇಲ್ಲದೇ ಹಾಳಾದ ತಂಗುದಾಣ

Team Udayavani, Nov 25, 2019, 4:03 PM IST

25-November-17

ದೇವದುರ್ಗ: ತಾಲೂಕಿನ ಗಲಗ, ಕಜ್ಜಿಬಂಡಿ ಸೇರಿ ಇತರೆ ಗ್ರಾಮಗಳಲ್ಲಿ ಮೂಲ ಸೌಲಭ್ಯ ಕೊರತೆಯಿಂದ ಗ್ರಾಮಸ್ಥರು ನರಕಯಾತನೆ ಮಧ್ಯೆ ಜೀವನ ಸಾಗಿಸುವಂತಾಗಿದೆ. ಗಲಗ, ಕಜ್ಜಿಬಂಡಿ ಗ್ರಾಮಗಳಲ್ಲಿ ರಸ್ತೆಗಳಲ್ಲಿ ಗುಂಡಿ ಬಿದ್ದು ಹಾಳಾಗಿವೆ. ಈ ರಸ್ತೆಗೆ ಮರಂ ಹಾಕುವಲ್ಲಿ ಸಂಬಂಧಿಸಿದ ಗ್ರಾಪಂ ಆಡಳಿತ ನಿರ್ಲಕ್ಷ್ಯ ವಹಿಸಿದೆ. ಗುಂಡಿ ಬಿದ್ದ ರಸ್ತೆಗಳಲ್ಲಿ ಜನ, ವಾಹನ, ಎತ್ತಿನ ಬಂಡಿಗಳು ಸಂಚರಿಸುವುದು ದುಸ್ತರವಾಗಿದೆ.

ಗಲಗ ಗ್ರಾಮದಿಂದ ಕಜ್ಜಿಬಂಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರ್‌ ಕಿತ್ತು ಗುಂಡಿ ಬಿದ್ದಿವೆ. ಬೈಕ್‌, ಇತರೆ ವಾಹನಗಳಿರಲಿ ಇಲ್ಲಿ ನಡೆದುಕೊಂಡು ಹೋಗುವುದು ಕೂಡಾ ದುಸ್ತರವಾಗಿದೆ. ಗುಂಡಿಗಳಿಗೆ ಮರಂ ಹಾಕುವಲ್ಲಿ ಇಲ್ಲವೇ ರಸ್ತೆ ಮರು ಡಾಂಬರೀಕರಣ ಮಾಡುವಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.

ರಸ್ತೆಯಲ್ಲೇ ಕೊಳಚೆ ನೀರು: ಗಲಗ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಪಕ್ಕದ ಕೆಲ ವಾರ್ಡ್‌ನಲ್ಲಿ ಚರಂಡಿ ನಿರ್ಮಿಸದ್ದರಿಂದ ಮನೆ ಬಳಕೆ ನೀರು ಸಿಸಿ ರಸ್ತೆಯಲ್ಲೇ ಹರಿಯುತ್ತಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ಪಾಚಿಗಟ್ಟಿದೆ. ಈ ರಸ್ತೆ ಮೇಲೆ ನಡೆದಾಡಲೂ ಜನ ಭಯಪಡುವಂತಾಗಿದೆ. ಕಾರಣ ಪಾಚಿಗಟ್ಟಿದ ರಸ್ತೆ ಮೇಲೆ ಸಂಚರಿಸಿದ ಕೆಲವರು ಬಿದ್ದು ಗಾಯಗೊಂಡಿದ್ದಾರೆ. ಇನ್ನು ಸೊಳ್ಳೆ ಕಾಟಕ್ಕೆ ಸುತ್ತಲಿನ ನಿವಾಸಿಗಳು ಬೇಸತ್ತಿದ್ದಾರೆ. ಗ್ರಾಪಂ ಆಡಳಿತ ಫಾಗಿಂಗ್‌ ಮಾಡಲು ಕೂಡ ವಿಫಲವಾಗಿದೆ. ಇನ್ನು ಸಮುದಾಯ ಆರೋಗ್ಯ ಕೇಂದ್ರದ ಪಕ್ಕದಲ್ಲೇ ಕೊಳಚೆ ಇದ್ದರೂ ಸ್ವಚ್ಛತೆಗೆ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಗ್ರಾಪಂಗೆ ಸೂಚಿಸುವಲ್ಲಿ ಮತ್ತು ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಎಂದು ಗ್ರಾಮದ ನಿವಾಸಿ ಆದೆಪ್ಪ ದೂರಿದ್ದಾರೆ.

ಹಾಳಾದ ಪ್ರಯಾಣಿಕರ ತಂಗುದಾಣ: ಇನ್ನು ಗ್ರಾಮೀಣ ಭಾಗದ ಪ್ರಯಾಣಿಕರಿಗೆ ನಿರ್ಮಿಸಲಾದ ತಂಗುದಾಣಗಳು ನಿರ್ವಹಣೆ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿವೆ. ಬೊಮ್ಮನಹಳ್ಳಿ, ಗಲಗ, ಭೋಗಿರಾಮನಗುಂಡ, ಸೋಮನಮರಡಿ, ಗಾಣದಾಳ, ಹುಲಿಗುಡ್ಡ, ಕರಡಿಗುಡ್ಡ, ಇಂದಿರಾನಗರ ಸೇರಿ ಇತರೆ ಗ್ರಾಮಗಳಲ್ಲಿರುವ ತಂಗುದಾಣಗಳು ನಿರ್ವಹಣೆ ಕೊತೆಯಿಂದಾಗಿ ಪ್ರಯಾಣಿಕರಿಗೆ ನರಕ ಎನಿಸಿವೆ. ಸುಮಾರು ವರ್ಷಗಳಿಂದ ನಿರ್ಮಿಸಲಾದ ತಂಗುದಾಣಗಳು ಸುಣ್ಣಬಣ್ಣ ಕಂಡಿಲ್ಲ. ತಂಗುದಾಣಗಳ ದುರಸ್ತಿಗೆ, ಸುಣ್ಣಬಣ್ಣ ಬಳಿದು ಸ್ವಚ್ಛತೆ ಕಾಪಾಡಲು ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕೆಂದು ಸೋಮನಮರಡಿ ಗ್ರಾಮಸ್ಥ ರಾಜಶೇಖರ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.