ಹಂಪಿ ವಿವಿ ವಿಸ್ತರಣಾ ಕೇಂದ್ರ ಕಟ್ಟಡ ನನೆಗುದಿಗೆ

ಕಟ್ಟಡಕ್ಕಾಗಿ 20 ಎಕರೆ ಭೂಮಿ 4.54 ಕೋಟಿ ರೂ. ಬಿಡುಗಡೆ ಟೆಂಡರ್‌ ಪ್ರಕ್ರಿಯೆ ವಿಳಂಬ

Team Udayavani, Dec 16, 2019, 12:14 PM IST

16-December-7

„ನಾಗರಾಜ ತೇಲ್ಕರ್‌
ದೇವದುರ್ಗ:
ಪಟ್ಟಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರದ ಕಟ್ಟಡಕ್ಕಾಗಿ 20 ಎಕರೆ ಭೂಮಿ ಕಾಯ್ದಿರಿಸಿದ್ದರೂ, ಕಟ್ಟಡಕ್ಕೆ 4.54 ಕೋಟಿ ರೂ. ಅನುದಾನ ಮಂಜೂರಾಗಿ ವರ್ಷವಾದರೂ ಟೆಂಡರ್‌ ಪ್ರಕ್ರಿಯೆ ವಿಳಂಬದಿಂದಾಗಿ ಕಟ್ಟಡ ನಿರ್ಮಾಣಕ್ಕೆ ಕಾಲ ಕೂಡಿಬಂದಿಲ್ಲ.

2017-18ನೇ ಸಾಲಿನ ಆಗಸ್ಟ್‌ದಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಂಪಿ ಕನ್ನಡ ವಿವಿ ವಿಸ್ತರಣಾ ಕೇಂದ್ರದ ಕಾಲೇಜು ಆರಂಭಗೊಂಡಿದೆ. ಇಲ್ಲಿನ ಆರೇಳು ಕೊಠಡಿಗಳಲ್ಲಿ ಕಾಲೇಜು ನಡೆಸಲಾಗುತ್ತಿದೆ. ಕನ್ನಡ ಸಾಹಿತ್ಯ ಮತ್ತು ಗ್ರಾಮೀಣ ಅಭಿವೃದ್ಧಿ ವಿಷಯ ಸೇರಿ 64 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಇನ್ನು ಸಂಗೀತ ವಿಷಯಕ್ಕೆ ವಿದ್ಯಾರ್ಥಿಗಳು ಪ್ರವೇಶ ಪಡೆದಿಲ್ಲ. ವಿಷಯವಾರು ಉಪನ್ಯಾಸಕರು, ಪ್ರಾಚಾರ್ಯರ ಹುದ್ದೆ ಭರ್ತಿ ಆಗಿವೆ. ಪರಿಚಾರಕ ಹುದ್ದೆ ಖಾಲಿ ಇದ್ದು, ತಾತ್ಕಾಲಿಕವಾಗಿ ಒಬ್ಬರನ್ನು ನೇಮಿಸಲಾಗಿದೆ.

ಸೌಲಭ್ಯ ಕೊರತೆ: ಈಗ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಂಪಿ ಕನ್ನಡ ವಿವಿ ವಿಸ್ತರಣಾ ಕೇಂದ್ರದ ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ಕ್ರೀಡಾ ಮೈದಾನ ಸೇರಿ ಅಗತ್ಯ ಮೂಲ ಸೌಲಭ್ಯಗಳ ಕೊರತೆ ಇದೆ. ಒಂದೇ ಕಟ್ಟಡದಲ್ಲಿ ಎರಡು ಕಾಲೇಜು ನಡೆಯುವುದರಿಂದ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದೆ.

ಟೆಂಡರ್‌ ವಿಳಂಬ: ಹಂಪಿ ಕನ್ನಡ ವಿವಿ ವಿಸ್ತರಣಾ ಕೇಂದ್ರದ ಕಾಲೇಜು ಕಟ್ಟಡಕ್ಕಾಗಿ ಪಟ್ಟಣದ ಹೊರವಲಯದ ಸಾಸ್ವಿಗೇರಾ ಸೀಮಾಂತರದ ಸರ್ವೇ ನಂ. 17ರಲ್ಲಿ 20 ಎಕರೆ ಜಾಗೆ ಕಾಯ್ದಿರಿಸಲಾಗಿದೆ. ಕಟ್ಟಡ ನಿರ್ಮಾಣಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 2018ರ ಡಿಸೆಂಬರ್‌ 14ರಂದು 4.54 ಕೋಟಿ ರೂ. ಅನುದಾನ ಮಂಜೂರಾಗಿದೆ. ಕಟ್ಟಡ ನಿರ್ಮಾಣ ಹೊಣೆಯನ್ನು ಲೋಕೋಪಯೋಗಿ ಇಲಾಖೆ ಅಧೀನದ ಭೂಸೇನಾ ನಿಗಮಕ್ಕೆ ವಹಿಸಲಾಗಿದೆ. ಆದರೆ ಟೆಂಡರ್‌ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳು ವಿಳಂಬ ನೀತಿ ತಾಳಿದ್ದರಿಂದ ಕಟ್ಟಡ ನಿರ್ಮಾಣ ನನೆಗುದಿಗೆ ಬಿದ್ದಿದೆ.

ಕಟ್ಟಡ ನಿರ್ಮಾಣ ಕುರಿತು ಕಾಲೇಜಿನ ಪ್ರಾಚಾರ್ಯರು ಸಂಬಂಧಿಸಿದ ಕಚೇರಿಗೆ ಹಲವಾರು ಬಾರಿ ಅಲೆದಿದ್ದು, ಇಂದು-ನಾಳೆ ಎಂದು ದಿನ ದೂಡಲಾಗುತ್ತಿದೆ.

ಕಟ್ಟಡದಲ್ಲಿ ಏನೇನು ಇರಲಿವೆ: ಹಂಪಿ ಕನ್ನಡ ವಿವಿ ವಿಸ್ತರಣಾ ಕೇಂದ್ರದ ನಿಯೋಜಿತ ಕಟ್ಟಡದಲ್ಲಿ 7 ಕೊಠಡಿಗಳು, ಆಫೀಸ್‌, ಗ್ರಂಥಾಲಯ ಕೊಠಡಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ನಿಲಯ ನಿರ್ಮಾಣವಾಗಲಿವೆ ಎನ್ನಲಾಗಿದೆ. ಹಂಪಿ ಕನ್ನಡ ವಿವಿ ವಿಸ್ತರಣಾ ಕೇಂದ್ರದ ಕಾಲೇಜಿಗೆ ಮೀಸಲಿರಿಸಿದ 20 ಎಕರೆ ಜಾಗೆ ವೈದ್ಯಕೀಯ ಕಾಲೇಜು ಆರಂಭಿಸಲು ಸೂಕ್ತವಾಗಲಿದೆ. ಅದಕ್ಕಾಗಿ ಹಂಪಿ ವಿವಿ ಹೆಸರಿಗೆ ಜಾಗೆ ನೋಂದಣಿ ತಡೆ ಹಿಡಿಯುವಂತೆ ಶಾಸಕ ಕೆ. ಶಿವನಗೌಡ ನಾಯಕ ಕಂದಾಯ ಇಲಾಖೆ ಅಧಿಕಾರಿಗೆ ಸೂಚಿಸಿದ್ದರೆನ್ನಲಾಗಿದೆ. ಆದರೆ ಇದೀಗ ಅದೇ ಜಾಗೆಯಲ್ಲಿ ವಿಸ್ತರಣಾ ಕೇಂದ್ರದ ಕಟ್ಟಡ ನಿರ್ಮಿಸಲು ಕೂಡಲೇ ಟೆಂಡರ್‌ ಪ್ರಕ್ರಿಯೆ ಆರಂಭಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆನ್ನಲಾಗಿದೆ. ಕೂಡಲೇ ಕಟ್ಟಡ ಕಾಮಗಾರಿ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕಿದೆ.

ಹಂಪಿ ಕನ್ನಡ ವಿವಿ ವಿಸ್ತರಣಾ ಕೇಂದ್ರದ ನೂತನ ಕಾಲೇಜು ಕಟ್ಟಡ ನಿರ್ಮಿಸಲು ಈಗಾಗಲೇ 4.54 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. 20 ಎಕರೆ ಭೂಮಿ ಕಾಯ್ದಿರಿಸಲಾಗಿದೆ. ಶಾಸಕರಿಗೆ ಭೇಟಿಯಾಗಿದ್ದು, ಅದಷ್ಟು ಬೇಗನೆ ಟೆಂಡರ್‌ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಶಾಂತಪ್ಪ,
ಹಂಪಿ ಕನ್ನಡ ವಿವಿ ವಿಸ್ತರಣಾ ಕೇಂದ್ರದ ಪ್ರಾಚಾರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.