ಖಾಸಗಿ ಶಾಲೆಗಳ ಪ್ರಚಾರ ಜೋರು

ಮನೆ-ಮನೆಗೆ ತೆರಳಿ ಪಾಲಕರ ಮನವೊಲಿಕೆ „ ಪತ್ರಿಕೆ ವಿತರಕರ ಮೂಲಕವೂ ಕರಪತ್ರ ಹಂಚಿಕೆ

Team Udayavani, Apr 13, 2019, 11:17 AM IST

Udayavani Kannada Newspaper

ದೇವದುರ್ಗ: ಒಂದೆಡೆ ಬೇಸಿಗೆ ಬಿಸಿಲಿನ ಕಾವು, ಚುನಾವಣೆ ಪ್ರಚಾರದ ಕಾವು ಏರುತ್ತಿದ್ದರೆ ಇತ್ತ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ಸೆಳೆಯಲು ಪ್ರಚಾರದ ಮೊರೆ ಹೋಗಿವೆ. ಇದಕ್ಕಾಗಿ ತಮ್ಮ ಶಾಲೆಗಳ ಸಿಬ್ಬಂದಿ ಮತ್ತು ಖಾಸಗಿ ವ್ಯಕ್ತಿಗಳನ್ನು ನೇಮಿಸಿ ಮನೆ-ಮನೆಗೆ ತೆರಳಿ ಕರಪತ್ರ ಹಂಚುತ್ತಿದ್ದಾರೆ.

ಪಟ್ಟಣ ಸೇರಿ ವಿವಿಧ ತಾಲೂಕಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶಾಲೆಯಲ್ಲಿ ನೀಡುವ ಶಿಕ್ಷಣ, ಸೌಲಭ್ಯ ಕುರಿತು ಕರಪತ್ರ ಮುದ್ರಿಸಿ ಮನೆ-ಮನೆಗೆ ತೆರಳಿ ಹಂಚಿ ಮಕ್ಕಳನ್ನು ತಮ್ಮ ಶಾಲೆ-ಕಾಲೇಜಿಗೆ ಸೇರಿಸುವಂತೆ ಪಾಲಕರ
ಮನವೊಲಿಸುತ್ತಿವೆ. ಪಟ್ಟಣ ಸೇರಿದಂತೆ ವಿವಿಧ ತಾಲೂಕು ಮತ್ತು ಗ್ರಾಮೀಣ ಭಾಗದಲ್ಲಿ ಹಲವಾರು ಖಾಸಗಿ ಶಿಕ್ಷಣ ಸಂಸ್ಥೆಗಳು ತಲೆ ಎತ್ತಿವೆ. ಪ್ರೀ ನರ್ಸರಿಯಿಂದ ಹಿಡಿದು ಪದವಿವರೆಗೆ ಶಿಕ್ಷಣ ನೀಡುತ್ತಿವೆ. ಅದರಲ್ಲೂ ಕಾಲೇಜು
ಹೊಂದಿರುವ ಸಂಸ್ಥೆಗಳು ಪ್ರಥಮ ಪಿಯುಸಿ, ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳನ್ನು ಸೆಳೆಯಲು ಭರ್ಜರಿ ಪ್ರಚಾರ ನಡೆಸುತ್ತಿವೆ. ಸಂಸ್ಥೆ ಸಿಬ್ಬಂದಿ ಹಾಗೂ ಸಂಸ್ಥೆಯಿಂದ ಕರಪತ್ರ ಹಂಚಿಕೆಗೆ ನೇಮಕಗೊಂಡವರು ಬಿರು ಬಿಸಿಲಲ್ಲೂ ಮನೆ-ಮನೆಗೆ ತೆರಳಿ ಕರಪತ್ರ ವಿತರಿಸುತ್ತಿದ್ದಾರೆ. ಇದಲ್ಲದೇ ಕೆಲ ಸಂಸ್ಥೆಗಳವರು ಬೆಳಗ್ಗೆ ಪತ್ರಿಕಾ ವಿತರಕರ ಬಳಿಗೆ ತೆರಳಿ ಪತ್ರಿಕೆಗಳಲ್ಲಿ ಕರಪತ್ರ ಹಾಕಿ ಹಂಚುವಂತೆ ದುಂಬಾಲು ಬೀಳುತ್ತಿದ್ದಾರೆ.

ವೆಕೇಷನ್‌ ಕ್ಲಾಸ್‌ ಹಾವಳಿ: ಇನ್ನು ಬೇಸಿಗೆಯಲ್ಲಿ ಎಸ್ಸೆಸ್ಸಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗಾಗಿ ಶಿಕ್ಷಕರು, ಉಪನ್ಯಾಸಕರು, ಕೆಲ ಸಂಸ್ಥೆಯವರು ವೆಕೇಷನ್‌ ಕ್ಲಾಸ್‌ ನಡೆಸುತ್ತಿದ್ದಾರೆ. ಇವರೂ ಕೂಡ ಮಕ್ಕಳನ್ನು ತಮ್ಮೆಡೆಗೆ ಸೆಳೆಯಲು ಕರಪತ್ರದ ಮೊರೆ ಹೋಗಿದ್ದಾರೆ.

ಬ್ಯಾನರ್‌ಗೆ ಬ್ರೇಕ್‌: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳ ಅಳವಡಿಕೆ ನಿಷೇಧಿಸಲಾಗಿದೆ. ಇದರ ಬಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ತಗುಲಿದೆ. ಎಲ್ಲೆಂದರಲ್ಲಿ ತಮ್ಮ ಶಾಲೆ, ಕಾಲೇಜುಗಳಲ್ಲಿ ಪ್ರವೇಶ
ಪಡೆಯುವಂತೆ ಮತ್ತು ಸಾಧಕ ಮಕ್ಕಳ ಭಾವಚಿತ್ರಗಳಿರುವ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಖಾಸಗಿ ಸಂಸ್ಥೆಗಳವರು ಹಾಕುತ್ತಿದ್ದರು. ಈಗ ನೀತಿ ಸಂಹಿತೆಯಿಂದಾಗಿ ಫ್ಲೆಕ್ಸ್‌ ಬ್ಯಾನರ್‌ಗೆ ಬ್ರೇಕ್‌ ಬಿದ್ದಿದೆ. ಹೀಗಾಗಿ ಖಾಸಗಿ ಸಂಸ್ಥೆಗಳವರು ಮನೆ-ಮನೆಗೆ ತೆರಳಿ ಮಕ್ಕಳನ್ನು, ಪಾಲಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆನ್ನಲಾಗಿದೆ.

ಡೊನೇಷನ್‌ ಹಾವಳಿ: ಇನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ದುಬಾರಿ ಶುಲ್ಕದ ಜೊತೆಗೆ ಡೊನೇಷನ್‌ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಪ್ರತಿ ವರ್ಷ ಕೇಳಿಬರುತ್ತಿವೆ. ಆದರೆ ಇವುಗಳನ್ನು ನಿಯಂತ್ರಿಸಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಎಂಬ ಸಬೂಬು ಹೇಳಿ ಜಾರಿಕೊಳ್ಳುತ್ತಿದ್ದಾರೆ ಎಂದು ಪಾಲಕರು ಆರೋಪಿಸಿದ್ದಾರೆ.

ಮಕ್ಕಳ ಬಳಕೆ: ಗ್ರಾಮೀಣ ಪ್ರದೇಶದಲ್ಲಿನ ಶೇ.60ರಷ್ಟು ಮಕ್ಕಳು ಬೇಸಿಗೆ ರಜೆಯಲ್ಲಿ ಕೋಚಿಂಗ್‌ ತರಬೇತಿ ಪಡೆಯಲು ಪಟ್ಟಣಕ್ಕೆ ಬರುತ್ತಿದ್ದಾರೆ. ಇಲ್ಲಿನ ಕೆಲ ಶಿಕ್ಷಣ ಸಂಸ್ಥೆಗಳು ಈ ಮಕ್ಕಳನ್ನು ತಮ್ಮ ಸಂಸ್ಥೆ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇಂಥ ಸಂಸ್ಥೆಗಳ ವಿರುದ್ಧ ಶಿಕ್ಷಣಣಿಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಲಿಂಗಣ್ಣ ಮಕಾಶಿ ಆಗ್ರಹಿಸಿದ್ದಾರೆ.

ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವ ನೆಪದಲ್ಲಿ ಪಾಲಕರಿಂದ ಹಣ ವಸೂಲಿ ದಂಧೆಗಿಳಿದಿವೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಇಂಥ ಸಂಸೆಗಳ ವಿರುದ್ಧ ಕ್ರಮ ಕೈಗೊಂಡು ಮಾನ್ಯತೆ ರದ್ದುಪಡಿಸಬೇಕು.
. ವೀರಭದ್ರಯ್ಯ,
   ಶಿಕ್ಷಣ ಪ್ರೇಮಿ

ನಾಗರಾಜ ತೇಲ್ಕರ್

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.