ವಿಷಜಂತುಗಳ ಗೂಡಾದ ಸಂತ್ರಸ್ತರ ಮನೆ

ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ವಿಫಲ •ಸ್ಥಳಾಂತರಕ್ಕೆ ಸಂತ್ರಸ್ತರ ನಿರಾಕರಣೆ

Team Udayavani, Aug 7, 2019, 11:14 AM IST

7-Agust-10

ದೇವದುರ್ಗ: ಮೇದರಗೋಳ ನೆರೆ ಸಂತ್ರಸ್ತರ ಮನೆಯ ಸುತ್ತಲೂ ಜಾಲಿಗಿಡಗಳು ಬೆಳೆದಿವೆ.

ನಾಗರಾಜ ತೇಲ್ಕರ್‌
ದೇವದುರ್ಗ:
ಕಿತ್ತು ಹೋದ ಬಾಗಿಲು, ಕಿಟಕಿ, ಎಲ್ಲೆಂದರಲ್ಲಿ ಬೆಳೆದ ಜಾಲಿಗಿಡಗಳು, ಹಾವು, ಚೇಳಿಗೆ ಆಶ್ರಯ ತಾಣವಾದ ಮನೆಗಳು, ನೀರು, ಶೌಚಾಲಯ-ಚರಂಡಿ ಸೌಲಭ್ಯಗಳ ಕೊರತೆ ಇದು 2009ರಲ್ಲಿ ನೆರೆಹಾವಳಿಗೆ ತತ್ತರಿಸಿದ ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗಾಗಿ ನಿರ್ಮಿಸಿದ ಮನೆಗಳಲ್ಲಿನ ಸ್ಥಿತಿ.

2009ರಲ್ಲಿ ನೆರೆ ಹಾವಳಿಗೆ ನಲುಗಿದ ಕೃಷ್ಣಾ ನದಿ ತೀರದ 11 ಗ್ರಾಮಗಳು ಅಕ್ಷರಶಃ ನಲುಗಿದ್ದವು. ಈ ಪೈಕಿ ತೀರ ಸಮಸ್ಯೆ ಎದುರಿಸಿದ ಹೇರುಂಡಿ, ಕರ್ಕಿಹಳ್ಳಿ, ಮೇದರಗೋಳ, ವೀರಗೋಟ ಗ್ರಾಮಸ್ಥರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ನಿರ್ಧರಿಸಿತ್ತು. ಆಗ ಹಟ್ಟಿ ಚಿನ್ನದ ಗಣಿ ಕಂಪನಿ ಮತ್ತು ವಿವಿಧ ಸಂಘ-ಸಂಸ್ಥೆಗಳ ನೆರವಿನೊಂದಿಗೆ ಆಯಾ ಗ್ರಾಮಗಳ ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ ಮನೆಗಳನ್ನು ನಿರ್ಮಿಸಿತ್ತು. ಆದರೆ ಈ ಬಡಾವಣೆಗಳಲ್ಲಿ ನೀರು, ಶೌಚಾಲಯ, ವಿದ್ಯುತ್‌ ದೀಪ, ರಸ್ತೆ, ಚರಂಡಿಯಂತಹ ಮೂಲ ಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾ ಮತ್ತು ತಾಲೂಕು ಆಡಳಿತ ವಿಫಲವಾದ ಪರಿಣಾಮ ಸಂತ್ರಸ್ತರು ಈ ಮನೆಗಳಿಗೆ ಹೋಗಲು ನಿರಾಕರಿಸಿದರು. ಆದರೂ ಕೆಲ ಗ್ರಾಮಗಳಲ್ಲಿ ತೀರ ಅನಿವಾರ್ಯವಿರುವ ಕುಟುಂಬಗಳು ಸೌಲಭ್ಯಗಳ ಕೊರತೆ ಮಧ್ಯೆಯೂ ಆಶ್ರಯ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಮತ್ತೇ ಪ್ರವಾಹ ಭೀತಿ: ದಶಕದ ನಂತರ ಮತ್ತೇ ಪ್ರವಾಹ ಭೀತಿ ಶುರುವಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗ ಮತ್ತೇ ನದಿ ತೀರದ ಗ್ರಾಮಸ್ಥರನ್ನು ಸ್ಥಳಾಂತರಿಸಲು ತಾಲೂಕು ಮತ್ತು ಜಿಲ್ಲಾಡಳಿತ ಮುಂದಾಗಿದೆ. ಮೇದರಗೋಳ ಗ್ರಾಮದಲ್ಲಿ ಸೋಮವಾರ 13 ಕುಟುಂಬಗಳನ್ನು ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲಾಗಿದೆ.

ಹೇರುಂಡಿ: 2009ರಲ್ಲಿ ನೆರೆ ಹಾವಳಿಗೆ ಹೇರುಂಡಿ ಗ್ರಾಮ ಸಂಪೂರ್ಣ ಜಲಾವೃತವಾಗಿತ್ತು. ನೆರೆ ಸಂತ್ರಸ್ತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಹಟ್ಟಿ ಚಿನ್ನದ ಗಣಿ ಕಂಪನಿ ಮನೆಗಳ ನಿರ್ಮಾಣಕ್ಕೆ ಮುಂದಾಗಿ ಬಳ್ಳಾರಿಯ ಖಾಸಗಿ ಕಂಪನಿಗೆ ಮನೆ ನಿರ್ಮಾಣದ ಹೊಣೆ ವಹಿಸಿತ್ತು. 159 ಮನೆಗಳ ಬೇಡಿಕೆ ಇದ್ದರೂ ಕೇವಲ 115 ಮನೆಗಳನ್ನು ನಿರ್ಮಿಸಲಾಯಿತು. ಕುಟುಂಬಗಳ ಸಂಖ್ಯೆ ಆಧರಿಸಿ ತಾಲೂಕು ಆಡಳಿತ ಮನೆ ಹಂಚಿಕೆಗೆ ಮುಂದಾದಾಗ ಕಾಣದ ಕೈಗಳು, ರಾಜಕೀಯ ಲಾಬಿಯಿಂದಾಗಿ ಇದು ನನೆಗುದಿಗೆ ಬಿದ್ದಿದೆ. ಇಲ್ಲಿವರೆಗೆ ಹೇರುಂಡಿ ನೆರೆ ಸಂತ್ರಸ್ತರಿಗೆ ಮನೆ ಹಂಚಿಕೆ ಆಗಿಲ್ಲ. ಕೆಲ ಕುಟುಂಬಗಳು ಮಾತ್ರ ಸೌಲಭ್ಯ ಕೊರತೆ ಮಧ್ಯೆಯೂ ತಮಗಾಗಿ ನಿರ್ಮಿಸಿದ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಮೇದರಗೋಳ: ಇನ್ನು ಮೇದರಗೋಳ ಗ್ರಾಮದ ನೆರೆ ಸಂತ್ರಸ್ತರಿಗಾಗಿ ಗ್ರಾಮದ ಹೊರವಲಯದಲ್ಲಿ 100 ಆಶ್ರಯ ಮನೆಗಳನ್ನು ನಿರ್ಮಿಸಲಾಗಿತ್ತು. ಆದರೆ ನೀರು, ಶೌಚಾಲಯ, ವಿದ್ಯುತ್‌, ರಸ್ತೆ, ಚರಂಡಿ ಸೌಲಭ್ಯ ಇಲ್ಲದ್ದಕ್ಕೆ ಕೆಲವರು ಸ್ಥಳಾಂತರಗೊಂಡಿದ್ದಿಲ್ಲ. ಇದೀಗ ಕೃಷ್ಣಾ ನದಿಗೆ ಪ್ರವಾಹ ಬಂದಿದ್ದರಿಂದ 13 ಕುಟುಂಬಗಳನ್ನು ಆಶ್ರಯ ಮನೆಗಳಿಗೆ ಸ್ಥಳಾಂತರಿಸಲಾಗಿದೆ.

ಕರ್ಕಿಹಳ್ಳಿ: ಕರ್ಕಿಹಳ್ಳಿ ನೆರೆ ಸಂತ್ರಸ್ತರಿಗಾಗಿ ಗ್ರಾಮದ ಹೊರವಲಯದಲ್ಲಿ 117 ಆಶ್ರಯ ಮನೆಗಳನ್ನು ನಿರ್ಮಿಸಲಾಗಿದೆ. ಆದರೆ ತೀರ ಸಮಸ್ಯೆ ಇರುವ 25 ಕುಟುಂಬಗಳು ಮಾತ್ರ ಅಲ್ಲಿ ವಾಸಿಸುತ್ತಿವೆ. ಉಳಿದ ದೊಡ್ಡ ಕುಟುಂಬಗಳಿಗೆ ಈ ಮನೆಗಳು ಚಿಕ್ಕದಾಗಿದ್ದರಿಂದ ಮತ್ತು ಸೌಲಭ್ಯ ಕೊರತೆಯಿಂದ ವಾಸಕ್ಕೆ ಹಿಂದೇಟು ಹಾಕಿವೆ. ಈ ಮನೆಗಳ ಸುತ್ತಲೂ ಜಾಲಿಗಿಡಗಳು ಬೆಳೆದಿವೆ. ಬಾಗಿಲು, ಕಿಟಕಿ ಕಿತ್ತಿವೆ. ಹಾವು, ಚೇಳುಗಳಂತಹ ವಿಷಜಂತುಗಳ ತಾಣವಾಗಿವೆ. ಮನೆ ನಿರ್ಮಿಸಿ ಹಲವು ವರ್ಷಗಳೇ ಕಳೆದರೂ ಜಿಲ್ಲಾಡಳಿತವಾಗಲಿ, ತಾಲೂಕು ಆಡಳಿತವಾಗಲಿ ಇತ್ತ ಕಣ್ಣೆತ್ತಿ ನೋಡಿಲ್ಲ. ಈಗ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಕರ್ಕಿಹಳ್ಳಿ ಗ್ರಾಮದ ಜನರ ಸ್ಥಳಾಂತರಕ್ಕೆ ಚಿಂತನೆ ನಡೆದಿದೆ. ಕರ್ಕಿಹಳ್ಳಿ ಗ್ರಾಮದಲ್ಲಿ ವಾರದಿಂದ ಕುಡಿಯುವ ನೀರಿನ ಅಭಾವ ಎದುರಾಗಿದೆ.

ವೀರಗೋಟ: ನೆರೆ ಹಾವಳಿಗೆ ತತ್ತರಿಸಿದ ವೀರಗೋಟ ಗ್ರಾಮಸ್ಥರಿಗಾಗಿ ತಿಂಥಣಿ ಬ್ರಿಜ್‌ ರಾಜ್ಯ ಹೆದ್ದಾರಿ ರಸ್ತೆ ಪಕ್ಕದಲ್ಲಿ 103 ಮನೆಗಳನ್ನು ನಿರ್ಮಿಸಿ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ. 18 ಕುಟುಂಬಕ್ಕೆ ಮನೆ ಹಂಚಿಕೆಯಲ್ಲಿ ತಾರತಮ್ಯ ಅನುಸರಿಸಿದ್ದರಿಂದ ಸ್ಥಳಾಂತರ ಆಗದೇ ನದಿ ತೀರದಲ್ಲಿ ವಾಸಿಸುತ್ತಿದ್ದಾರೆ. ಪ್ರವಾಹ ಭೀತಿ ಹಿನ್ನೆಲೆ ಉಳಿದ ಕುಟುಂಬಗಳನ್ನು ಸ್ಥಳಾಂತರಿಸಿ ಹಕ್ಕುಪತ್ರಗಳನ್ನು ನೀಡಬೇಕು ಎಂದು ಕರವೇ ಅಧ್ಯಕ್ಷ ಬಸವರಾಜ ಗೋಪಳಾಪುರ ಆಗ್ರಹಿಸಿದ್ದಾರೆ.

ಹೇರುಂಡಿ ಗ್ರಾಮದ ಸಂತ್ರಸ್ತರಿಗೆ ಮನೆಗಳ ಹಂಚಿಕೆಯಲ್ಲಿ ರಾಜಕೀಯ ಲಾಭಿ ಶುರುವಾಗಿದೆ. ಪ್ರವಾಹ ಭೀತಿ ಶುರುವಾಗಿದ್ದು, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಕೂಡಲೇ ಮನೆಗಳ ಹಕ್ಕು ಪತ್ರಗಳು ವಿತರಣೆ ಮಾಡಬೇಕು.
•ಬೂತಪ್ಪ, ಹೇರುಂಡಿ ಗ್ರಾಮಸ್ಥ

ಮೇದರಗೋಳ ಗ್ರಾಮದ ಉಳಿದ ಕುಟುಂಬಗಳು ಸ್ಥಳಾಂತರ ಮಾಡಲಾಗಿದೆ. ಹೇರುಂಡಿ ನೆರೆ ಸಂತ್ರಸ್ತರಿಗೆ ಮನೆಗಳು ಹಂಚಿಕೆ ವಿಳಂಬ ಕುರಿತು ಮಾಹಿತಿ ಪಡೆಯುತ್ತೇನೆ.
ಮಂಜುನಾಥ, ತಹಶೀಲ್ದಾರ್‌

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.