ಕರಡಿಗುಡ್ಡ ಮಕ್ಕ ಳಿಗೆ ಮರದ ಕೆಳಗೇ ಪಾಠ!

ಶಾಲಾ ಕಟ್ಟಡಕ್ಕೆ 2 ಎಕರೆ ಜಾಗೆ ಕಾಯ್ದಿರಿಸುವಂತೆ ಡಿಸಿ ಆದೇಶಕ್ಕೂ ಬೆಲೆ ನೀಡದ ತಾಲೂಕು ಅಧಿಕಾರಿಗಳು

Team Udayavani, Nov 20, 2019, 2:59 PM IST

20-November-10

„ನಾಗರಾಜ ತೇಲ್ಕರ್‌
ದೇವದುರ್ಗ:
ತಾಲೂಕಿನ ಕರಡಿಗುಡ್ಡ ಗ್ರಾಮದ ಸರಕಾರಿ ಶಾಲೆ ಕಟ್ಟಡಕ್ಕಾಗಿ ಗ್ರಾಮದ ಸರ್ಕಾರಿ ಜಾಗೆಯಲ್ಲಿ 2 ಎಕರೆ ಜಮೀನನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಹೆಸರಿಗೆ ಕಾಯ್ದಿರಿಸುವಂತೆ ಹಿಂದಿನ ಜಿಲ್ಲಾಧಿಕಾರಿ ಬಿ. ಶರತ್‌ ಆದೇಶಿಸಿದ್ದರೂ ಈವರೆಗೆ ತಾಲೂಕು ಆಡಳಿತ ಈ ಬಗ್ಗೆ ಕ್ರಮ ವಹಿಸಿಲ್ಲ. ಹೀಗಾಗಿ ಕರಡಿಗುಡ್ಡ ಗ್ರಾಮದಲ್ಲಿ ಶಾಲಾ ಆವರಣದಲ್ಲಿನ ಮರದ ಕೆಳಗೆ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಸುಂಕೇಶ್ವರಹಾಳ ಕ್ಲಸ್ಟರ್‌ ವ್ಯಾಪ್ತಿಯ ಗಬ್ಬೂರು ಹೋಬಳಿಯ ಕರಡಿಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಗೊಂಡಿದ್ದು, ಬೀಗ ಜಡಿಯಲಾಗಿದೆ. ಆರೇಳು ವರ್ಷಗಳಿಂದ ಶಿಕ್ಷಕರು ಶಾಲಾ ಆವರಣದಲ್ಲಿನ ಮರದ ಕೆಳಗೆ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 45ರಿಂದ 50 ಮಕ್ಕಳಿದ್ದಾರೆ.

ನಿರಂತರ ಹೋರಾಟ: ಕರಡಿಗುಡ್ಡ ಸರ್ಕಾರಿ ಶಾಲೆಗೆ ಸ್ವಂತ ಕಟ್ಟಡ ಒದಗಿಸಲು ಆಗ್ರಹಿಸಿ ದಲಿತ ಸಂಘಟನೆ ಮುಖಂಡರು ಗಬ್ಬೂರು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದ್ದರು. ಪರಿಣಾಮ ಹಿಂದಿನ ಜಿಲ್ಲಾಧಿಕಾರಿ ಬಿ.ಶರತ್‌ ಶಾಲೆಗೆ ಸ್ವಂತ ಕಟ್ಟಡದ ಅವಶ್ಯಕತೆ ಇರುವುದನ್ನು ಮನಗಡ್ಡು ಗಬ್ಬೂರು ಹೋಬಳಿಯ ಕರಡಿಗುಡ್ಡ ಗ್ರಾಮದ ಸರ್ವೆ ನಂಬರ್‌ 1/*/*ರ 10.06 ಎಕರೆ ಜಮೀನಿನ ಪೈಕಿ 2 ಎಕರೆ ಜಾಗೆಯನ್ನು ಕರಡಿಗುಡ್ಡ ಗ್ರಾಮದ ಸರ್ಕಾರಿ  ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಕ್ಕಾಗಿ ರಾಯಚೂರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಹೆಸರಿಗೆ ಕಾಯ್ದಿರಿಸುವಂತೆ 2019ರ ಜುಲೈ 7ರಂದು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಕ್ರಮ ವಹಿಸುವಂತೆ ದೇವದುರ್ಗ ತಹಶೀಲ್ದಾರರಿಗೆ ಆದೇಶದಲ್ಲಿ ತಿಳಿಸಿದ್ದಾರೆ. ತಂಬ್‌ ಮೂಲಕ ಆನ್‌ಲೈನ್‌ನಲ್ಲಿ ದಾಖಲಾತಿ ಜಿಲ್ಲಾಧಿಕಾರಿ ಕಚೇರಿಯಿಂದ ತಾಲೂಕು ಕಂದಾಯ ಇಲಾಖೆಗೆ ವರ್ಗಾಹಿಸಬೇಕು. 5 ತಿಂಗಳಾದರೂ ಈ ಬಗ್ಗೆ ಕ್ರಮ ವಹಿಸಿಲ್ಲ. ಕಂದಾಯ ಇಲಾಖೆ ಅಧಿಕಾರಿಗಳು ಒಬ್ಬರತ್ತ ಮತ್ತೂಬ್ಬರು ಬೊಟ್ಟು ಮಾಡುತ್ತ ವಿಳಂಬ ನೀತಿ ಅನುಸರಿಸುತ್ತಿದ್ದಾರೆ.

ಮರದ ಕೆಳಗೆ ಪಾಠ: ಕರಡಿಗುಡ್ಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದರಿಂದ ಬೀಗ ಜಡಿಯಲಾಗಿದೆ. ಈಗ ಕಟ್ಟಡ ಇಲ್ಲದ್ದರಿಂದ ಆರೇಳು ವರ್ಷಗಳಿಂದ ಶಿಕ್ಷಕರು ಮರದ ಕೆಳಗೆ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ. ಮಳೆ ಬಂದರೆ ಅಘೋಷಿತ ರಜೆ ನೀಡಲಾಗುತ್ತಿದೆ, ಇಲ್ಲವೇ ಗುಡಿ ಗುಂಡಾರ, ಸಮುದಾಯ ಭವನದಲ್ಲಿ ಪಾಠ ಮಾಡಲಾಗುತ್ತಿದೆ.

ಹಳೆ ಕಟ್ಟಡದಲ್ಲಿ ಬಿಸಿಯೂಟ: ಇನ್ನು ಮಕ್ಕಳಿಗೆ ಶಾಲೆಯ ಹಳೆ ಕಟ್ಟಡದಲ್ಲಿ ಬಿಸಿಯೂಟ ತಯಾರಿಸಲಾಗುತ್ತಿದ್ದು, ಆಹಾರ ಸಾಮಗ್ರಿಗಳನ್ನು ಅಲ್ಲಿಯೇ ಇರಿಸಲಾಗಿದೆ. ಕೆಲ ಮಕ್ಕಳು ಮರದ ಕೆಳಗೆ ಊಟ ಮಾಡಿದರೆ ಮತ್ತೆ ಕೆಲವರು ತಟ್ಟೆಯಲ್ಲಿ ಬಿಸಿಯೂಟ ಹಾಕಿಸಿಕೊಂಡು ಮನೆಗೆ ಹೋಗಿ ಊಟ ಮಾಡಿ ಬರುವ ಪರಿಸ್ಥಿತಿ ಇದೆ.

ಸೌಲಭ್ಯಗಳ ಕೊರತೆ: ಇನ್ನು ಶಾಲೆಗೆ ಕಟ್ಟಡವಿಲ್ಲದ್ದರಿಂದ ನೀರು, ಶೌಚಾಲಯ ಸೌಲಭ್ಯವೂ ಇಲ್ಲದಾಗಿದೆ. ಮಕ್ಕಳ ದಾಖಲಾತಿಗಳನ್ನು, ಹಾಜರಿ ಪುಸ್ತಕ ಸೇರಿ ಇತರೆ ದಾಖಲೆಗಳನ್ನು ಇಡುವುದೇ ಶಿಕ್ಷಕರಿಗೆ ಸವಾಲಾಗಿದೆ. ಹಿಂದಿನ ಜಿಲ್ಲಾಧಿಕಾರಿ ಬಿ. ಶರತ್‌ ಅವರು ಕರಡಿಗುಡ್ಡ ಶಾಲೆ ಸ್ವಂತ ಕಟ್ಟಡಕ್ಕಾಗಿ 2 ಎಕರೆ ಜಮೀನು ಕಾಯ್ದಿರಿಸುವಂತೆ ಆದೇಶಿಸಿದ್ದರೂ ಈ ಬಗ್ಗೆ ಕ್ರಮ ವಹಿಸದ ತಾಲೂಕು ಮತ್ತು ಜಿಲ್ಲಾ ಅಧಿಕಾರಿಗಳ ಧೋರಣೆ ಖಂಡಿಸಿ ಹೋರಾಟ ನಡೆಸಬೇಕಾಗುತ್ತದೆ ಎಂದು ದಲಿತ ಮುಖಂಡ ಶಾಂತಕುಮಾರ ಹೊನ್ನಟಗಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.