ಕೃಷ್ಣೆ ಉಕ್ಕಿ ಹರಿದರೂ ಟ್ಯಾಂಕರ್‌ ನೀರೇ ಗತಿ

ಪ್ರವಾಹಕ್ಕೆ ಗಾಗಲ್ ಜಾಕ್‌ವೆಲ್ನ ಟಿಸಿ ಮುಳುಗಡೆ •ದುರಸ್ತಿಗೆ ಟಿಸಿ ರವಾನೆ •ಜಿಲ್ಲಾಡಳಿತದಿಂದ ಪುರಸಭೆಗೆ ಬಾರದ ಅನುದಾನ

Team Udayavani, Aug 25, 2019, 11:23 AM IST

25-Agust-11

ದೇವದುರ್ಗ: ಗಾಗಲ್ ಹತ್ತಿರ ಜಾಕವೆಲ್ ಬಳಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿ.

ನಾಗರಾಜ ತೇಲ್ಕರ್‌
ದೇವದುರ್ಗ:
ತಾಲೂಕಿನಲ್ಲಿ ಹರಿದಿರುವ ಕೃಷ್ಣಾ ನದಿ ಉಕ್ಕಿ ಹರಿದರೂ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಜನ ಪರದಾಡುವಂತಾಗಿದೆ.

ಕೃಷ್ಣಾ ನದಿ ಪ್ರವಾಹದಿಂದಾಗಿ ಪಟ್ಟಣಕ್ಕೆ ನೀರು ಪೂರೈಸುವ ಗಾಗಲ್ ಬಳಿಯ ಜಾಕ್‌ವೆಲ್ಗೆ ವಿದ್ಯುತ್‌ ಒದಗಿಸುವ ಮೂರು ಪರಿವರ್ತಕಗಳುಮುಳುಗಡೆ ಆಗಿ ದುರಸ್ತಿಗೀಡಾಗಿದ್ದರಿಂದ ಪಟ್ಟಣದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದ್ದು, ಪುರಸಭೆಯಿಂದ ಎಲ್ಲ ವಾರ್ಡ್‌ಗಳಿಗೆ ನಿತ್ಯ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ.

ಪ್ರವಾಹದಿಂದಾಗಿ ಗಾಗಲ್ ಬಳಿಯ ಜಾಕ್‌ವೆಲ್ನಲ್ಲಿ ವಿದ್ಯುತ್‌ ಪರಿವರ್ತಕ ಸೇರಿ ಇತರೆ ಯಂತ್ರೋಪಕರಣ ದುರಸ್ತಿಗೀಡಾಗಿವೆ. ಕಳೆದ ನಾಲ್ಕೈದು ದಿನಗಳಿಂದ ಸಂಬಂಧಿಸಿದ ಇಲಾಖೆ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸಿದ್ದಾರೆ. ಹೀಗಾಗಿ ಜಾಕ್‌ವೆಲ್ನಿಂದ ಪಟ್ಟಣಕ್ಕೆ ನೀರು ಪೂರೈಕೆ ಆಗುವವರೆಗೆ ಪುರಸಭೆ ಟ್ಯಾಂಕರ್‌ ನೀರು ಪೂರೈಸುತ್ತಿದೆ. ಪರಿವರ್ತಕ ದುರಸ್ತಿ, ಟ್ಯಾಂಕರ್‌ ನೀರು ಪೂರೈಕೆಗೆ, ಟ್ರ್ಯಾಕ್ಟರ್‌ ಮತ್ತು ಖಾಸಗಿ ಬೋರ್‌ವೆಲ್ಗಳ ಬಾಡಿಗೆಗೆ ಪುರಸಭೆ 40 ಲಕ್ಷ ರೂ.ಗಳ ಕ್ರಿಯಾಯೋಜನೆ ತಯಾರಿಸಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜತೆಗೆ ಪುರಸಭೆ ಮುಖ್ಯಾಧಿಕಾರಿ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಜಿಲ್ಲಾಧಿಕಾರಿಗಳು ಶಾಸಕರ ಜತೆ ಚರ್ಚಿಸಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

ವಿದ್ಯುತ್‌ ಪರಿವರ್ತಕಗಳನ್ನು ದುರಸ್ತಿಗಾಗಿ ಕಳಿಸಲಾಗಿದೆ. ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ತಾತ್ಕಾಲಿಕವಾಗಿ ವಿದ್ಯುತ್‌ ಪರಿವರ್ತಕ ಒದಗಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಪುರಸಭೆ ಮನವಿ ಮಾಡಿದೆ. ತ್ರಿಫೇಸ್‌ ವಿದ್ಯುತ್‌ ಸಾಮರ್ಥ್ಯ ಟಿಸಿಯನ್ನು ಬೇರೆಕಡೆಯಿಂದ ತರಿಸಿ ಕೊಡುವ ಭರವಸೆ ನೀಡಿದ್ದಾರೆ. ಕಳೆದ ನಾಲ್ಕೆ ೖದು ದಿನಗಳಿಂದ ನಿರಂತರ ದುರಸ್ತಿ ಕಾರ್ಯ ಮುಂದುವರಿದಿದೆ. ಗಾಗಲ್ ಗ್ರಾಮದ ಹತ್ತಿರದ ಕುಡಿಯುವ ನೀರಿನ ಜಾಕವೆಲ್ ಬಳಿ ಕೆಲ ಸಣ್ಣಪುಟ್ಟ ದುರಸ್ತಿ ಕಾರ್ಯಕ್ಕೆ ಪುರಸಭೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ತಾಂಡಾಗಳಲ್ಲೂ ನೀರಿನ ಸಮಸ್ಯೆ: ಪುರಸಭೆ ವ್ಯಾಪ್ತಿಯ ಮೂರ್‍ನಾಲ್ಕು ದೊಡ್ಡಿ, ತಾಂಡಾಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇಲ್ಲಿ ಖಾಸಗಿ ಬೋರ್‌ವೆಲ್ಗಳನ್ನು ಬಾಡಿಗೆ ಪಡೆದು ನೀರು ಪೂರೈಸಲಾಗುತ್ತಿದೆ. ಪಟ್ಟಣದ 20 ವಾರ್ಡ್‌ಗಳಿಗೆ ನಿತ್ಯ ಆರು ಟ್ಯಾಂಕರ್‌ನಂತೆ ನೀರು ಪೂರೈಸಲಾಗುತ್ತಿದೆ. ನೀರು ಪೂರೈಕೆಯಲ್ಲಿ ಅಕ್ರಮ ತಡೆಗೆ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸಲಾಗಿದೆ. ನಿತ್ಯ ಟ್ಯಾಂಕರ್‌ ನೀರು ಪೂರೈಸುತ್ತಿದ್ದರೂ ಜನತೆಗೆ ಸಮರ್ಪಕ ನೀರು ಸಿಗದೇ ಪರದಾಡುವಂತಾಗಿದೆ.

ನಿತ್ಯ ಕಾದಾಟ: ಇನ್ನು ವಾರ್ಡ್‌ಗಳಲ್ಲಿ ಟ್ಯಾಂಕರ್‌ ಬಂದ್‌ ಕೂಡಲೇ ಜನ ನೀರು ಹಿಡಿಯಲು ತಾ ಮುಂದು, ನಾ ಮುಂದು ಎಂದು ಮುಗಿಬೀಳುವುದು, ಜಗಳವಾಡುವುದು ಸಾಮಾನ್ಯವಾಗಿದೆ. ವಾರ್ಡ್‌ ನಿವಾಸಿಗಳು ನಿತ್ಯ ಬೆಳಗ್ಗೆ ಸದಸ್ಯರ ಮನೆಗೆ ಹೋಗಿ ನೀರು ಒದಗಿಸುವಂತೆ ದುಂಬಾಲು ಬೀಳುತ್ತಿದ್ದಾರೆ. ಇದು ವಾರ್ಡ್‌ ಸದಸ್ಯರಿಗೆ ತಲೆನೋವಾಗಿ ಪರಿಣಮಿಸಿದೆ.

ಟ್ಯಾಂಕರ್‌ ಬಾಡಿಗೆಗಿಲ್ಲ ಹಣ: ಇನ್ನು ಟ್ಯಾಂಕರ್‌ ನೀರು ಪೂರೈಸುವ ಟ್ರ್ಯಾಕ್ಟರ್‌ನವರಿಗೆ, ಬಾಡಿಗೆ ಬೋರ್‌ವೆಲ್ನವರಿಗೆ ಪುರಸಭೆ ಲಕ್ಷಾಂತರ ರೂ. ಪಾವತಿಸಬೇಕಿದೆ. ಮಾಲೀಕರು ಹಣ ಪಾವತಿಸುವಂತೆ ಅಧಿಕಾರಿಗಳ ಬೆನ್ನತ್ತಿದ್ದಾರೆ. ಆದರೆ ಜಿಲ್ಲಾಡಳಿತ ಇನ್ನೂ ಪುರಸಭೆಗೆ ಅನುದಾನ ಬಿಡುಗಡೆ ಮಾಡದ್ದರಿಂದ ಮುಖ್ಯಾಧಿಕಾರಿ ಗೊಂದಲಕ್ಕೀಡಾಗಿದ್ದಾರೆ ಎನ್ನಲಾಗಿದೆ. ಜಿಲ್ಲಾಡಳಿತ ಅನುದಾನ ಬಿಡುಗಡೆ ಮಾಡಿದ ನಂತರ ಬಾಡಿಗೆ ಪಾವತಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಟ್ರ್ಯಾಕ್ಟರ್‌ ಮಾಲೀಕರೊಬ್ಬರು ತಿಳಿಸಿದ್ದಾರೆ. ಕೂಡಲೇ ಜಾಕ್‌ವೆಲ್ನಲ್ಲಿನ ಯಂತ್ರೋಪಕರಣ ಮತ್ತು ಟಿಸಿ ದುರಸ್ತಿ ಮಾಡಿ ನೀರು ಪೂರೈಕೆಗೆ ಕ್ರಮ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಗಾಗಲ್ ಬಳಿಯ ಜಾಕ್‌ವೆಲ್ನ ಮೂರು ಟಿಸಿಗಳು ಮುಳುಗಡೆಯಾಗಿದ್ದು, ದುರಸ್ತಿಗೆ ಕಳಿಸಲಾಗಿದೆ. 40 ಲಕ್ಷ ರೂ. ವೆಚ್ಚದ ಕ್ರಿಯಾಯೋಜನೆ ರೂಪಿಸಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರ ಜತೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಲಾಗುತ್ತದೆ.
ತಿಮ್ಮಪ್ಪ ಜಗಲಿ,
 ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.