ಬಿಸಿಯೂಟಕ್ಕೆ ಕೋಣೆ ಕೊರತೆ

ಹೊಸದಾಗಿ 5 ಬಿಸಿಯೂಟ ಕೋಣೆಗೆ ಪ್ರಸ್ತಾವನೆ • ಬಹುತೇಕ ಶಾಲೆಗಳಲ್ಲಿ ನೀರಿನದ್ದೇ ಸಮಸ್ಯೆ

Team Udayavani, Jun 24, 2019, 10:53 AM IST

24-June-8

ದೇವದುರ್ಗ: ಸಪ್ತಗಿರಿ ಕಾಲೋನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ.

ದೇವದುರ್ಗ: ಪಟ್ಟಣ ಸೇರಿ ತಾಲೂಕಿನ 63 ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಕೋಣೆಗಳು ಶಿಥಿಲಗೊಂಡಿವೆ. ಹೊಸದಾಗಿ 5 ಬಿಸಿಯೂಟ ಕೋಣೆಗಳಿಗೆ ಪ್ರಸ್ತವನೆ ಸಲ್ಲಿಸಲಾಗಿದೆ.

ತಾಲೂಕಿನ ಅಂಚೆಸುಗೂರು, ಅರಕೇರಾ, ಜಾಲಹಳ್ಳಿ, ಗಲಗ, ಕಜ್ಜಿಬಂಡಿ, ದೇವರಗುಡ್ಡ, ಸೂಗುರಾಳ, ಸಪ್ತಗಿರಿ ಕಾಲೋನಿ, ಕೆಇಬಿ ಕಾಲೋನಿ, ವಾಚ ನಾಯಕ ತಾಂಡಾ ಸೇರಿ 63 ಶಾಲೆಗಳಲ್ಲಿ ಬಿಸಿಯೂಟ ಕೋಣೆಗಳು ಶಿಥಿಲಗೊಂಡಿವೆ. ಮಳೆ ಬಂದಾಗ ಬಿಸಿಯೂಟದ ಆಹಾರ ಪದಾರ್ಥಗಳು ಸಾಮಗ್ರಿಗಳನ್ನು ರಕ್ಷಿಸಿಕೊಳ್ಳಲು ಅಡುಗೆ ಸಿಬ್ಬಂದಿ ಪರದಾಡುವಂತಾಗಿದೆ. ಕೋಣೆಗಳ ಸಮಸ್ಯೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಸರ್ಕಾರದಿಂದ ಅನುದಾನ ಬಂದರೆ ದುರಸ್ತಿ ಮಾಡಲಾಗುತ್ತದೆ ಎಂದು ಹೇಳುತ್ತಿದ್ದಾರೆನ್ನಲಾಗಿದೆ.

ಪ್ರಸ್ತಾವನೆ: ತಾಲೂಕಿನ ಕೊತ್ತದೊಡ್ಡಿ, ಕೆ.ಇರಬಗೇರಾ, ಶಿವಂಗಿ, ಆದರ್ಶ ಸೇರಿ 5 ಆರ್‌ಎಂಎಸ್‌ಎ ಶಾಲೆಗಳಲ್ಲಿ ಬಿಸಿಯೂಟ ಕೋಣೆಗಳೇ ಇಲ್ಲ. ಶಾಲೆ ಹೊರಗೆ ಬಿಸಿಯೂಟ ತಯಾರಿಸಲಾಗುತ್ತಿದೆ. ಮಳೆ ಬಂದರೆ ಶಾಲೆಯ ಯಾವುದಾದರೊಂದು ಕೋಣೆಯಲ್ಲಿ ಅಡುಗೆ ತಯಾರಿಸಲಾಗುತ್ತಿದೆ. ಈ ಶಾಲೆಗಳಿಗೆ ಬಿಸಿಯೂಟ ಕೋಣೆ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಂದು, ನಾಳೆ ಎಂದು ದಿನ ದೂಡಲಾಗುತ್ತಿದೆ ಎಂದು ಶಿಕ್ಷಕರು ದೂರಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ: ಪಟ್ಟಣ ಸೇರಿ ತಾಲೂಕಿನಾದ್ಯಂತ 349 ಸರಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿ ಮತ್ತು ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಅಡುಗೆ ಸಿಬ್ಬಂದಿ ನೀರಿದ್ದಲ್ಲಿಗೆ ಹೋಗಿ ತರುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಂತೂ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೊಳವೆಬಾವಿಗಳ ಉಪ್ಪು ನೀರನ್ನೇ ಬಿಸಿಯೂಟಕ್ಕೆ ಬಳಸಲಾಗುತ್ತಿದೆ.

ನೀರಿನ ಸೌಲಭ್ಯ ಕಲ್ಪಿಸಲು ಹಿಂದೇಟು: ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ಮೂಲಕ ಶಾಲೆಗಳಿಗೆ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದರೂ ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕಚೇರಿಗೆ ಬರುವುದೇ ಅಪರೂಪ. ಹೀಗಾಗಿ ಶಾಲೆಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಸಿಗದಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.

ಆಗ್ರಹ: ಕೂಡಲೇ ಜಿಲ್ಲಾಡಳಿತ, ಸರ್ಕಾರ ಶಿಥಿಲಗೊಂಡ ಬಿಸಿಯೂಟ ಕೋಣೆ ದುರಸ್ತಿಗೊಳಿಸಬೇಕು. ಹೊಸದಾಗಿ ಬಿಸಿಯೂಟ ಕೋನೆ ಮಂಜೂರು ಮಾಡಬೇಕು. ನೀರಿನ ಸಮಸ್ಯೆ ಪರಿಹರಿಸ ಬೇಕೆಂದು ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಶಬ್ಬೀರ ಜಾಲಹಳ್ಳಿ ಆಗ್ರಹಿಸಿದ್ದಾರೆ.

ಶಿಥಿಲಗೊಂಡ ಬಿಸಿಯೂಟ ಕೋಣೆ ಹೊಸದಾಗಿ ನಿರ್ಮಿಸಲು ಕೋಣೆಗಳ ಪಟ್ಟಿ ತಯಾರಿಸಿ ಈಗಾಗಲೇ ಸರಕಾರಕ್ಕೆ ಕಳಿಸಲಾಗಿದೆ. ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಅನುದಾನ ಬಿಡಗಡೆ ಮಾಡುವ ಭರವಸೆ ನೀಡಿದ್ದಾರೆ.
••ಇಂದಿರಾ ಆರ್‌.,
ಜಿಲ್ಲಾ ಬಿಸಿಯೂಟ ಯೋಜನಾಧಿಕಾರಿ ರಾಯಚೂರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.