ಪುರಸಭೆಯಲ್ಲಿ ವಾಹನ ವಿಮೆಗಿಲ್ಲ ಹಣ

ತುಕ್ಕು ಹಿಡಿಯುತ್ತಿವೆ ಕಸ ವಿಲೇವಾರಿ ಆರು ಮಿನಿ ವಾಹನ-ಜೆಸಿಬಿ•ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆ

Team Udayavani, Jul 18, 2019, 4:59 PM IST

18-July-47

ದೇವದುರ್ಗ: ಪುರಸಭೆ ನೈರ್ಮಲ್ಯ ಕಚೇರಿ ಆವರಣದ ಜೆಸಿಬಿ, ಮಿನಿ ವಾಹನಗಳನ್ನು ನಿಲ್ಲಿಸಲಾಗಿದೆ.

ದೇವದುರ್ಗ: ಹೊಸದಾಗಿ ಖರೀದಿಸಿದ ವಾಹನಗಳ ಇನ್ಸೂರೆನ್ಸ್‌ ಮಾಡಿಸಲು ಪುರಸಭೆಯಲ್ಲಿ ಹಣವಿಲ್ಲದ್ದರಿಂದ ಅವುಗಳು ರಸ್ತೆಗಿಳಿಯದೇ ಪುರಸಭೆ ನೈರ್ಮಲ್ಯ ಕಚೇರಿ ಆವರಣದಲ್ಲಿ ಮಳೆ ಬಿಸಿಲಿಗೆ ತುಕ್ಕು ಹಿಡಿಯುತ್ತಿವೆ.

ಜೆಸಿಬಿ-6 ಮಿನಿ ವಾಹನ: ಪುರಸಭೆ ಎಸ್‌ಎಫ್‌ಸಿ ಯೋಜನೆಯಡಿ 30 ಲಕ್ಷ ರೂ. ವೆಚ್ಚದಲ್ಲಿ ಹಸಿ, ಒಣ ತ್ಯಾಜ್ಯ ವಿಲೇವಾರಿ ಮಾಡಲು ಆರು ಮಿನಿ ಕಸ ಸಂಗ್ರಹ ವಾಹನ ಖರೀದಿಸಿದೆ. ಆರೇಳು ತಿಂಗಳಾದರೂ ವಾಹನಗಳ ಇನ್ಸೂರೆನ್ಸ್‌ ಮಾಡಲು ಹಣವಿಲ್ಲದ್ದರಿಂದ ನೈರ್ಮಲ್ಯ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದ್ದು, ಮಳೆ-ಬಿಸಿಲಿಗೆ ತುಕ್ಕು ಹಿಡಿಯುತ್ತಿವೆ. ಇನ್ನು ಎಸ್‌ಎಫ್‌ಸಿ ಯೋಜನೆಯಡಿ ಲಕ್ಷಾಂತರ ರೂ. ವೆಚ್ಚದಲ್ಲಿ ಜೆಸಿಬಿ ಖರೀದಿಸಿದ್ದು, ಎರಡು ವರ್ಷವಾದರೂ ಇದರ ಇನ್ಸೂರೆನ್ಸ್‌ ಕೂಡ ಮಾಡಿಸಿಲ್ಲ ಎನ್ನಲಾಗಿದೆ. ಇದನ್ನೂ ನೈರ್ಮಲ್ಯ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದೆ. ಲಕ್ಷಾಂತರ ರೂ. ವ್ಯಯಿಸಿ ಖರೀದಿಸಿದ ವಾಹನಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈಗ ನಿರುಪಯುಕ್ತವಾಗಿ ನಿಂತಿವೆ. ವಾರ್ಡ್‌ನಲ್ಲಿ ಸಣ್ಣಪುಟ್ಟ ಕೆಲಸ ಕಾರ್ಯಕ್ಕೆ ತಗ್ಗು ಗುಂಡಿ ಮುಚ್ಚಲು, ಜಾಲಿಗಿಡಗಳು ಸ್ವಚ್ಛತೆ ಸೇರಿ ಇತರೆ ಅಭಿವೃದ್ಧಿ ಕೆಲಸಕ್ಕೆ ಜೆಸಿಬಿ ಬಳಕೆಯಾಗುತ್ತಿಲ್ಲ.

ರಚನೆ ಆಗದ ಆಡಳಿತ ಮಂಡಳಿ: ಕಸ ವಿಲೇವಾರಿ ಆಗುತ್ತಿಲ್ಲ: ಪುರಸಭೆ ಚುನಾವಣೆ ಮುಗಿದು 10 ತಿಂಗಳಾದರೂ ಆಡಳಿತ ಮಂಡಳಿ ರಚನೆ ಆಗಿಲ್ಲ. ಹೀಗಾಗಿ ಪುರಸಭೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಆಡಿದ್ದೇ ಆಟವಾದಂತಾಗಿದೆ. ಪಟ್ಟಣದಲ್ಲಿ ಕಸ ವಿಲೇವಾರಿ, ಚರಂಡಿ ಸ್ವಚ್ಛತೆ, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಆಗಿದೆ. ತಮಗೆ ತಿಳಿದಂತೆ ನಡೆದುಕೊಳ್ಳುತ್ತಿರುವ ಪುರಸಭೆ ಸಿಬ್ಬಂದಿಗೆ ಚುರುಕು ಮುಟ್ಟಿಸಲು ಸದಸ್ಯರಿಗೆ ಅಧಿಕಾರವಿಲ್ಲದಂತಾಗಿದೆ.

ಜನರ ದೂರಿಗಿಲ್ಲ ಸ್ಪಂದನೆ: ಪುರಸಭೆಯ 23 ವಾರ್ಡ್‌ಗಳಲ್ಲಿ ಜನ ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಪುರಸಭೆಗೆ ಜನತೆ ದೂರು ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಪುರಸಭೆ ಮುಖ್ಯಾಧಿಕಾರಿ ಆಗಾಗ ಮಿಟಿಂಗ್‌ ನೆಪದಲ್ಲಿ ಗೈರಾಗುವುದರಿಂದ ದೂರುಗಳ ಪಟ್ಟಿ ಬೆಳೆಯುತ್ತಿದೆ ಎಂದು ನಿವಾಸಿ ಅಹ್ಮದ್‌ ಪಾಷಾ ದೂರಿದ್ದಾರೆ.

ಆಗ್ರಹ: ಲಕ್ಷಾಂತರ ರೂ. ವ್ಯಯಿಸಿ ಖರೀದಿಸಿದ ವಾಹನಗಳ ವಿಮೆ ಮಾಡಿಸಿ ಬಳಕೆಗೆ ಮುಂದಾಗಬೇಕೆಂದು ಪುರಸಭೆ ಮಾಜಿ ಸದಸ್ಯ ಚಂದ್ರಶೇಖರ ಚಲುವಾದಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.