ಶಾದಿಮಹಲ್ ಕಾಮಗಾರಿ ಅಪೂರ್ಣ

ಜನಪತ್ರಿನಿಧಿಗಳು-ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಸ್ಲಿಂ ಸಮಾಜಕ್ಕೆ ಅನಾನುಕೂಲ

Team Udayavani, Jul 29, 2019, 12:57 PM IST

29-July-26

ದೇವದುರ್ಗ: ಮಾಳಗಡ್ಡಯಲ್ಲಿ ನಿರ್ಮಿಸಲಾದ ಶಾದಿಮಹಲ್‌ ಅಪೂರ್ಣ ಜಾಲಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಶಾದಿಮಹಲ್‌ ಸುತ್ತು ಜಾಲಿಗಿಡ ಬೆಳೆದಿವೆ.

ನಾಗರಾಜ ತೇಲ್ಕರ್‌
ದೇವದುರ್ಗ:
ಪಟ್ಟಣ ಸೇರಿ ಜಾಲಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಶಾದಿಮಹಲ್ ಕಾಮಗಾರಿ ಅಪೂರ್ಣವಾಗಿದ್ದು, ಜಾಲಿ ಗಡಿಗಳ ಮಧ್ಯೆ ಕಟ್ಟಡಗಳು ಮುಚ್ಚಿ ಹೋಗಿವೆ.

ಆರೇಳು ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡು ಮುಸ್ಲಿಂ ಸಮುದಾಯದ ಮದುವೆ, ಸಭೆ ಸಮಾರಂಭಕ್ಕೆ ಅನುಕೂಲ ಕಲ್ಪಿಸಬೇಕಾದ

ಜನಪತ್ರಿನಿಧಿಗಳು ಮತ್ತು ಅಧಿಕಾರಿಗಳು ಕಣ್ಣೆತ್ತಿ ನೋಡದೇ ಇರುವುದರಿಂದ ಸಮಾಜಕ್ಕೆ ಅನಾನುಕೂಲವಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಅಲ್ಪಸಂಖ್ಯಾತರ ಮದುವೆ, ಸಭೆ ಸಮಾರಂಭಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದ ಹಿನ್ನೆಲೆಯಲ್ಲಿ ಜಾಲಹಳ್ಳಿ ಗ್ರಾಮದ ಹೊರವಲಯದಲ್ಲಿ ಶಾದಿಮಹಲ್ ಕಟ್ಟಡ ಸುಮಾರು ವರ್ಷಗಳಿಂದ ಪೂರ್ಣಗೊಳ್ಳದೇ ಅಪೂರ್ಣ ಸ್ಥಿತಿಯಲ್ಲಿದೆ. ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ ತಮ್ಮ ಅಧಿಕಾರ ಅವಧಿಯಲ್ಲಿ ಶಾದಿಮಹಲ್ ಕಾಮಗಾರಿಗೆ ಚಾಲನೆ ನೀಡಿದ್ದರು. ಬದಲಾದ ಸರಕಾರಗಳು ಕಾಮಗಾರಿ ಪೂರ್ಣಗೊಳಿಸಲು ಅನುದಾನ ನೀಡದೇ ಇರುವುದರಿಂದ ಇದೀಗ ಶಾದಿಮಹಲ್ ಜಾಲಿಗಿಡಗಳ ಮಧ್ಯ ಅನಾಥವಾಗಿದೆ. 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶಾದಿಮಹಲ್ ಕಾಮಗಾರಿ ಶೇ.75ರಷ್ಟು ಪೂರ್ಣವಾಗಿದೆ. ಉಳಿದ ಕೆಲಸ ಮುಗಿಸಲು ಅನುದಾನ ನೀಡುವಂತೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಮತ್ತು ಅಧಿಕಾರಿಗಳ ಬೇಜವಾಬ್ದಾರಿಯಿಂದ ಇದೀಗ ಕಟ್ಟಡ ನಿರುಪಯುಕ್ತವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಹಟ್ಟಿ ಚಿನ್ನದ ಗಣಿ ಕಂಪನಿ ವತಿಯಿಂದ 50 ಲಕ್ಷ ರೂ. ಅನುದಾನದಲ್ಲಿ ಪಟ್ಟಣದ ಮಾಳಗಡ್ಡಯಲ್ಲಿ ಶಾದಿಮಹಲ್ ನಿರ್ಮಾಣ ಜವಾಬ್ದಾರಿಯನ್ನು ಲ್ಯಾಂಡ್‌ಆರ್ಮಿ ಸಂಸ್ಥೆಗೆ ವಹಿಸಲಾಗಿತ್ತು. ಶಾದಿಮಹಲ್ ಕಟ್ಟಡ ಪೂರ್ಣಗೊಳ್ಳುವ ಮೊದಲೇ ಅನುದಾನ ಖರ್ಚಾಗಿದೆ ಎನ್ನಲಾಗುತ್ತಿದೆ. ಕಟ್ಟಡ ಸುತ್ತಲೂ ಜಾಲಿಗಿಡಗಳು ಬೆಳೆದು ನಿಂತಿವೆ. ಶೇ.90ರಷ್ಟು ಕೆಲಸ ಪೂರ್ಣವಾಗಿದೆ. ಆರೇಳು ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಮುಗಿಯುತ್ತದೆ. ವಿದ್ಯುತ್‌, ಸುಣ್ಣಬಣ್ಣ ಇತರೆ ಸಣ್ಣಪುಟ್ಟ ಕೆಲಸಗಳು ಬಾಕಿ ಇದ್ದು, ಸಮಾಜದ ಮುಖಂಡರು ಶಾದಿಮಹಲ್ ಕಾಮಗಾರಿ ಮುಗಿಸುವಂತೆ ಜನಪತ್ರಿನಿಧಿಗಳು ಮತ್ತು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡು ಗಮನಹರಿಸುತ್ತಿಲ್ಲ ಎನ್ನಲಾಗುತ್ತಿದೆ.

ಪಟ್ಟಣ ಸೇರಿ ಜಾಲಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಎರಡು ಶಾದಿಮಹಲ್ಗಳು ವರ್ಷಗಳೇ ಗತಿಸಿದರೂ ಪೂರ್ಣವಾಗಿಲ್ಲ. ಮದುವೆ, ಸಭೆ ಸಮಾರಂಭ ಮಾಡಲು ಸಾವಿರಾರ ರೂ. ವೆಚ್ಚ ಭರಿಸಬೇಕಾಗುತ್ತಿದೆ. ಆದ್ದರಿಂದ ಅಗತ್ಯ ಅನುದಾನ ನೀಡಿ ಬೇಗನೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಮಾಜದ ಮುಖಂಡ ಮಹ್ಮದ್‌ ಜಾನಿ ಆಗ್ರಹಿಸಿದ್ದಾರೆ.

ಜಾಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಶಾದಿಮಹಲ್ ಪೂರ್ಣಗೊಳಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇಲ್ಲಿನ ಶಾದಿಮಹಲ್ ಕಾಮಗಾರಿ ಪೂರ್ಣಗೊಳಿಸಿ ಸಭೆ, ಸಮಾರಂಭ ನಡೆಸಲು ಬಡ ಕುಟುಂಬಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಹಾಜಿ ಮಲ್ಲಿಕ್‌ ಅಹ್ಮದ್‌, ನೂರು ಮಹ್ಮದ್‌ ಬಳಿಗಾರ ಒತ್ತಾಯಿಸಿದ್ದಾರೆ.

ವಿದ್ಯುತ್‌, ಸುಣ್ಣಬಣ್ಣ ಇತರೆ ಸಣ್ಣಪುಟ್ಟ ಕೆಲಸಗಳು ಬಾಕಿ ಉಳಿದಿವೆ. ಮಾಜಿ ಸಂಸದ ಬಿ.ವಿ. ನಾಯಕ ಅವರಿಗೆ ಹಲವು ಬಾರಿ ಅನುದಾನ ನೀಡಿ ಮುಸ್ಲಿಂ ಸಮುದಾಯಕ್ಕೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.
ಫಾರುಕ್‌ ಅಹ್ಮದ್‌,
 ಶಾದಿಮಹಲ್ ಕಮಿಟಿ ಅಧ್ಯಕ್ಷ

ಟಾಪ್ ನ್ಯೂಸ್

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.