ಘನತ್ಯಾಜ್ಯ ವಿಲೇವಾರಿಯದ್ದೇ ಚಿಂತೆ

ಘಟಕದಲ್ಲಿ ನಿರ್ಮಿಸಲಾದ ಕಾವಲುಗಾರ ಕೋಣೆ ಸಿಬ್ಬಂದಿ ನೇಮಕವಿಲ್ಲದೇ ನಿರುಪಯುಕ್ತ

Team Udayavani, Aug 3, 2019, 10:47 AM IST

3-Agust-10

ದೇವದುರ್ಗ: ಪೊಲೀಸ್‌ ಠಾಣೆ ಹತ್ತಿರ ಬೆಟ್ಟದಲ್ಲಿ ಹಾಕಲಾಗಿರುವ ಕಸ

ನಾಗರಾಜ ತೇಲ್ಕರ್‌
ದೇವದುರ್ಗ:
ಪಟ್ಟಣದ 23 ವಾರ್ಡ್‌ಗಳಿಂದ ಸಂಗ್ರಹವಾಗುವ ಒಣ, ಹಸಿ ಕಸ ವಿಲೇವಾರಿಯದ್ದೇ ಚಿಂತೆಯಾಗಿದೆ. ಘಟಕದಲ್ಲಿ ಜಾಲಿಗಿಡ ಬೆಳೆದ ಹಿನ್ನೆಲೆಯಲ್ಲಿ ಅಸ್ವಚ್ಛತೆ ವಾತಾವರಣ ನಿರ್ಮಾಣವಾಗಿದೆ. ಎಲ್ಲೆಂದರಲ್ಲಿ ಘನತ್ಯಾಜ್ಯ ಕಸ ಎಸೆಯುವುದರಿಂದ ರೋಗರುಜಿನಿಗಳ ಭೀತಿ ಕಾಡುತ್ತಿದೆ. ಸಮಸ್ಯೆಗೆ ಪುರಸಭೆ ಅಧಿಕಾರಿಗಳೇ ಕಾರಣ ಎನ್ನಲಾಗುತ್ತಿದೆ.

ಪಟ್ಟಣದ ಹೊರವಲಯದ ಕೊಪ್ಪರ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯೆ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ನಿರ್ಮಿಸಲಾಗಿದೆ. ಪುರಸಭೆ ಎಸ್‌ಎಫ್‌ಸಿ ಯೋಜನೆ ಅಡಿ 10 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಡ್‌ ನಿರ್ಮಿಸಿದೆ. ಘಟಕ ಒಳಗೆ ಜಾಲಿಗಿಡಗಳು ಬೆಳೆದು ಅಸ್ವಚ್ಛತೆ ನಿರ್ಮಾಣವಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛತೆಗೆ ಗಮನಹರಿಸಲು ಹಿಂದೇಟು ಹಾಕಿದ ಪರಿಣಾಮ ಇದೀಗ ಕಸ ವಿಲೇವಾರಿ ಸಮಸ್ಯೆಯಾಗಿ ಕಾಡುತ್ತಿದೆ.

ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ಕಾವಲುಗಾರ ಕೋಣೆ ನಿರ್ಮಿಸಲಾಗಿದೆ. ಸಿಬ್ಬಂದಿ ನೇಮಕವಿಲ್ಲದೇ ಕಾವಲುಗಾರ ಕೋಣೆ ನಿರುಪಯುಕ್ತವಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಳಸಿದ ಔಷಧಿ ಬಾಟಲ್ ಸೇರಿ ಇತರೆ ವಸ್ತುಗಳನ್ನು ವಾಹನದಲ್ಲಿ ತಂದು ಘಟಕದಲ್ಲಿ ಹಾಕಲಾಗುತ್ತಿದೆ.

ಪಟ್ಟಣದ 23 ವಾರ್ಡ್‌ಗಳಲ್ಲಿ ಸಂಗ್ರಹವಾಗುವ ಒಣ, ಹಸಿ ಕಸ ವಿಲೇವಾರಿ ಘನತ್ಯಾಜ್ಯ ವಸ್ತು ಘಟಕಕ್ಕೆ ಕಸ ಒಯ್ಯದೇ ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಡಾನ್‌ ಬಾಸ್ಕೋ ವಿದ್ಯಾ ಸಂಸ್ಥೆ ಹತ್ತಿರ, ವೆಂಗಳಾಪುರಕ್ಕೆ ಹೋಗುವ ಮಾರ್ಗದ ಪೊಲೀಸ್‌ ಠಾಣೆ ಹತ್ತಿರ ಬೆಟ್ಟದಲ್ಲಿ ಕಸ ಎಸೆಯಲಾಗುತ್ತಿದೆ. ಪ್ಲಾಸ್ಟಿಕ್‌ ಸೇರಿ ಇತರೆ ವಸ್ತುಗಳನ್ನುವಾರಕ್ಕೊಂದು ಬಾರಿ ಬೆಂಕಿ ಹಚ್ಚಿ ಸುಟ್ಟು ಹಾಕಬೇಕು. ಪುರಸಭೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ಇದೀಗ ಸಾಂಕ್ರಮಿಕ ರೋಗರುಜಿನಿಗಳ ಭೀತಿಯಲ್ಲಿ ನಿವಾಸಿಗಳು ತತ್ತರಿಸಿದ್ದಾರೆ.

ಒಣ, ಹಸಿ ಕಸ ವಿಲೇವಾರಿ ಮಾಡುವ ಉದ್ದೇಶದಿಂದ ಲಕ್ಷಾಂತರ ರೂ. ವೆಚ್ಚದಲ್ಲಿ ಆರು ಟಂಟಂ ವಾಹನಗಳನ್ನು ಖರೀದಿಸಲಾಗಿದೆ. ವಾಹನಕ್ಕೆ ವಿಮೆ ಮಾಡಿಸಲು ಹಣವಿಲ್ಲದೇ ಕಾರಣ ಕಳೆದ ಆರೇಳು ತಿಂಗಳಿಂದ ನೈರ್ಮಲ್ಯ ಕಚೇರಿ ಆವರಣದಲ್ಲಿ ವಾಹನಗಳನ್ನು ನಿಲ್ಲಿಸಲಾಗಿದೆ. ಪಟ್ಟಣದಲ್ಲಿ ದಿನೇ ದಿನೇ ಘನತ್ಯಾಜ್ಯ ಅತಿ ಪ್ರಮಾಣದಲ್ಲಿ ಸಂಗ್ರಹವಾಗುತ್ತಿದೆ. ಆದರೆ ವಿಲೇವಾರಿ ಮಾಡಲು ಸಿಬ್ಬಂದಿ ಹೈರಾಣಾಗಿದ್ದಾರೆ.

ಪುರಸಭೆಯಲ್ಲಿ ದಿನಗೂಲಿ ಕೆಲಸ ಮಾಡುವ 45 ಸಿಬ್ಬಂದಿಗೆ ಕಳೆದ 15 ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಇದರಿಂದ ಕುಟುಂಬ ನಿರ್ವಹಣೆ ತೀರ ಸಂಕಷ್ಟವಾಗಿದೆ. ಇಂದೋ ನಾಳೆ ಪಾವತಿಸುವುದಾಗಿ ಅಧಿಕಾರಿಗಳ ಹುಸಿ ಭರವಸೆ ಸಿಬ್ಬಂದಿ ಪರದಾಡುವಂತಾಗಿದೆ. ಹಲವು ಬಾರಿ ಹೋರಾಟ ಮಾಡಿದರೂ ಸಿಬ್ಬಂದಿ ಸಮಸ್ಯೆ ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ಸಿಬ್ಬಂದಿ ಅಳಲು ತೊಡಿಕೊಂಡರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.