ರಾಜ್ಯ ಹೆದ್ಧಾರಿ ನಿರ್ವಹಣೆಗೆ ವಿಫಲ

ಕಿತ್ತು ಹೋದ ರಸ್ತೆ ವಿಭಜಕದ ಕಬ್ಬಿಣದ ರಕ್ಷಣಾ ಗೋಡೆ „ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚಾರಕ್ಕೆ ಪ್ರಯಾಸ-ಅಪಘಾತಕ್ಕೆ ಆಹ್ವಾನ

Team Udayavani, Nov 15, 2019, 1:19 PM IST

15-November-9

ದೇವದುರ್ಗ: ಪಟ್ಟಣದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ನಿರ್ವಹಣೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ರಸ್ತೆಯಲ್ಲಿ ಬೃಹದಾಕಾರದ ಗುಂಡಿಗಳು ಬಿದ್ದಿವೆ. ರಸ್ತೆ ವಿಭಜಕಗಳಿಗೆ ಹಾಕಿದ್ದ ಕಬ್ಬಿಣದ ರಕ್ಷಣಾ ಗೋಡೆ ಅಲ್ಲಲ್ಲಿ ಕಿತ್ತೋಗಿವೆ.

ಪಟ್ಟಣದ ಗೌರಂಪೇಟೆ ಮಹರ್ಷಿ ವಾಲ್ಮೀಕಿ ವೃತ್ತದಿಂದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವರೆಗೆ ರಾಜ್ಯ ಹೆದ್ದಾರಿ ಮಧ್ಯದ ರಸ್ತೆ ವಿಭಜಕಕ್ಕೆ ಅಳವಡಿಸಿದ್ದ ಕಬ್ಬಿಣದ ರಕ್ಷಣಾ ಗೋಡೆ ಎಲ್ಲೆಂದರಲ್ಲಿ ಕಿತ್ತಿ ಹೋಗಿದೆ. ಇದರಿಂದಾಗಿ ವೇಗವಾಗಿ ಬರುವ ವಾಹನಗಳು ಆಕಸ್ಮಿಕವಾಗಿ ರಸ್ತೆ ಮಧ್ಯದ ವಿಭಜಕ ಹತ್ತಿ ಇನ್ನೊಂದು ಬದಿಯ ರಸ್ತೆಗೆ ಇಳಿಯುವ ಅಪಾಯ ಎದುರಾಗಿದೆ. ಇನ್ನು ರಸ್ತೆಯಲ್ಲಿ ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿದ್ದರಿಂದ ಬೈಕ್‌, ಕಾರ್‌ ಸೇರಿ ಭಾರೀ ವಾಹನಗಳ ಚಾಲಕರು ಸರ್ಕಸ್‌ ಮಾಡುತ್ತ ವಾಹನ ಚಲಾಯಿಸಬೇಕಿದೆ.

ಇಲ್ಲಿನ ಸಮಸ್ಯೆ ಕುರಿತು ಸಂಘ-ಸಂಸ್ಥೆಯವರು ಮೌಖೀಕವಾಗಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಲೋಕೋಪಯೋಗಿ ಇಲಾಖೆಯ ಎಇಇ ಬಿ.ಬಿ. ಪಾಟೀಲ ಮತ್ತು ಜೆಇಗಳು ಕಚೇರಿಗೆ ಬರುವುದೇ ಅಪರೂಪವಾಗಿದೆ. ಕೆಲಸ ಕಾರ್ಯ ನಿಮಿತ್ತ ಲೋಕೋಪಯೋಗಿ ಇಲಾಖೆ ಕಚೇರಿಗೆ ಹೋದರೆ ಇರುವ ಸಿಬ್ಬಂದಿ ಸಾಹೇಬರು ಕಾಮಗಾರಿ ನಡೆಯುವ ಸ್ಥಳಕ್ಕೆ ಹೋಗಿದ್ದಾರೆ ಎಂಬ ಹಾರಿಕೆ ಉತ್ತರ ನೀಡುತ್ತಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ರಸ್ತೆ ತುಂಬ ಗುಂಡಿ: ಪಟ್ಟಣದ ಜಹಿರುದ್ದೀನ್‌ ವೃತ್ತದ ಪಕ್ಕದಲ್ಲೇ ಸುಮಾರು 10 ಮೀಟರ್‌ ಅಗಲದಷ್ಟು ಗುಂಡಿ ಬಿದ್ದು ನಾಲ್ಕೈದು ತಿಂಗಳಾದರೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಡಾಂಬರ್‌ ಹಾಕಿ ದುರಸ್ತಿ ಮಾಡಲು ಮುಂದಾಗಿಲ್ಲ. ಹೀಗಾಗಿ ಬೈಕ್‌ ಇತರೆ ವಾಹನ ಸವಾರರು ಎದ್ದು ಬಿದ್ದು ಸಂಚಾರ ಮಾಡಬೇಕಾಗಿದೆ.

ಬೆಳಗದ ವಿದ್ಯುತ್‌ ದೀಪ: ಇನ್ನು ಹೆದ್ದಾರಿಯುದ್ದಕ್ಕೂ ರಸ್ತೆ ವಿಭಜಕ ಮಧ್ಯದಲ್ಲಿ ಅಳವಡಿಸಿದ ವಿದ್ಯುತ್‌ ದೀಪಗಳು ಬೆಳಗುತ್ತಿಲ್ಲ. ರಾತ್ರಿ ಸಂಚರಿಸುವ ಪಾದಚಾರಿಗಳಿಗೆ ವಾಹನಗಳ ಲೈಟಿನ್‌ ಬೆಳಕೇ ಆಧಾರವಾಗಿದೆ. ಕಂಬಗಳಲ್ಲಿನ ವಿದ್ಯುತ್‌ ದೀಪ ಬೆಳಗದ್ದರಿಂದ ಹಲವು ಬಾರಿ ಅಪಘಾತಗಳು ಕೂಡ ಜರುಗಿವೆ ಎನ್ನುತ್ತಾರೆ ಸಾರ್ವಜನಿಕರು.

ಕೇಬಲ್‌ ಹಾಕಲು ರಸ್ತೆ ಅಗೆತ: ಬಿಎಸ್‌ಎನ್‌ಎಲ್‌ ಕೇಬಲ್‌ ಅಳವಡಿಸಲು ಗುಣಮಟ್ಟದ ರಸ್ತೆ ಅಗೆದು ಕೇಬಲ್‌ ಹಾಕಲಾಗಿದೆ. ಕೇಬಲ್‌ ಹಾಕಿದ ನಂತರ ರಸ್ತೆಯಲ್ಲಿ ತೋಡಿದ ಗುಂಡಿಗಳನ್ನು ಅರೆಬರೆಯಾಗಿ ಮುಚ್ಚಲಾಗಿದೆ. ಹೀಗಾಗಿ ಬೈಕ್‌ ಸವಾರರು ಆಗಾಗ ಬಿದ್ದು ಗಾಯಗೊಂಡ ಘಟನೆಗಳು ಜರುಗಿವೆ. ಇನ್ನು ಮಸರಕಲ್‌, ಸುಂಕೇಶ್ವರಹಾಳ, ಕರಡಿಗುಡ್ಡ, ಗಬ್ಬೂರ, ಜಾಲಹಳ್ಳಿ ಸೇರಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಎಲ್ಲೆಂದರಲ್ಲಿ ರಸ್ತೆ ಬಿರುಕು ಬಿಟ್ಟಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ದುರಸ್ತಿಗೆ ಆಗ್ರಹ: ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಕಿತ್ತಿಹೋದ ರಸ್ತೆ ವಿಭಜಕಕ್ಕೆ ಕಬ್ಬಿಣದ ರಕ್ಷಣಾ ಗೋಡೆಯನ್ನು ಮತ್ತೇ ಅಳವಡಿಸಬೇಕು. ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಬೇಕು ಮತ್ತು ಹೆದ್ದಾರಿಯುದ್ದಕ್ಕೂ ರಸ್ತೆ ವಿಭಜಕ ಮಧ್ಯದಲ್ಲಿರುವ ಕಂಬಗಳಿಗೆ ಬಲ್ಬ್ಗಳನ್ನು ಹಾಕಿ ಬೆಳಕಿನ ವ್ಯವಸ್ಥೆ ಮಾಡಬೇಕೆಂದು ಕರವೇ ಮುಖಂಡ ಶಿವುಕುಮಾರ ಛಲುವಾದಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.