ಕೃಷಿ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಆಕ್ರೋಶ

ಕೃಷಿ ಇಲಾಖೆಯಲ್ಲಿ ಲಂಚ ಕೊಟ್ಟರೆ ಮಾತ್ರ ರೈತರಿಗೆ ಸೌಲಭ್ಯ: ಸದಸ್ಯರ ಆರೋಪ

Team Udayavani, Sep 6, 2019, 7:20 PM IST

6-Septecember-35

ದೇವದುರ್ಗ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಹನುಮಂತ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.

ದೇವದುರ್ಗ: ಕೃಷಿ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿಗೆ ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಗುರುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜರುಗಿತು.

ತಾಪಂ ಅಧ್ಯಕ್ಷ ಹನುಮಂತಪ್ಪ ಕಟ್ಟಿಮನಿ ಮಿಯ್ನಾಪುರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಪಂ ಸದಸ್ಯರಾದ ಗೋವಿಂದರಾಜ ನಾಯಕ, ಮಲ್ಲಿನಾಥಗೌಡ ಪಲಕನಮರಡಿ, ಹನುಮಯ್ಯ ಭೂಮನಗುಂಡ ಇತರರು ಮಾತನಾಡಿ, ಕೃಷಿ ಇಲಾಖೆಯಲ್ಲಿ ಅರ್ಹ ರೈತರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಮಧ್ಯವರ್ತಿಗಳಿಗೆ ಸಾವಿರಾರು ರೂ. ಲಂಚ ಕೊಟ್ಟರೆ ಮಾತ್ರ ಕೃಷಿ ಉಪಕರಣಗಳು ಸಿಗುತ್ತವೆ ಎಂದು ದೂರಿದರು. ಆನ್‌ಲೈನ್‌ ಅರ್ಜಿ ಸಲ್ಲಿಸಬೇಕೆನ್ನುತ್ತಿರಿ. ಆದರೆ ಮಧ್ಯವರ್ತಿಗಳಿಗೆ ಅದ್ಹೇಗೆ ನಿಗದಿತ ಅವಧಿಯೊಳಗೆ ಸೌಲಭ್ಯ ಒದಗಿಸುತ್ತಿರಿ ಎಂದು ಕೃ ಇಲಾಖೆ ಸಹಾಯಕ ಅಧಿಕಾರಿ ಸಿದ್ದಾರೆಡ್ಡಿ ಅವರನ್ನು ಪ್ರಶ್ನಿಸಿದರು.

60 ವರ್ಷ ಆದ ಅಂಗನವಾಡಿ ಕಾಯಕರ್ತೆಯರು ಮತ್ತು ಸಹಾಯಕಿಯರಿಗೆ ನಿವೃತ್ತಿ ನೀಡಲಾಗುವುದು. ಈಗಾಗಲೇ ಈ ಕುರಿತು ಎಲ್ಲ ಅಂಗನವಾಡಿ ಕೇಂದ್ರಗಳ ಸಿಬ್ಬಂದಿ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಮೊಟ್ಟೆ ಖರಿದೀಸಿ ವಿತರಿಸುವುದು ಕಾರ್ಯಕರ್ತೆಯರ ಕರ್ತವ್ಯ. ಮೊಟ್ಟೆ ಖರೀದಿ ಮೊತ್ತವನ್ನು ಬಾಲವಿಕಾಸ ಸಮಿತಿ ಖಾತೆಗೆ ಜಮೆ ಮಾಡಲಾಗುವುದು ಎಂದು ಸಿಡಿಪಿಒ ಇಲಾಖೆ ಮೇಲ್ವಿಚಾರಕಿ ಲತಾ ಸಭೆಗೆ ತಿಳಿಸಿದರು.

ಸದಸ್ಯ ಮಹಾದೇವಪ್ಪ ಮಾತನಾಡಿ, ಬಹುತೇಕ ಅಂಗನವಾಡಿಗಳಲ್ಲಿ ಮೊಟ್ಟೆ ವಿತರಿಸುತ್ತಿಲ್ಲ. ಬುದ್ದಿನ್ನಿ ಗ್ರಾಮದಲ್ಲಿ 2 ಅಂಗನವಾಡಿ ಕೇಂದ್ರಗಳಿದ್ದರೂ ಸರಿಯಾಗಿನಡೆಯುತ್ತಿಲ್ಲ. ಮಕ್ಕಳಿಗೆ, ಗರ್ಭಿಣಿಯರಿಗೆ ಏನೂ ಕೊಡುತ್ತಿಲ್ಲ ಎಂದು ದೂರಿದರು.

ತಾಪಂ ಅಧ್ಯಕ್ಷ ಹನುಮಂತಪ್ಪ ಕಟ್ಟಿಮನಿ ಮಿಯ್ನಾಪುರ ಮಾತನಾಡಿ, ಎಜಿ ಕಾಲೋನಿ, ಹೇಮನೂರ ಗ್ರಾಮಗಳ ಅಂಗನವಾಡಿ ಕೇಂದ್ರಗಳ ಹುದ್ದೆ ಭರ್ತಿ ವಿಳಂಬವಾಗುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಕೇಂದ್ರಗಳ ಮಂಜೂರಾತಿಗೆ ಮೇಲಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ತಾಪಂ ಸದಸ್ಯ ಗೋಪಾಲಪ್ಪಗೌಡ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ಶಾಲಾ ಕಟ್ಟಡಗಳಿಗೆ ಅನುದಾನ ಇದ್ದರೂ ಪ್ರಯೋಜನವಿಲ್ಲ ದಂತಾಗಿದೆ. ಶಾಸಕ ಕೆ.ಶಿವನಗೌಡ ನಾಯಕ ಸೂಚನೆ ನೀಡಿದರೂ ಕಟ್ಟಡದ ಹಣವನ್ನು ಜಿಪಂ ಇಂಜನೀಯರಿಂಗ್‌ ವಿಭಾಗಕ್ಕೆ ವರ್ಗಾಯಿಸಿಲ್ಲ ಎಂದು ಸಭೆ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿಇಒ ಡಾ| ಎಸ್‌. ಎಂ. ಹತ್ತಿ, ಇಲಾಖೆಯಲ್ಲಿ ಇಂಜಿನೀಯರಿಂಗ್‌ ವಿಭಾಗವಿಲ್ಲ. ಅನುದಾನ ವರ್ಗಾಯಿಸಲು ನಮಗೆ ಅಧಿಕಾರವಿಲ್ಲ. ಮೇಲಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.

ತಾಲೂಕಿನಲ್ಲಿ ಶಿಕ್ಷಕರು ಹೊಂದಾಣಿಕೆ ಮೇರೆಗೆ ಅನಧಿಕೃತವಾಗಿ ರಜೆ ಮಾಡುತ್ತಿದ್ದಾರೆ. ಶಾಲೆಯಲ್ಲಿ ಮೊಬೈಲ್ ಬಳಸಬಾರದೆಂಬ ನಿಯಮ ಪಾಲನೆ ಆಗುತ್ತಿಲ್ಲ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಿಇಒಗೆ ಸೂಚಿಸಲಾಯಿತು.

ಶೂ ಮತ್ತು ಸಾಕ್ಸ್‌ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸದಸ್ಯರು ಬಿಆರ್‌ಸಿ ಶಿವರಾಜ ಬಿರಾದಾರ ಅವರನ್ನು ತರಾಟೆಗೆ ತೆಗೆದುಕೊಂಡು, ಶೂ, ಸಾಕ್ಸ್‌ ಖರೀದಿಗೆ ಮುಖ್ಯಗುರು ಮತ್ತು ಎಸ್‌ಡಿಎಂಸಿಗೆ ನೇರ ಅಧಿಕಾರ ನೀಡಿ ಅವರೇ ಖರೀದಿಸಲಿ ಎಂದರು.

ಸಭೆಯಲ್ಲಿ ಕೃಷಿ, ರೇಷ್ಮೆ, ಜಿಪಂ ಇಂಜಿನೀಯರಿಂಗ್‌, ಸಮಾಜ ಕಲ್ಯಾಣ, ತೋಟಗಾರಿಕೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಬಿಸಿಎಂ, ಕ್ಯಾಶುಟೆಕ್‌ ಸೇರಿ ಇತರೆ ಇಲಾಖೆಗಳ ಪ್ರಗತಿ ಪರಿಶೀಲಿಸ‌ಲಾಯಿತು.

ತಾಪಂ ಉಪಾಧ್ಯಕ್ಷೆ ರುಕ್ಮಿಣಿ ಶಿವರಾಜ ನಾಯಕ ಗಲಗ, ಇಒ ಹಾಲಸಿದ್ದಪ್ಪ ಪೂಜಾರಿ, ಪ್ರಭಾರಿ ಸಹಾಯಕ ನಿರ್ದೇಶಕ ಬಸಣ್ಣ ಹೇಮನೂರ ಸೇರಿ ಇತರೆ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.