ರಜೆ ದಿನ ಮರಳು ಸಾಗಣೆ ಬಂದ್‌ ಮಾಡಿ

ತಾಲೂಕು ಮರಳು ಸಮಿತಿ ವಿಶೇಷ ಸಭೆಎಚ್ಚರಿಕೆಯಿಂದ ಕರ್ತವ್ಯ ನಿಭಾಯಿಸಲು ಸಲಹೆ

Team Udayavani, Nov 30, 2019, 5:35 PM IST

30-November-24

ದೇವದುರ್ಗ: ತಾಲೂಕಿನ ನದಿ ದಂಡೆ ಗ್ರಾಮಗಳಲ್ಲಿ ರವಿವಾರ ಸರ್ಕಾರಿ ರಜೆ ದಿನ ಮರಳು ಸಾಗಣೆಗೆ ಅನುಮತಿ ನೀಡದೆ, ಬಂದ್‌ ಮಾಡಬೇಕು. ಅಕ್ರಮ ಮರಳು ಸಾಗಣೆಗೆ ಅವಕಾಶ ನೀಡದೆ ಅಧಿಕಾರಿಗಳು ಕೆಲಸ ನಿರ್ವಹಿಸುವಂತೆ ಮರಳು ಸಮಿತಿ ಸದಸ್ಯರಿಗೆ ಸಹಾಯಕ ಆಯುಕ್ತ ಸಂತೋಷ್‌ ಸೂಚಿಸಿದರು. ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ತಾಲೂಕು ಮರಳು ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಹಕಾರ ಅಗತ್ಯ: ಬೆಳಗ್ಗೆ 6ರಿಂದ ಸಂಜೆ 6ರ ವೆಗೆ ಮಾತ್ರ ಮರಳು ಸಾಗಣೆಗೆ ಅವಕಾಶ ನೀಡಬೇಕು. ರಾತ್ರಿ ವೇಳೆ ಮರಳು ಸಾಗಣೆ, ಓವರ್‌ ಲೋಡ್‌, ಅನಧಿಕೃತ ಮರಳು ಸಾಗಣೆಗೆ ಅವಕಾಶ ನೀಡಬಾರದು. ಮರಳು ಸಮಿತಿ ಸದಸ್ಯರು ಪ್ರತಿನಿತ್ಯ ಒಬ್ಬರಂತೆ ಮರಳು ಖರೀದಿ ಕೇಂದ್ರ, ತಪಾಸಣೆ ಕೇಂದ್ರಕ್ಕೆ ಭೇಟಿ ನೀಡಬೇಕು. ಅಕ್ರಮ ಮರಳು ತಡೆಗೆ ಎಲ್ಲ ಇಲಾಖೆ ಸಹಕಾರ ಅಗತ್ಯ ಎಂದರು.

ಒಗ್ಗಟ್ಟಿನಿಂದ ಕೆಲಸ ಮಾಡಿ: ಚೆಕ್‌ಪೋಸ್ಟ್‌, ಮರಳು ಕೇಂದ್ರಗಳಲ್ಲಿ ಆಸನ, ಟೇಬಲ್‌, ಬೆಳಕು, ಕುಡಿವ ನೀರಿನ ವ್ಯವಸ್ಥೆ ಪಿಡಬ್ಲ್ಯೂಡಿ ಅಧಿಕಾರಿಗಳು ಮಾಡಬೇಕು. ಚೆಕ್‌ ಪೋಸ್ಟ್‌, ಮರಳು ಬ್ಲಾಕ್‌ನಲ್ಲಿ ಹಾಜರಿ ಪುಸ್ತಕ ಇರಿಸಿ, ಅಧಿಕಾರಿಗಳು ಭೇಟಿ ನೀಡಿದ ಬಗ್ಗೆ ಸಹಿ ಪಡೆಯಬೇಕು. ರಾಯಚೂರಿಗಿಂತ ದೇವದುರ್ಗದಲ್ಲಿ ಅಕ್ರಮ ಮರಳು ಸಾಗಣೆ ಬಗ್ಗೆ ಹೆಚ್ಚು ದೂರುಗಳು ಕೇಳಿಬಂದಿವೆ. ಎಲ್ಲ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಿಮ್ಮದೆಯಾದ ವಾಟ್ಸ್‌ ಆ್ಯಪ್‌ ಗ್ರುಪ್‌ ರಚಿಸಿ ಪ್ರತಿ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು ಎಂದರು.

ಪಿಡಬ್ಲ್ಯೂಡಿ, ಆರ್‌ಟಿಒ ಅ ಧಿಕಾರಿಗಳು ದಾಳಿ ನಡೆಸಿದ ಬಗ್ಗೆ ತಹಶೀಲ್ದಾರ್‌, ಪೊಲೀಸ್‌ ಅಧಿಕಾರಿಗಳು ಹಾಗೂ ನನಗೂ ಒಂದು ಮಾಹಿತಿ ಹಾಕಿ. ಲಾರಿ ತಪಾಸಣೆ ಮಾಡಿದರೆ, ನಿಮ್ಮ ಸಹಿ, ದಿನಾಂಕ, ಸಮಯ ನಮೋದಿಸಿ, ರಾಯಲ್ಟಿ ಲಾಕ್‌ ಮಾಡಬೇಕು ಎಂದು ಸೂಚಿಸಿದರು. ಸಿಪಿಐ ಲೋಕೇಶ ಮಾತನಾಡಿ, ಇತ್ತೀಚೆಗೆ ಕರ್ಕಿಹಳ್ಳಿ, ಬಾಗೂರಿನಲ್ಲಿ ದಾಳಿ ನಡೆಸಿ ಸುಮಾರು 12 ಸಾವಿರ ಮೆಟ್ರಿಕ್‌ ಟನ್‌ ಮರಳು ವಶಕ್ಕೆ ಪಡೆಯಲಾಗಿದೆ. ಸುಮಾರು 32 ಪ್ರಕರಣಗಳು ದಾಖಲಾಗಿವೆ. ಅಕ್ರಮ ಮರಳು ಸಾಗಣೆ ಕಂಡುಬಂದರೆ, ಆ್ಯಕ್ಟ್ 379 ಹಾಗೂ ಎಂಎಂಆರ್‌ ಡಿಯಡಿ ಪ್ರಕರಣ ದಾಖಲಿಸಲಾಗುವುದು ಎಂದರು.

ಪಿಡಬ್ಲ್ಯೂಡಿ ಅಧಿಕಾರಿ ಮಂಜುನಾಥ, ತಾಲೂಕಿನ ಮರಳು ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರ್‌ ಮಂಜುನಾಥ ಭೋಗಾವತಿ, ಸಿಪಿಐ ಲೋಕೇಶ, ದೇವದುರ್ಗ ಪಿಎಸ್‌ಐ ಎಲ್‌.ಬಿ. ಅಗ್ನಿ, ಜಾಲಹಳ್ಳಿ ಪಿಎಸ್‌ಐ ಬಸವರಾಜ ಹೊಸಹಳ್ಳಿ, ಭೂ ಮತ್ತು ಗಣಿ ಇಲಾಖೆ ಅಧಿಕಾರಿ ಮಂಜುನಾಥ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪ್ರಿಯಾಂಕಾ, ಶ್ರೀನಿವಾಸ್‌ ಚಾಪಲ್‌ ಇದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.