ಕಾಯಿಪಲ್ಲೆ ಮಾರುಕಟ್ಟೆ ಸ್ಥಳಾಂತರಕ್ಕೆ ಪಟ್ಟು

ಮೂಲಸೌಕರ್ಯ ಕಲ್ಪಿಸಲು ಕ್ರಮ |ವ್ಯಾಪಾರಸ್ಥರು ಸ್ಥಳಾಂತರಕ್ಕೆ ಹಿಂದೇಟು ಹಾಕಿದರೆ ಕಾನೂನು ಕ್ರಮ |ಆಡಳಿತ ಮಂಡಳಿ ಅಸ್ತ್ರ

Team Udayavani, Jul 25, 2019, 12:03 PM IST

25-JUly-18

ಧಾರವಾಡ : ನಿರ್ಮಾಣ ಹಂತದಲ್ಲಿ ಇರುವ ಕಾಯಿಪಲ್ಲೆ ವ್ಯಾಪಾರಸ್ಥರ ಕಟ್ಟಡಗಳು.

ಶಶಿಧರ್‌ ಬುದ್ನಿ

ಧಾರವಾಡ: ಹೊಸ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣಕ್ಕೆ ನೆಹರು ಮಾರುಕಟ್ಟೆಯಲ್ಲಿರುವ ಹೋಲ್ಸೆಲ್ ಕಾಯಿಪಲ್ಲೆ ಮಾರುಕಟ್ಟೆ ಸ್ಥಳಾಂತರ ಮಾಡಿಯೇ ತೀರಲು ಸಮಿತಿಯ ಆಡಳಿತ ಮಂಡಳಿ ಮುಂದಾಗಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಲು ನಿರತವಾಗಿದೆ.

ಇದಾದ ಬಳಿಕವೂ ಕಾಯಿಪಲ್ಲೆ ವ್ಯಾಪಾರಸ್ಥರು ಸ್ಥಳಾಂತರಕ್ಕೆ ಹಿಂದೇಟು ಹಾಕಿದರೆ ಕಾನೂನು ಅನ್ವಯ ಆಡಳಿತ ಮಂಡಳಿಗೆ ಇರುವ ಅಸ್ತ್ರ ಪ್ರಯೋಗಿಸಲು ತಯಾರಿ ಮಾಡಿಕೊಳ್ಳಲಾಗಿದೆ.

ನೋಟಿಸ್‌ ಜಾರಿ: ಹೊಸ ಎಪಿಎಂಸಿಯಲ್ಲಿ 91 ನಿವೇಶನಗಳನ್ನು ಕಾಯಿಪಲ್ಲೆ ವ್ಯಾಪಾರಸ್ಥರಿಗೆ ನೀಡಲಾಗಿದ್ದು, ಈ ಪೈಕಿ 48 ವ್ಯಾಪಾರಸ್ಥರು ತಮ್ಮ ಮಳಿಗೆಗಳನ್ನು ಸಂಪೂರ್ಣ ನಿರ್ಮಿಸಿದ್ದಾರೆ. ಇನ್ನೂ 29 ಮಳಿಗೆಗಳ ಕಾರ್ಯ ಸಾಗಿದ್ದು, 10 ನಿವೇಶನಗಳು ಈವರೆಗೂ ಖಾಲಿ ಇವೆ. ಇನ್ನು ಇಲ್ಲಿ ನಿವೇಶನ ಪಡೆದ ವ್ಯಾಪಾರಸ್ಥರ ಪೈಕಿ ಆಡಳಿತ ಮಂಡಳಿ ನಿಯಮ ಮೀರಿದ ಕಾರಣ ನಾಲ್ವರ ಲೈಸಸ್ಸು ರದ್ದುಗೊಳಿಸಿದ್ದು, ಅವರ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆಡಳಿತ ಮಂಡಳಿ ಪ್ರಸ್ತಾವನೆ ಸಲ್ಲಿಸಿದೆ. ಸದ್ಯ ಎಪಿಎಂಸಿಯಲ್ಲಿ ನಿವೇಶನ ಪಡೆದು ಮಳಿಗೆ ಕಟ್ಟಿಕೊಳ್ಳದವರಿಗೆ ಹಾಗೂ ಕಟ್ಟಿಕೊಂಡರೂ ಸ್ಥಳಾಂತರ ಆಗದೇ ಉಳಿದವರಿಗೆ ಆಡಳಿತ ಮಂಡಳಿ ಕಟ್ಟುನಿಟ್ಟಿನ ನೋಟಿಸ್‌ ಜಾರಿ ಮಾಡಿದೆ. ಲೈಸನ್ಸ್‌ ರದ್ದುಗೊಳಿಸುವುದರ ಜತೆಗೆ ಕೊಟ್ಟಿರುವ ನಿವೇಶನ ಸಹ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎಚ್ಚರಿಕೆ ಸಹ ನೀಡಿದೆ.

ಸೌಕರ್ಯ ಕಲ್ಪಿಸಲು ಕ್ರಮ: ವಿದ್ಯುತ್‌ ಸಂಪರ್ಕವಿಲ್ಲ. ಕುಡಿಯುವ ನೀರಿನ ಸೌಕರ್ಯ, ಶೌಚಾಲಯವಿಲ್ಲ. ಹೊಟೇಲ್ ಸಹ ಇಲ್ಲ ಎಂಬ ದೂರುಗಳನ್ನು ನೀಡಿ ಈವರೆಗೂ ವ್ಯಾಪಾರಸ್ಥರು ಸ್ಥಳಾಂತರಕ್ಕೆ ಹಿಂದೇಟು ಹಾಕಿದ್ದರು. ಆದರೀಗ ಈ ದೂರುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾರ್ಯ ಭರದಿಂದ ಸಾಗಿದ್ದು, ಅದಕ್ಕೆ ಸಂಬಂಧಿಸಿದ ಉಪಕರಣಗಳು ಎಪಿಎಂಸಿ ಆವರಣಕ್ಕೆ ಬಂದಿಳಿದಿವೆ. ಸದ್ಯ ಕುಡಿಯುವ ನೀರು ಹಾಗೂ ಎರಡು ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೇ ಹೊಸದಾಗಿ ಮತಷ್ಟು ಶೌಚಾಲಯ ಕಟ್ಟಲು ಹಾಗೂ ಕ್ಯಾಂಟೀನ್‌ ಸೇವೆ ಆರಂಭಿಸಲು ಟೆಂಡರ್‌ ಕರೆಯಲಾಗಿದೆ. 20 ದಿನಗಳ ಒಳಗೆ ವಿದ್ಯುತ್‌ ಪೂರೈಕೆ ಕೆಲಸ ಸಂಪೂರ್ಣ ಆಗಲಿದ್ದು, ಇದರಿಂದ ಬಹುತೇಕ ಮೂಲಸೌಕರ್ಯಗಳು ಲಭ್ಯವಾದಂತೆ ಆಗಲಿದೆ.

ಹಗ್ಗ-ಜಗ್ಗಾಟ : ಮಾರ್ಚ್‌ ತಿಂಗಳ ಅಂತ್ಯದೊಳಗೆ ಸ್ಥಳಾಂತರ ಆಗುವಂತೆ ವ್ಯಾಪಾರಸ್ಥರಿಗೆ ಎಪಿಎಂಸಿಯಿಂದ ಗಡುವು ನೀಡಲಾಗಿತ್ತು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸಮ್ಮುಖದಲ್ಲಿ ಚರ್ಚೆ ಕೈಗೊಂಡು ವ್ಯಾಪಾರಸ್ಥರ ಬೇಡಿಕೆಯನುಸಾರ ಅವಧಿ ವಿಸ್ತರಿಸಲಾಗಿತ್ತು. ನಂತರ ಜೂನ್‌ ತಿಂಗಳ ಅಂತ್ಯದೊಳಗೆ ಸ್ಥಳಾಂತರ ಆಗುವಂತೆ ಅಂತಿಮ ಗಡುವು ವಿಧಿಸಿ, ನೋಟಿಸ್‌ ಜಾರಿ ಮಾಡಲಾಗಿತ್ತು. ಇಷ್ಟರೊಳಗೆ ಕಾಯಿಪಲ್ಲೆ ವ್ಯಾಪಾರಸ್ಥರು ನ್ಯಾಯಾಲಯ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದು, ಮೂಲಸೌಕರ್ಯವಿಲ್ಲದೇ ನಾವು ಸ್ಥಳಾಂತರ ಆಗಲ್ಲ ಎಂಬುದಾಗಿ ಹೇಳಿದ್ದರು. ಇದಲ್ಲದೇ ಬಾಕಿ ಉಳಿದಿರುವ 30 ಜನರಿಗೂ ಜಾಗ ನೀಡುವಂತೆ ಒತ್ತಾಯಿಸಿದ್ದರು. ಆದರೆ ಈಗ ವ್ಯಾಪಾಸ್ಥರ ಬೇಡಿಕೆ ಅನುಸಾರ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಗಳು ಸಾಗಿದ್ದು, ಇದಾದ ಬಳಿಕವಾದರೂ ವ್ಯಾಪಾರಸ್ಥರು ಸ್ಥಳಾಂತರ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.