ಅಬ್ಟಾ! ಮಸ್ತ್ ಮತದಾನ

•ಜಿಲ್ಲೆ ಮತದಾರರು ಫಸ್ಟ್‌ ಕ್ಲಾಸ್‌ನಲ್ಲಿ ಪಾಸು•ಶೇ.70.02 ಮತ ಹಕ್ಕು ಚಲಾವಣೆ

Team Udayavani, Apr 24, 2019, 3:39 PM IST

24-April-28

ಧಾರವಾಡ: ಸ್ಥಳೀಯ ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ. 70.02 ಮತದಾನವಾಗಿದ್ದು, ಕಳೆದ ಚುನಾವಣೆಗಿಂತ ಹೆಚ್ಚು ಮತದಾನ ದಾಖಲಾಗಿದೆ.

2009ರಲ್ಲಿ ಶೇ.56.56, 2014ರಲ್ಲಿ ಶೇ. 65.98 ಮತದಾನ ಆಗಿತ್ತು. ಆದರೆ ಈ ಸಲ ಕಳೆದ ಬಾರಿಗಿಂತ ಮತದಾನದಲ್ಲಿ ಶೇ.4.04 ಹೆಚ್ಚಳವಾಗಿದೆ. ಕಲಘಟಗಿ ಕ್ಷೇತ್ರದಲ್ಲಿ ಅತಿ ಹೆಚ್ಚು (ಶೇ.75.98) ಮತದಾನವಾಗಿದ್ದರೆ, ಹು-ಧಾ ಪಶ್ಚಿಮ ಕ್ಷೇತ್ರದಲ್ಲಿ (ಶೇ.63.86)ಅತಿ ಕಡಿಮೆ ಮತದಾನವಾಗಿದೆ.

ಲೋಕಸಭಾ ಕ್ಷೇತ್ರದಲ್ಲಿ 8,75,479 ಪುರುಷ, 8,49,750 ಮಹಿಳೆ ಹಾಗೂ 106 ತೃತೀಯ ಲಿಂಗಿಗಳು ಸೇರಿ ಒಟ್ಟು 17,25,335 ಮತದಾರರು ಇದ್ದಾರೆ. ಈ ಪೈಕಿ 6,38,848 ಪುರುಷ, 5,69,265 ಮಹಿಳೆ ಹಾಗೂ 7 ಜನ ತೃತೀಯ ಲಿಂಗಿಗಳು ಸೇರಿ ಒಟ್ಟು 12,08,120 ಮಂದಿ ಮತ ಚಲಾಯಿಸಿದ್ದು, ಶೇ. 70.02 ಸಾಧನೆಯಾಗಿದೆ. 2014ರಲ್ಲಿ 15,78,125 ಮತದಾರರ ಪೈಕಿ 10,41,226 ಮಂದಿ ಮತ ಚಲಾಯಿಸಿ ಶೇ. 65.98 ಸಾಧನೆಯಾಗಿತ್ತು.

ಮತದಾನ ಜಾಗೃತಿಗಾಗಿ ಸ್ವೀಪ್‌ ಸಮಿತಿ, ಜಿಲ್ಲಾಡಳಿತ ಕಳೆದ ಎರಡು ತಿಂಗಳಿನಿಂದ ಕೈಗೊಂಡ ಕ್ರಮಗಳು ಈ ಬಾರಿ ಕಳೆದ ಲೋಕಸಭೆಗಿಂತ ಮತದಾನ ಪ್ರಮಾಣ ಹೆಚ್ಚಳವಾಗಲು ಕಾರಣವಾಗಿದೆ. ಕ್ಷೇತ್ರಾದ್ಯಂತ ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. ಮತದಾನ ಶಾಂತಿಯುತವಾಗಿತ್ತು.

ಕೆಲವೆಡೆ ತಾಂತ್ರಿಕ ದೋಷ: ಬೆಳಗ್ಗೆ 7 ಗಂಟೆಗೆ ಎಲ್ಲಾ 1872 ಮತಗಟ್ಟೆಗಳಲ್ಲೂ ಮತದಾನ ಪ್ರಾರಂಭವಾಯಿತು. ಆರಂಭದಲ್ಲಿ ವಿವಿಧ ಕಾರಣಕ್ಕೆ ಕೆಲವು ಮತಗಟ್ಟೆಗಳಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಲಾಯಿತು. 9 ಗಂಟೆ ನಂತರ ಮತದಾನ ಚುರುಕು ಪಡೆಯಿತು. ವಿವಿಧ ಮತಗಟ್ಟೆಗಳಲ್ಲಿರುವ ಒಟ್ಟು 14 ಮತಯಂತ್ರ, 7 ಕಂಟ್ರೋಲ್ ಯೂನಿಟ್ ಮತ್ತು 41 ವಿವಿಪ್ಯಾಟ್‌ಗಳಲ್ಲಿ ತಾಂತ್ರಿಕ ಅಡಚಣೆ ಉಂಟಾಗಿತ್ತು. ತಕ್ಷಣ ಎಂಜಿನಿಯರ್‌ಗಳ ತಂಡ ಹಾಗೂ ತಾಂತ್ರಿಕ ಸಿಬ್ಬಂದಿ ಅವುಗಳನ್ನು ಬದಲಾಯಿಸಿ ಸುಗಮ ಮತದಾನಕ್ಕೆ ಸಹಕರಿಸಿದರು.

ಆಯೋಗಕ್ಕೆ ವರದಿ: ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ ದೀಪಾ ಚೋಳನ್‌ ನಾಯಕತ್ವದಲ್ಲಿ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿ ಮತದಾನ ಪ್ರಗತಿಯನ್ನು ಸಮರ್ಪಕವಾಗಿ ಸಂಗ್ರಹಿಸಿ, ಪ್ರತಿ ಗಂಟೆಗೊಮ್ಮೆ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದರು. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಾಪಿಸಲಾಗಿದ್ದ ಮತದಾನ ದಿನದ ಕಾರ್ಯಗಳ ವೀಕ್ಷಣಾ ಕೇಂದ್ರದಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ಉಸ್ತುವಾರಿ ವಹಿಸಿ ಸೆಕ್ಟರ್‌ ಅಧಿಕಾರಿಗಳಿಗೆ, ಸಹಾಯಕ ಚುನಾವಣಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ಮತಯಂತ್ರದಲ್ಲಿ ಭವಿಷ್ಯ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರಗೊಂಡಿದೆ. ಜಿಲ್ಲೆಯ ವಿಧಾನಸಭಾ ಮತಕ್ಷೇತ್ರದ ಕೇಂದ್ರ ಸ್ಥಾನದಿಂದ (ಮಸ್ಟರಿಂಗ್‌ ಕೇಂದ್ರ) ಮತಯಂತ್ರಗಳು ಮಂಗಳವಾರ ರಾತ್ರಿ ಕೃಷಿ ವಿಶ್ವವಿದ್ಯಾಲಯದ ಡೀಮಸ್ಟರಿಂಗ್‌ (ಚುನಾವಣಾ ಸಾಮಗ್ರಿ ಸ್ವೀಕಾರ ಕೇಂದ್ರ) ಸ್ಥಳಕ್ಕೆ ಬಂದು ತಲುಪಿದ್ದು, ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಮೇ 23ರಂದು ಮತ ಎಣಿಕೆ ನಡೆಯಲಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ 19 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಇದ್ದುದರಿಂದ ಪ್ರತಿ ಮತಗಟ್ಟೆಯಲ್ಲಿ ತಲಾ 2 ರಂತೆ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ಬಳಕೆ ಮಾಡಲಾಗಿತ್ತು. ಇದರೊಂದಿಗೆ ನೋಟಾ ಬಟನ್‌ ಕೂಡ ಸೇರಿತ್ತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.