ಹುಬ್ಬಳ್ಳಿಯಲ್ಲಿ ಬಹುತೇಕ ಶಾಂತಿಯುತ ಮತದಾನ


Team Udayavani, Apr 24, 2019, 3:44 PM IST

24-April-29

ಧಾರವಾಡ: ಮಾಳಮಡ್ಡಿ ಮತಗಟ್ಟೆಯಲ್ಲಿ ಸಾಲಲ್ಲಿ ನಿಂತ ಮಹಿಳಾ ಮತದಾರರು

ಹುಬ್ಬಳ್ಳಿ: ನಗರದೆಲ್ಲೆಡೆ ಮಂಗಳವಾರ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್‌ಗಳ ಲೋಪದೋಷ, ಸಣ್ಣ-ಪುಟ್ಟ ವಾಗ್ವಾದ ಹೊರತು ಪಡಿಸಿದರೆ ಶಾಂತಿಯುತ ಮತದಾನವಾಗಿದೆ.

ಬೆಳಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ ಸಂಜೆವರೆಗೆ ನಡೆಯಿತು. ಕೆಲ ಮತಕೇಂದ್ರಗಳಲ್ಲಿ ಬೆಳಗ್ಗೆ 6:30 ಗಂಟೆಗೇ ಪಾಳಿ ಹಚ್ಚಿದ್ದರು. ಮಧ್ಯಾಹ್ನ 12 ಗಂಟೆವರೆಗೆ ಚುರುಕಾಗಿ ನಡೆದ ಮತದಾನ ನಂತರ ಬಿಸಿಲಿನ ತಾಪದ ಪರಿಣಾಮ ಮಂದವಾಗಿತ್ತು. 12 ಗಂಟೆವರೆಗೆ ಶೇ.20. 25 ಮತದಾನ ನಡೆದಿತ್ತು. ಸಂಜೆ 3:30ರ ನಂತರ ಮತ್ತೆ ಚುರುಕುಗೊಂಡಿತು. ವೃದ್ಧ ಹಾಗೂ ಅಂಗವಿಕಲ ಮತದಾರರನ್ನು ಕರೆದುಕೊಂಡು ಬರಲು 25ಕ್ಕೂ ಹೆಚ್ಚು ಓಲಾ ಕ್ಯಾಬ್‌ಗಳು ಉಚಿತವಾಗಿ ಸೇವೆ ಸಲ್ಲಿಸಿದವು.

ಚುನಾವಣಾ ಆ್ಯಪ್‌ ಸದ್ಬಳಕೆ: ಚುನಾವಣಾ ಆಯೋಗದಿಂದ ಮತದಾರರ ಮಾಹಿತಿ ತಿಳಿದುಕೊಳ್ಳಲು ನೀಡಿದ್ದ ಆ್ಯಪ್‌ ಸದ್ಬಳಕೆ ಮಾಡಿಕೊಳ್ಳಲಾಯಿತು. ಮತದಾರರಿಗೆ ಸ್ಥಳದಲ್ಲಿಯೇ ಮೊಬೈಲ್ ಮೂಲಕ ಮಾಹಿತಿ ನೋಡಿ ಅವರ ಮತದಾನ ಕೇಂದ್ರಗಳ ಕುರಿತು ಮಾಹಿತಿ ನೀಡಲಾಗುತ್ತಿತ್ತು. ನಗರದ ಬಹುತೇಕ ಮತಕೇಂದ್ರಗಳಲ್ಲಿ ಆಯಾ ಪಕ್ಷದ ಸಿಬ್ಬಂದಿ ಆಗಮಿಸುತ್ತಿದ್ದ ಮತದಾರಿಗೆ ಮಾಹಿತಿ ನೀಡುತ್ತಿರುವುದು ಕಂಡು ಬಂದಿತು.

ಶಾಲು ಕಮಾಲು: ಆಯಾ ಪಕ್ಷದವರು ಎಂದು ಗುರುತಿಸಿಕೊಳ್ಳಲು ಕಾಂಗ್ರೆಸ್‌ ಪಕ್ಷದವರು ಕೇಸರಿ-ಬಿಳಿ-ಹಸಿರು, ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡಿದ್ದರು. ಸಂಸದ ಪ್ರಹ್ಲಾದ ಜೋಶಿ, ಶಾಸಕ ಜಗದೀಶ ಶೆಟ್ಟರ ಸೇರಿದಂತೆ ಬಿಜೆಪಿ ಎಲ್ಲ ಮುಖಂಡರು ಕೇಸರಿ ಶಾಲು ಹಾಕಿಕೊಂಡಿದ್ದರು.

100 ಮೀಟರ್‌ ಸಂಬಂಧವೇ ಇಲ್ಲ ಮತ ಕೇಂದ್ರದಿಂದ 100 ಮೀ. ಒಳಗಡೆ ಯಾವುದೇ ವಾಹನ ತರುವಂತಿಲ್ಲ, ಗುಂಪು-ಗುಂಪಾಗಿ ಜನ ನಿಲ್ಲುವಂತಿಲ್ಲ ಎನ್ನುವ ನಿಯಮಗಳಿದ್ದರೂ ನಗರದ ಬಹುತೇಕ ಕೇಂದ್ರಗಳಲ್ಲಿ ಅನುಷ್ಠಾನ ಕಂಡುಬರಲಿಲ್ಲ. ಕೆಲವು ಮತ ಕೇಂದ್ರಗಳ ಮುಂಭಾಗದಲ್ಲಿ ವಾಹನ ನಿಲ್ಲಿಸಿದರೂ ಯಾರೊಬ್ಬರು ಹೇಳುವವರಿರಲಿಲ್ಲ. ಕೆಲವೆಡೆ 100 ಮೀ ಗುರುತೂ ಹಾಕಿರಲಿಲ್ಲ.

ಮತಕೇಂದ್ರಗಳಿಗೆ ಭೇಟಿ: ಬೆಳಗ್ಗೆ ಕುಟುಂಬದೊಂದಿಗೆ ಆಗಮಿಸಿ ಮತ ಚಲಾಯಿಸಿದ ಸಂಸದ ಪ್ರಹ್ಲಾದ ಜೋಶಿ ನಂತರ ಕ್ಷೇತ್ರದ ವಿವಿಧೆಡೆ ಮತ ಚಲಾವಣೆ ಕುರಿತು ಮಾಹಿತಿ ಪಡೆದರು. ಕಾಂಗ್ರೆಸ್‌ ಶಾಸಕ ಪ್ರಸಾದ ಅಬ್ಬಯ್ಯ ಅವರು ಪೂರ್ವ ಕ್ಷೇತ್ರದ ವಿವಿಧೆಡೆ ಸಂಚರಿಸಿ ಮತದಾನ ಮಾಹಿತಿ ಪಡೆದರು. ಕಮರಿಪೇಟೆ ಸರ್ಕಾರಿ ಶಾಲೆ ಬೂತ್‌ನಲ್ಲಿ ಪರಿಶೀಲನೆಗೆ ತೆರಳಿದ್ದ ಪ್ರಸಾದ ಅಬ್ಬಯ್ಯ ಅವರನ್ನು ಸ್ಥಳೀಯ ಯುವಕರು ಮೋದಿ ಪರ ಘೊಷಣೆ ಕೂಗಿ ಮರಳಿ ಕಳಿಸಿದ ಘಟನೆ ನಡೆದಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.