1.50 ಲಕ್ಷ ಹೆಕ್ಟೇರ್‌ನಲ್ಲಿ ಸಾವಯವ ಕೃಷಿ ಆರಂಭಿಸುವ ಗುರಿ


Team Udayavani, Mar 2, 2020, 11:14 AM IST

huballi-tdy-3

ಹುಬ್ಬಳ್ಳಿ: ರಾಜ್ಯ ಸರಕಾರ ಸಾವಯವ ಕೃಷಿಗೆ ಆದ್ಯತೆ ನೀಡುತ್ತಿದ್ದು, 1.50 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಸಾವಯವ ಕೃಷಿ ಆರಂಭಿಸುವ ಗುರಿ ಹೊಂದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿ ರವಿವಾರ ಆಯೋಜಿಸಿದ್ದ “ರೈತರೊಂದಿಗಿನ ಸಂವಾದ’ ದಲ್ಲಿ ಅವರು ಮಾತನಾಡಿದರು. ಸದ್ಯ ರಾಜ್ಯದಲ್ಲಿ 1.10 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ರೈತರು ಸಾವಯವ ಬೇಸಾಯ ಮಾಡುತ್ತಿದ್ದಾರೆ. ಸಾವಯವದತ್ತ ರೈತರ ಆಸಕ್ತಿ ಹೆಚ್ಚಾಗುತ್ತಿದೆ. ರೈತರ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸಲು ಸರಕಾರ ಬದ್ಧವಾಗಿದೆ. ಸಾವಯವ ಬೇಸಾಯ ದನಕರುಗಳು ಇಲ್ಲದೇ ಸಾಧ್ಯವಿಲ್ಲ. ಆದ್ದರಿಂದ ದನಕರುಗಳ ಸಂಖ್ಯೆ ಕೂಡ ಹೆಚ್ಚಾಗುವುದು ಅವಶ್ಯವಾಗಿದೆ ಎಂದರು.

ಶೇ.48ರಷ್ಟು ರೈತರ ಮಕ್ಕಳು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿಯಲ್ಲಿ ಲಾಭವಿಲ್ಲ ಎಂದುಕೊಂಡು ಪಟ್ಟಣ ಸೇರುತ್ತಿದ್ದಾರೆ. ಆದರೆ ಕೃಷಿಯಲ್ಲಿ ಲಾಭವಿದೆ ಎಂಬುದನ್ನು ಹಲವು ಕೃಷಿ ಆಸಕ್ತ ಯುವಕರು ಸಾಬೀತುಪಡಿಸಿದ್ದಾರೆ. ಬಹುಬೆಳೆ ಕೃಷಿ, ವಾಣಿಜ್ಯ ಕೃಷಿ ಅವಲಂಬಿಸಬೇಕು ಎಂದರು.

ಕರ್ನಾಟಕ ಎಣ್ಣೆ ಬೀಜ ನಿಗಮ (ಕೆಒಎಫ್‌) ತನ್ನ ಉತ್ಪನ್ನಗಳನ್ನು ಮಾರುಕಟ್ಟೆ ಮಾಡುವಲ್ಲಿ ಯಶಸ್ವಿಯಾಗಿದೆ. ಆದರೆ ರೈತರ ಉತ್ಪನ್ನಗಳನ್ನು ಮಾರುಕಟ್ಟೆ ಮಾಡುವಲ್ಲಿ ಕೆಪೆಕ್‌ ವಿಫಲವಾಗಿದೆ. ರೈತರ ಉತ್ಪನ್ನಗಳ ಮೌಲ್ಯವರ್ಧನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರೈತರ ಬೇಡಿಕೆಯಂತೆ ಕೃಷಿ ಹೊಂಡಗಳ ಸಂಖ್ಯೆ ಹೆಚ್ಚಿಸಲಾಗುವುದು. ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು. ಕೋಲ್ಡ್‌ ಸ್ಟೋರೇಜ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಶಾಸಕ ಶಂಕರಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ದೀಪಾ ಚೋಳನ್‌ ಇದ್ದರು. ರಘುನಾಥರೆಡ್ಡಿ ನಡುವಿನಮನಿ, ಎ.ಪಿ.ಗುರಿಕಾರ, ನಿಂಗಯ್ಯ ಹಿರೇಮಠ, ನಿಜಗುಣಿ ಕೆಲಗೇರಿ, ಈಶ್ವರಪ್ಪ ಮಾಳಣ್ಣವರ, ಬಿ.ಎಂ.ಹನಸಿ, ಸಿ.ಎಫ್‌ .ಪಾಟೀಲ, ಈಶ್ವರ ಅರಳಿ, ವಿ.ಎಸ್‌.ಪಾಟೀಲ, ವಿಜಯ ನಾಡಜೋಶಿ, ಸುಭಾಸಗೌಡ ಪಾಟೀಲ, ಎಸ್‌.ವಿ.ಗಾಯತೊಂಡೆ ಪಾಲ್ಗೊಂಡಿದ್ದರು.

ಅಧಿಕಾರಿಗಳು ಬಂದಿಲ್ಲವೆಂದರೆ ಏನರ್ಥ? : ನಾನಿಲ್ಲಿ ಚುನಾವಣೆ ಪ್ರಚಾರಕ್ಕೆ ಅಥವಾ ಮತಯಾಚನೆಗೆ ಬಂದಿಲ್ಲ. ರೈತರೊಂದಿಗೆ ಸಂವಾದ ನಡೆಸಲು ಬಂದಿದ್ದೇನೆ. ಸಭೆಗೆ ಅಧಿಕಾರಿಗಳು ಬಂದಿಲ್ಲ ಎಂದರೆ ಏನರ್ಥ. ನಾನು ಇಂಥ ವರ್ತನೆ ಸಹಿಸಲ್ಲ. ರೈತರ ಸಮಸ್ಯೆಗಳನ್ನು ಅರಿತು ಅವರಿಗೆ ಸ್ಪಂದಿಸಲು ಕೃಷಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳು ಬರಬೇಕಿತ್ತು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಸಿಬಿಲ್‌ ಸ್ಕೋರ್‌ ಮೂರ್ಖತನ : ಉದ್ಯೋಗಿಗಳು, ಉದ್ಯಮಿಗಳು ವಾಹನ, ಮನೆ ಸೇರಿದಂತೆ ಚರಾಸ್ಥಿ ಹಾಗೂ ಸ್ಥಿರಾಸ್ಥಿ ಖರೀದಿಸುವಾಗ ಬ್ಯಾಂಕ್‌ನವರು ಸಿಬಿಲ್‌ ಸ್ಕೋರ್‌ ನೋಡಬೇಕು. ರೈತರು ಬರ ಹಾಗೂ ಅತಿವೃಷ್ಟಿಯಿಂದ ತೊಂದರೆಯಲ್ಲಿದ್ದಾರೆ. ಬ್ಯಾಂಕ್‌ಗಳು ಅವರ ಸಿಬಿಲ್‌ ಸ್ಕೋರ್‌ ನೋಡುವುದು. ಸರಿಯಲ್ಲ. ಕಟಬಾಕಿದಾರರಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಪಡೆಯಬೇಕು. ಅವರಿಗೆ ಸಾಲ ನೀಡಲು ಕಿರಿಕಿರಿ ಮಾಡಬಾರದು. ಈ ದಿಸೆಯಲ್ಲಿ ಬೆಂಗಳೂರಿನಲ್ಲಿ ಬ್ಯಾಂಕ್‌ ಹಿರಿಯ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.