101ನೇ ವಸಂತಕ್ಕೆ ಕಾಲಿಟ್ಟ ಪಾಪು
Team Udayavani, Jan 15, 2020, 10:35 AM IST
ಹುಬ್ಬಳ್ಳಿ: ನಾಡೋಜ ಡಾ|ಪಾಟೀಲ ಪುಟ್ಟಪ್ಪ ಅವರು 101ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಅವರ ಜನ್ಮದಿನಾಚರಣೆಯನ್ನು ಮಂಗಳವಾರ ಸರಳವಾಗಿ ಆಚರಿಸಿದರು. ಸಾಹಿತಿಗಳು, ಗಣ್ಯರು ನಿವಾಸಕ್ಕೆ ಆಗಮಿಸಿ ಶುಭ ಕೋರಿದರು.
ವಿಶ್ವೇಶ್ವರ ನಗರದಲ್ಲಿರುವ ನಿವಾಸದಲ್ಲಿ ಅವರ ಜನ್ಮದಿನ ಆಚರಿಸಲಾಯಿತು. ಪಾಪು ಅವರು ಕೇಕ್ ಕತ್ತರಿಸಿ 101ನೇ ಜನ್ಮದಿನ ಆಚರಿಸಿಕೊಂಡರು. ಕುಟುಂಬಸ್ಥರು ಆರತಿ ಬೆಳಗಿ, ಸಿಹಿ ತಿನ್ನಿಸಿ ಶುಭಾಶಯ ಕೋರಿದರು. ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು ಪಾಪು ಅವರನ್ನು ಸನ್ಮಾನಿಸಿದರು. ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ ಗಾಯನದ ಮೂಲಕ ಶುಭಾಶಯ ಕೋರಿದರು. ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ಹೋರಾಟದ ಜೀವನ ಒಂದು ಶತಕ ಪೂರೈಸಿದೆ ಎಂಬುದೇ ದೊಡ್ಡ ಸಂತಸದ ವಿಚಾರ.
ಇಡೀ ಬದುಕನ್ನು ಪುಟ್ಟಪ್ಪ ಅವರು ನಾಡು, ನುಡಿ, ಜಲ, ಭಾಷೆಗಾಗಿ ಮೀಸಲಿಟ್ಟಿದ್ದಾರೆ. ವಿಶ್ವದೆಲ್ಲೆಡೆ ಭಾತೃತ್ವ ಮೂಡಬೇಕು, ಲೋಕವೇ ತನ್ನ ಮನೆಯಾಗಬೇಕು ಎನ್ನುವುದನ್ನು ಅಳವಡಿಸಿಕೊಂಡಿರುವ ಪಾಪು ಅವರ ಹೋರಾಟ ಹಾಗೂ ಜೀವನ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದರು.
ಕವಿಸಂ ಕಾರ್ಯದರ್ಶಿ ಪ್ರಕಾಶ ಉಡಕೇರಿ ಮಾತನಾಡಿ, ಪಾಟೀಲ ಪುಟ್ಟಪ್ಪ ಅವರು ಪ್ರತಿಯೊಂದು ಕೆಲಸವನ್ನು ಬದ್ಧತೆಯಿಂದ ನಿರ್ವಹಿಸುತ್ತಾರೆ. ಎಂತಹ ಸಂದಿಗ್ಧ ಪರಿಸ್ಥಿತಿ ಬಂದರೂ ಹೋರಾಟದಿಂದ ಹಿಂದೆ ಸರಿಯದ ಅವರ ದಿಟ್ಟತನ ಪ್ರತಿಯೊಬ್ಬರಿಗೆ ಮಾದರಿ. ಇಂತಹ ಹೋರಾಟಗಾರರ ಬದುಕನ್ನು ಹತ್ತಿರದಿಂದ ನೋಡುತ್ತಿರುವ ನಾವು ಧನ್ಯರು ಎಂದರು.
ಡಾ| ಪಾಟೀಲ ಪುಟ್ಟಪ್ಪ ಅವರ ಸಹೋದರ ಗುರುನಗೌಡ ಪಾಟೀಲ, ಶಿವನಗೌಡ ಪಾಟೀಲ ಶುಭ ಕೋರಿದರು. ವಿವಿಧೆಡೆಯಿಂದ ಕುಟುಂಬದ ಸದಸ್ಯರು ಆಗಮಿಸಿದ್ದರು. ಶಿವಣ್ಣ ಬೆಲ್ಲದ, ಪ್ರಫುಲ್ಲ ನಾಯಕ, ಶಂಕರ ಕುಂಬಿ, ವಿಶ್ವೇಶ್ವರಿ ಹಿರೇಮಠ, ಸದಾನಂದ ಶಿವಳ್ಳಿ, ಶಿವಾನಂದ ಭಾವಿಕಟ್ಟಿ, ಬಸಲಿಂಗಯ್ಯ ಹಿರೇಮಠ, ಸುರೇಶ ಪಾಟೀಲ, ಸಿಬಿಎಲ್ ಹೆಗಡೆ, ಸಂಜೀವ ಧುಮ್ಮಕ್ಕನಾಳ, ರವಿ ಕದಂ, ಡಾ| ಬಿ.ಜಿ.ಪಾಟೀಲ, ಎಸ್.ಬಿ. ಗಾಮನಗಟ್ಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ