120ರ ಸಂಭ್ರಮದಲ್ಲಿ ವಿದ್ಯಾಮಂದಿರ

•ಮುಂಬಯಿ ಪ್ರಾಂತ್ಯದ ಮೊದಲ ಕನ್ನಡ ಶಾಲೆ ಹಿರಿಮೆ•ಗುರುನಾಥಾರೂಢರು ಕಲಿತ ಗರಿಮೆ

Team Udayavani, Sep 13, 2019, 10:39 AM IST

huballi-tdy-3

ಹುಬ್ಬಳ್ಳಿ: ಹಳೇಹುಬ್ಬಳ್ಳಿ ದುರ್ಗದ ಬಯಲಿನಲ್ಲಿರುವ ಸರಕಾರಿ ಮಾದರಿ ಕನ್ನಡ ಗಂಡು ಶಾಲೆ ನಂ.1 ರ ಇಂದಿನ ನೋಟ.

ಹುಬ್ಬಳ್ಳಿ: ಶತಮಾನಕ್ಕೂ ಹಳೆಯ ಈ ಶಾಲೆ ಹಲವು ದಾಖಲೆಗಳನ್ನು ತನ್ನೊಳಗಿಟ್ಟುಕೊಂಡಿದೆ. ಮುಂಬಯಿ ಪ್ರಾಂತ್ಯದ ಮೊದಲ ಕನ್ನಡ ಶಾಲೆಯೂ ಆಗಿದೆ. ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಪರಮ ಶಿಷ್ಯರಾದ ಸದ್ಗುರು ಶ್ರೀ ಗುರುನಾಥರೂಢ ಸ್ವಾಮೀಜಿಯವರು ವ್ಯಾಸಂಗ ಮಾಡಿದ ಶಾಲೆ ಇದಾಗಿದೆ.

ಹಳೇಹುಬ್ಬಳ್ಳಿ ದುರ್ಗದ ಬಯಲು ಪ್ರದೇಶದಲ್ಲಿರುವ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1 ಇಂತಹ ಹಲವು ಕೀರ್ತಿಗಳನ್ನು ತನ್ನದಾಗಿಸಿಕೊಂಡಿದೆ. ಇದೀಗ ಹಿಂದಿನ ಹಲವು ನೆನಪುಗಳೊಂದಿಗೆ 120ನೇ ವರ್ಷದ ಸಂಭ್ರಮಾಚರಣೆಗೆ ಮುಂದಡಿ ಇರಿಸಿದೆ.

1889ರಲ್ಲಿ ಆರಂಭಗೊಂಡಿದ್ದಾಗಿ ದಾಖಲೆಗಳು ಹೇಳುತ್ತವೆ. ಮುಂಬೈ ಪ್ರಾಂತ್ಯದ ಆಡಳಿತ ಇರುವಾಗ ಈ ಭಾಗದಲ್ಲಿ ಮರಾಠಿ ಶಾಲೆಗಳಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ಇತ್ತು. ಕಾಲಕ್ರಮೇಣ ಈ ಭಾಗದಲ್ಲಿ ಕನ್ನಡ ಶಾಲೆಗಳು ಆರಂಭಗೊಳ್ಳಲು ಪ್ರಾರಂಭಗೊಂಡವು. ಇದರಲ್ಲಿ ಮೊದಲನೆಯದಾಗಿ ಆರಂಭವಾಗಿದ್ದು ಈ ಶಾಲೆ ಎಂದರೂ ತಪ್ಪಾಗಲಾರದು.

ಗುರುನಾಥರೂಢರು ಕಲಿತ ಶಾಲೆ: ಶ್ರೀ ಗುರುನಾಥರೂಢರು ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಶಾಲಾ ದಾಖಲಾತಿ ಪ್ರಕಾರ 2-5-1907ರಲ್ಲಿ ಜನ್ಮ ತಾಳಿರುವ ಸದ್ಗುರು ಶ್ರೀ ಗುರುನಾಥರೂಢ ಸ್ವಾಮೀಜಿ ಅವರು ಮೊದಲನೇ ತರಗತಿಯನ್ನು ಹಳೇಹುಬ್ಬಳ್ಳಿ ಅಕ್ಕಿಪೇಟೆಯಲ್ಲಿದ್ದ ಬಾಸೆಲ್ ಮಿಷನ್‌ ಶಾಲೆಯಲ್ಲಿ ಕಲಿತಿದ್ದರು. ಎರಡನೇ ತರಗತಿಗೆ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ಪ್ರವೇಶ ಪಡೆದಿದ್ದರು. ನಂತರ ಸಿದ್ಧಾರೂಢರ ಪ್ರಭಾವಕ್ಕೆ ಒಳಗಾಗುವ ಗುರುನಾಥರೂಢರು ಸಿದ್ಧಾರೂಢರ ಶಿಷ್ಯರಾಗಿ ಮಠದಲ್ಲಿ ಉಳಿದುಕೊಂಡಿದ್ದರು.

ಕೇವಲ 1 ಕೊಠಡಿ, 22 ವಿದ್ಯಾರ್ಥಿಗಳಿಂದ ಆರಂಭಗೊಂಡಿರುವ ಶಾಲೆ ಇಂದು 120 ವರ್ಷಗಳಲ್ಲಿ ಹಲವು ಏಳು-ಬೀಳುಗಳ ನಡುವೆ ಪ್ರಸ್ತುತ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಆಲಯವಾಗಿದೆ. ಅಂದು ಇದ್ದ 1ನೇ ತರಗತಿ ನಂತರದ ದಿನಗಳಲ್ಲಿ 5ನೇ ತರಗತಿವರೆಗೆ ವಿಸ್ತಾರಗೊಂಡಿತ್ತು. ಇದೀಗ 8ನೇ ತರಗತಿವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಟ್ಟು 16 ಕೊಠಡಿಗಳಿವೆ. ಶಾಲೆಯಲ್ಲಿ ಸುಸಜ್ಜಿತ ಪ್ರಯೋಗಾಲಯ, ಗ್ರಂಥಾಲಯ, ಸ್ಮಾರ್ಟ್‌ ಕ್ಲಾಸ್‌ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳಿದ್ದು, ಇನ್ನು ಹೆಚ್ಚಿನ ಸೌಲಭ್ಯಗಳನ್ನು ಶಾಲೆ ಎದುರು ನೋಡುತ್ತಿದೆ.

ಶಾಲೆಯಲ್ಲಿ ಇಲ್ಲಿಯವರೆಗೆ ಸುಮಾರು 40ಕ್ಕೂ ಹೆಚ್ಚು ಮುಖೋಪಾಧ್ಯಯರು ಹಾಗೂ 100ಕ್ಕೂ ಹೆಚ್ಚು ಶಿಕ್ಷಕರು ಸೇವೆ ಸಲ್ಲಿಸಿದ್ದಾರೆ. ಸದ್ಯ ಮುಖೋಪಾಧ್ಯಯರು ಸೇರಿದಂತೆ 6 ಜನ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಖಾಸಗಿ ಶಾಲೆಗಳ ಆರ್ಭಟದ ನಡುವೆಯೂ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಮಹತ್ವದ ತಾಣವಾಗಿ 120 ವರ್ಷಗಳಿಂದ ತನ್ನ ಮಹತ್ವವನ್ನು ಉಳಿಸಿಕೊಂಡು ವಿದ್ಯಾಮಂದಿರ ಮುನ್ನಡೆದಿದೆ.

 

•ಬಸವರಾಜ ಹೂಗಾರ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.