ಸಿಡಿದೆದಿದ್ದ 14 ಜನ ನಾಮಪತ್ರ ವಾಪಸ್
•ಕಾಂಗ್ರೆಸ್ ನಾಯಕರು ನಿರಾಳ•ಕಣದಲ್ಲುಳಿದ 8 ಅಭ್ಯರ್ಥಿಗಳು •ಬೆಂತೂರು ಬೇಗುದಿ ಇನ್ನೂ ತಣ್ಣಗಾಗಿಲ್ಲ
Team Udayavani, May 3, 2019, 9:49 AM IST
ಸಚಿವ ಜಮೀರ ಅಹ್ಮದ, ಮಾಜಿ ಸಚಿವ ವಿನಯ ಕುಲಕರ್ಣಿ ನೇತೃತ್ವದಲ್ಲಿ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದು ಒಗ್ಗಟ್ಟು ಪ್ರದರ್ಶಿಸಿದರು.
ಕುಂದಗೋಳ: ಕುಂದಗೋಳ ಉಪ ಚುನಾವಣೆಗೆ ಸಲ್ಲಿಸಿದ ಒಟ್ಟು 22 ನಾಮಪತ್ರ ಅಭ್ಯರ್ಥಿಗಳಲ್ಲಿ ಕೊನೆ ದಿನವಾದ ಗುರುವಾರ 14 ಜನ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಅಂತಿಮವಾಗಿ 8 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಕಾರಿ ವಿ.ಪ್ರಸನ್ನ ಹೇಳಿದರು.
ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ, ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡ್ರ ಹಾಗೂ ಪಕ್ಷೇತರರಾದ ಕುಂದಗೋಳದ ಈಶ್ವರಪ್ಪ ಭಂಡಿವಾಡ, ಬೆಂಗಳೂರು ನಿವಾಸಿ ತುಳಸಪ್ಪ ದಾಸರ, ಹುಬ್ಬಳ್ಳಿ ಗೋಕುಲ ನಿವಾಸಿ ರಾಜು ನಾಯಕವಾಡ, ರಾಮಾಪುರದ ಶೈಲಾ ಗೋಣಿ, ನೂಲ್ವಿಯ ಸಿದ್ದಪ್ಪ ಗೋಡಿ, ಹೊಸಳ್ಳಿ ಗ್ರಾಮದ ಸೋಮಣ್ಣ ಮೇಟಿ ಅಂತಿಮವಾಗಿ ಕಣದಲ್ಲಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಈರಯ್ಯ ಹಿರೇಮಠ, ಕುತುಬುದ್ದೀನ್ ಬೆಳಗಲಿ, ಶರಣ್ಣ ಕರೆಣ್ಣವರ, ಗುರುಪುತ್ರ ಕುಳ್ಳೂರ, ಜಿ.ಡಿ.ಘೋರ್ಪಡೆ, ಚಂದ್ರಶೇಖರ ಜುಟ್ಟಲ, ಮಲ್ಲಿಕಾರ್ಜುನ ಕಿತ್ತೂರ, ಯಲ್ಲಪ್ಪ ದಬಗೊಂದಿ, ವೆಂಕನಗೌಡ ಪಾಟೀಲ, ವಿಶ್ವನಾಥ ಕೂಬಿಹಾಳ, ಶಿವಾನಂದ ಬೆಂತೂರ, ಸುರೇಶ ಸವಣೂರ, ಹಜರತಲಿ ಶೇಖ, ಎಚ್.ಎಲ್.ನದಾಫ ಸೇರಿದಂತೆ 14 ಜನ ನಾಮಪತ್ರ ಹಿಂಪಡೆದಿದ್ದಾರೆ.
ಟಿಕೆಟ್ ತಪ್ಪಿದ್ದರಿಂದ ಕಾಂಗ್ರೆಸ್ನ ಜಿ.ಡಿ.ಘೋರ್ಪಡೆ, ಚಂದ್ರಶೇಖರ ಜುಟ್ಟಲ, ವಿಶ್ವನಾಥ ಕೂಬಿಹಾಳ, ಶಿವಾನಂದ ಬೆಂತೂರ, ಸುರೇಶ ಸವಣೂರ, ಎಚ್.ಎಲ್.ನದಾಫ, ಜೆಡಿಎಸ್ನ ಹಜರತಲಿ ಶೇಖ ಕಣದಿಂದ ಹಿಂದೆ ಸರಿಸಲು ಸಚಿವ ಜಮೀರ ಅಹ್ಮದ, ಮಾಜಿ ಸಚಿವ ವಿನಯ ಕುಲಕರ್ಣಿ, ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ಅವರು ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾದ್ದರಿಂದ ಸಹಜವಾಗಿ ಪೈಪೋಟಿ ಸಾಮಾನ್ಯ. ಎಲ್ಲರನ್ನು ಒಗ್ಗೂಡಿಸಿಕೊಂಡು ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸುತ್ತಾರೆ ಎಂದರು. ಮಾಜಿ ಸಚಿವ ವಿನಯ ಕುಲಕರ್ಣಿ, ಶಾಸಕ ಪ್ರಸಾದ ಅಬ್ಬಯ್ಯ, ಅರವಿಂದ ಕಟಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ
MUST WATCH
ಹೊಸ ಸೇರ್ಪಡೆ
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?