ಸಿಡಿದೆದಿದ್ದ 14 ಜನ ನಾಮಪತ್ರ ವಾಪಸ್‌

•ಕಾಂಗ್ರೆಸ್‌ ನಾಯಕರು ನಿರಾಳ•ಕಣದಲ್ಲುಳಿದ 8 ಅಭ್ಯರ್ಥಿಗಳು •ಬೆಂತೂರು ಬೇಗುದಿ ಇನ್ನೂ ತಣ್ಣಗಾಗಿಲ್ಲ

Team Udayavani, May 3, 2019, 9:49 AM IST

hubali-1-tdy..

ಸಚಿವ ಜಮೀರ ಅಹ್ಮದ, ಮಾಜಿ ಸಚಿವ ವಿನಯ ಕುಲಕರ್ಣಿ ನೇತೃತ್ವದಲ್ಲಿ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದು ಒಗ್ಗಟ್ಟು ಪ್ರದರ್ಶಿಸಿದರು.

ಕುಂದಗೋಳ: ಕುಂದಗೋಳ ಉಪ ಚುನಾವಣೆಗೆ ಸಲ್ಲಿಸಿದ ಒಟ್ಟು 22 ನಾಮಪತ್ರ ಅಭ್ಯರ್ಥಿಗಳಲ್ಲಿ ಕೊನೆ ದಿನವಾದ ಗುರುವಾರ 14 ಜನ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಅಂತಿಮವಾಗಿ 8 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಕಾರಿ ವಿ.ಪ್ರಸನ್ನ ಹೇಳಿದರು.

ಕಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ, ಬಿಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ್ರ ಹಾಗೂ ಪಕ್ಷೇತರರಾದ ಕುಂದಗೋಳದ ಈಶ್ವರಪ್ಪ ಭಂಡಿವಾಡ, ಬೆಂಗಳೂರು ನಿವಾಸಿ ತುಳಸಪ್ಪ ದಾಸರ, ಹುಬ್ಬಳ್ಳಿ ಗೋಕುಲ ನಿವಾಸಿ ರಾಜು ನಾಯಕವಾಡ, ರಾಮಾಪುರದ ಶೈಲಾ ಗೋಣಿ, ನೂಲ್ವಿಯ ಸಿದ್ದಪ್ಪ ಗೋಡಿ, ಹೊಸಳ್ಳಿ ಗ್ರಾಮದ ಸೋಮಣ್ಣ ಮೇಟಿ ಅಂತಿಮವಾಗಿ ಕಣದಲ್ಲಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಈರಯ್ಯ ಹಿರೇಮಠ, ಕುತುಬುದ್ದೀನ್‌ ಬೆಳಗಲಿ, ಶರಣ್ಣ ಕರೆಣ್ಣವರ, ಗುರುಪುತ್ರ ಕುಳ್ಳೂರ, ಜಿ.ಡಿ.ಘೋರ್ಪಡೆ, ಚಂದ್ರಶೇಖರ ಜುಟ್ಟಲ, ಮಲ್ಲಿಕಾರ್ಜುನ ಕಿತ್ತೂರ, ಯಲ್ಲಪ್ಪ ದಬಗೊಂದಿ, ವೆಂಕನಗೌಡ ಪಾಟೀಲ, ವಿಶ್ವನಾಥ ಕೂಬಿಹಾಳ, ಶಿವಾನಂದ ಬೆಂತೂರ, ಸುರೇಶ ಸವಣೂರ, ಹಜರತಲಿ ಶೇಖ, ಎಚ್.ಎಲ್.ನದಾಫ ಸೇರಿದಂತೆ 14 ಜನ ನಾಮಪತ್ರ ಹಿಂಪಡೆದಿದ್ದಾರೆ.

ಟಿಕೆಟ್ ತಪ್ಪಿದ್ದರಿಂದ ಕಾಂಗ್ರೆಸ್‌ನ ಜಿ.ಡಿ.ಘೋರ್ಪಡೆ, ಚಂದ್ರಶೇಖರ ಜುಟ್ಟಲ, ವಿಶ್ವನಾಥ ಕೂಬಿಹಾಳ, ಶಿವಾನಂದ ಬೆಂತೂರ, ಸುರೇಶ ಸವಣೂರ, ಎಚ್.ಎಲ್.ನದಾಫ, ಜೆಡಿಎಸ್‌ನ ಹಜರತಲಿ ಶೇಖ ಕಣದಿಂದ ಹಿಂದೆ ಸರಿಸಲು ಸಚಿವ ಜಮೀರ ಅಹ್ಮದ, ಮಾಜಿ ಸಚಿವ ವಿನಯ ಕುಲಕರ್ಣಿ, ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ಅವರು ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಬಂಡಾಯ ಅಭ್ಯರ್ಥಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾದ್ದರಿಂದ ಸಹಜವಾಗಿ ಪೈಪೋಟಿ ಸಾಮಾನ್ಯ. ಎಲ್ಲರನ್ನು ಒಗ್ಗೂಡಿಸಿಕೊಂಡು ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸುತ್ತಾರೆ ಎಂದರು. ಮಾಜಿ ಸಚಿವ ವಿನಯ ಕುಲಕರ್ಣಿ, ಶಾಸಕ ಪ್ರಸಾದ ಅಬ್ಬಯ್ಯ, ಅರವಿಂದ ಕಟಗಿ ಇದ್ದರು.

ಏಕಾಂಗಿಯಾಗಿ ಬಂದು ನಾಮಪತ್ರ ಹಿಂಪಡೆದ ಬೆಂತೂರ:

ನಾಮಪತ್ರ ಹಿಂಪಡೆದು ಮಾತನಾಡಿದ ಶಿವಾನಂದ ಬೆಂತೂರ, ಟಿಕೆಟ್ ಆಕಾಂಕ್ಷಿಗಳಲ್ಲಿ ನಾವು 7 ಜನರಿದ್ದು, ಪಕ್ಷದ ವರಿಷ್ಠರು ಒಂದೇ ಕುಟುಂಬಕ್ಕೆ ಟಿಕೆಟ್ ನೀಡಿದ್ದರಿಂದ ಅಸಮಾಧಾನವಾಗಿ ನಾವೆಲ್ಲರೂ ಸೇರಿ ಒಬ್ಬರು ಕಣದಲ್ಲುಳಿಯಲು ಗಟ್ಟಿಯಾಗಿದ್ದೇವು. ಆದರೆ ಕೊನೆ ಕ್ಷಣದಲ್ಲಿ ನನ್ನೊಂದಿಗೆ ಇದ್ದವರು ಕೈ ಕೊಟ್ಟಿದ್ದರಿಂದ ತೀವ್ರ ನೋವಾಗಿದೆ. ನಾನು ಯಾರ ಮಾತು ಕೇಳಿ ನಾಮಪತ್ರ ಹಿಂಪಡೆಯುತ್ತಿಲ್ಲ. ಇನ್ನು ಮುಂದೆ ನಾನು ರಾಜಕೀಯ ನಿವೃತ್ತಿ ಬಯಸುತ್ತೇನೆ ಎಂದರು. ಈ ಚುನಾವಣೆಯಲ್ಲಿ ಯಾರಿಗೆ ಬೆಂಬಲಿಸುತ್ತೀರಿ ಎಂದು ಕೇಳಿದಾಗ ಯಾರಿಗೂ ಇಲ್ಲ ಎಂದರು.

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.