ಅತಿಕ್ರಮಣ ತೆರವಿಗೆ 15 ದಿನ ಗಡುವು

•ಜಿಲ್ಲಾಧಿಕಾರಿ-ಪಾಲಿಕೆ ಆಯುಕ್ತರಿಗೆ ದೇಶಪಾಂಡೆ ಸೂಚನೆ•ಎಪಿಎಂಸಿ ಸ್ಥಳಾಂತರಕ್ಕೂ ಸಮಯ ಮಿತಿ

Team Udayavani, Jun 15, 2019, 9:21 AM IST

hubali-tdy-1..

ಧಾರವಾಡ: ಅವಳಿ ನಗರದಲ್ಲಿ ರಸ್ತೆಗಳ ಅತಿಕ್ರಮಣ ಕುರಿತು ಮಾಜಿ ಸಿಎಂ ಜಗದೀಶ ಶೆಟ್ಟರ ಸಚಿವ ದೇಶಪಾಂಡೆ ಅವರ ಗಮನ ಸೆಳೆದರು.

ಧಾರವಾಡ: ಅವಳಿ ನಗರ ಸೇರಿದಂತೆ ಜಿಲ್ಲೆಯ ಎಲ್ಲ ಹೆದ್ದಾರಿ, ರಸ್ತೆಗಳು ಮತ್ತು ಸರ್ಕಾರಿ ಸ್ವಾಮ್ಯದ ಜಮೀನು ಅತಿಕ್ರಮಣ ಗುರುತಿಸಿ 15 ದಿನಗಳ ಒಳಗಾಗಿ ತೆರವಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ 4ನೇ ತ್ತೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚಿನ ಹೆದ್ದಾರಿಗಳು, ಕಿರುರಸ್ತೆಗಳು ಮತ್ತು ಸರ್ಕಾರದ ಒಡೆತನದ ಜಾಗ ಅತಿಕ್ರಮಣಗೊಂಡ ಬಗ್ಗೆ ಅನೇಕರು ದೂರು ನೀಡಿದ್ದಾರೆ. ಕೂಡಲೇ ಈ ಬಗ್ಗೆ ಜಿಲ್ಲಾಧಿಕಾರಿ ಸಭೆ ಕರೆದು ತಂಡ ರಚಿಸಿ ಅತಿಕ್ರಮಣದ ಮಾಹಿತಿ ಪಡೆದು ಅದನ್ನು ಶೀಘ್ರ ತೆರವುಗೊಳಿಸಿ ಅಲ್ಲಿ ಸರ್ಕಾರಿ ಜಾಗ ಎಂದು ಫಲಕ ಹಾಕುವಂತೆ ಸೂಚಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಹುಬ್ಬಳ್ಳಿ ಅಮರಗೋಳದ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣವು ಏಷ್ಯಾದಲ್ಲಿಯೇ ಅತಿದೊಡ್ಡದಾಗಿದೆ. ಆದರೆ ನಗರದ ಹಳೆ ಮಾರುಕಟ್ಟೆಯಲ್ಲಿ ಇರುವ ವರ್ತಕರನ್ನು ಸ್ಥಳಾಂತರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಧಾರವಾಡ ಎಪಿಎಂಸಿ ಸ್ಥಳಾಂತರಕ್ಕೂ ಒತ್ತು ನೀಡಬೇಕು ಎಂದು ಆಗ್ರಹಿಸಿದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಹಿರೇಪೇಟ, ಅಕ್ಕಿಹೊಂಡ ಮತ್ತಿತರ ಪ್ರದೇಶಗಳಲ್ಲಿ ಲಾರಿಗಳನ್ನು ಅನಿಯಮಿತವಾಗಿ ಬಿಡುವುದು, ಅವೈಜ್ಞಾನಿಕವಾಗಿ ನಿಲುಗಡೆ ಮಾಡುವುದರಿಂದ ಸಂಚಾರ ವ್ಯವಸ್ಥೆಗೆ ಅಡಚಣೆಯಾಗುತ್ತಿದೆ. ಇದರ ಪರಿಹಾರಕ್ಕೆ ಪೊಲೀಸರು ಕಠಿಣ ಕಾರ್ಯಾಚರಣೆ ನಡೆಸಬೇಕು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಕೊಳಚೆ ಪ್ರದೇಶಗಳಲ್ಲಿ ರಸ್ತೆ, ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಇರುವ ಯೋಜನೆಗಳ ಸದುಪಯೋಗ ಜನರಿಗೆ ದೊರೆಯುವಂತೆ ಮಾಡಲು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಲ್ಲಾಧಿಕಾರಿ ದೀಪಾ ಚೋಳನ್‌, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಎಸ್ಪಿ ಜಿ. ಸಂಗೀತಾ ಮತ್ತಿತರರು ಇದ್ದರು.

ಎಲ್ಲಿಯೂ ನೀರಿನ ಅಭಾವ ಉಂಟಾಗದಂತೆ ಎಚ್ಚರ ವಹಿಸಿ:

ಅವಳಿ ನಗರದಲ್ಲಿ ಅಗತ್ಯವಿರುವೆಡೆ ಕೊಳವೆಬಾವಿ ಕೊರೆದು ನೀರು ಕೊಡಿ. ಮಹಾನಗರದ ಎಲ್ಲ ಪ್ರದೇಶಗಳಿಗೆ ಕನಿಷ್ಟ 6-7 ದಿನಗಳಿಗೆ ಒಮ್ಮೆ ನೀರು ಪೂರೈಸಬೇಕು. ಅಗತ್ಯವಿರುವ 27 ಕಡೆಗಳಲ್ಲಿ ಕೊಳವೆಬಾವಿ ಕೊರೆದು ನೀರು ಪೂರೈಸಲು ಉದ್ದೇಶಿಸಲಾಗಿದೆ. ಸರ್ಕಾರ ಹಣ ಒದಗಿಸಲಿದೆ. ಎಲ್ಲಿಯೂ ನೀರಿನ ಅಭಾವ ಉಂಟಾಗದಂತೆ ಎಚ್ಚರ ವಹಿಸಿ. ಅವಶ್ಯವಿದ್ದರೆ ಟ್ಯಾಂಕರ್‌ ಮೂಲಕವೂ ನೀರು ಪೂರೈಸಿ ಎಂದು ಸಚಿವರು ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ವಿವರಣೆ ಕೇಳಿದ ಮುನೇನಕೊಪ್ಪ:

ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ನವಲಗುಂದ ಪಟ್ಟಣದ ಮೂಲಕ ಹಾಯ್ದುಹೋಗುವ ರಾಜ್ಯ ಹೆದ್ದಾರಿಗೆ ಬೈಪಾಸ್‌ ರಸ್ತೆ ನಿರ್ಮಿಸುವ ಕಾರ್ಯ ಕುಂಠಿತವಾಗಿರುವ ಬಗ್ಗೆ ವಿವರಣೆ ಕೇಳಿದರು.ಲೋಕೋಪಯೋಗಿ ಇಲಾಖೆ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಎನ್‌.ಎಂ. ಕುಲಕರ್ಣಿ ಮಾತನಾಡಿ, ನವಲಗುಂದ, ನರಗುಂದ ಪಟ್ಟಣಗಳಲ್ಲಿ ಬೈಪಾಸ್‌ ರಸ್ತೆ ನಿರ್ಮಿಸಲು ವಿಸ್ತೃತ ಯೋಜನಾ ವರದಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ನಡೆಸಲು ಮಂಜೂರಾತಿ ಸಿಗಬೇಕಾಗಿದೆ ಎಂದರು.
ತಿಂಗಳು ಕಾಲಾವಕಾಶ:

ಅವಳಿ ನಗರಗಳ ವರ್ತಕರಿಗೆ ನೂತನ ಎಪಿಎಂಸಿ ಪ್ರಾಂಗಣಗಳಲ್ಲಿ ಸೌಲಭ್ಯಗಳಿದ್ದರೂ ಸ್ಥಳಾಂತರಗೊಳ್ಳದೇ ಕೆಲವು ವ್ಯಾಪಾರಿಗಳು ಚಿಲ್ಲರೆ ವ್ಯಾಪಾರದ ಅನುಮತಿ ಪಡೆದು ಹಳೆಯ ಮಾರುಕಟ್ಟೆಗಳಲ್ಲಿ ವಹಿವಾಟು ಮುಂದುವರಿಸಿದ್ದಾರೆ. ವಾಸ್ತವವಾಗಿ ಅವರು ಸಗಟು ವ್ಯಾಪಾರ ಮಾಡುತ್ತಿದ್ದಾರೆ. ಅವರಿಗೆಲ್ಲ 30 ದಿನಗಳ ಕಾಲಾವಕಾಶ ನೀಡಿ ಸ್ಥಳಾಂತರಗೊಳ್ಳಲು ಸೂಚನೆ ನೀಡಬೇಕು. ಇಲ್ಲದಿದ್ದರೆ ಜಿಲ್ಲಾಡಳಿತ ಹಾಗೂ ಪೊಲೀಸರ ನೆರವು ಪಡೆದು ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಸಚಿವ ದೇಶಪಾಂಡೆ ಕೃಷಿ ಮಾರುಕಟ್ಟೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಚಿವರ ವಾಹನಕ್ಕೆ ಅಡ್ಡಬಂದ ಬಸ್‌ ಚಾಲಕಗೆ ಬಿಸಿ:

ಜಿಲ್ಲಾ ಉಸ್ತುವಾರಿ ಸಚಿವರ ವಾಹನಕ್ಕೆ ಅಡ್ಡಬಂದು ದಾರಿ ಬಿಡಲು ವಿಳಂಬ ಮಾಡಿದ್ದಕ್ಕೆ ಸಾರಿಗೆ ಬಸ್‌ ಚಾಲಕನಿಗೆ ಬಿಸಿ ಮುಟ್ಟಿಸಿದ್ದು, ಅಲ್ಲದೇ ಬಸ್‌ ಸಂಚಾರಕ್ಕೆ ತಡೆ ಹಾಕಿದ ಘಟನೆ ಧಾರವಾಡದ ಹಳೆ ಬಸ್‌ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಧಾರವಾಡದಿಂದ ಹೊಸವಾಳಕ್ಕೆ ಹೊರಟಿದ್ದ ಬಸ್ಸನ್ನು ಸಚಿವರ ಪಿಎ ಸೂಚನೆ ಮೇರೆಗೆ ನಿಲ್ದಾಣದ ಒಳಗಡೆಯೇ ಸಂಚಾರಿ ಪೊಲೀಸರು ತಡೆ ಹಿಡಿದರು. ಇದಲ್ಲದೇ ಚಾಲಕ ಮಲ್ಲಿಕಾರ್ಜುನ ರಾಯನಗೌಡರಿಗೆ ಎಚ್ಚರಿಕೆ ಸಹ ನೀಡಿದರು. ಬಸ್‌ ಸಂಚಾರಕ್ಕೆ ಕೆಲ ಹೊತ್ತು ತಡೆ ಹಾಕಿದ್ದರಿಂದ ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಆರ್‌.ವಿ. ದೇಶಪಾಂಡೆ, ನನ್ನ ವಾಹನಕ್ಕೆ ಅಪಘಾತ ಆಗುತ್ತಾ ಇತ್ತು. ನನ್ನ ವಾಹನದ ಮೇಲೆ ಬಂದ ಹಿನ್ನೆಲೆ ಅದರನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಅದಕ್ಕೆ ಚಾಲಕನಿಗೆ ವಾರ್ನ್ ಮಾಡಿ ಅಂತಾ ಪಿಎಗೆ ಹೇಳಿದ್ದೆ. ನನ್ನ ಕಾರಿನ ಮೇಲೆಯೇ ಆತ ಬಂದಿದ್ದ. ನಮ್ಮದು ಸಣ್ಣ ಗಾಡಿ ಅದು ದೊಡ್ಡ ಬಸ್‌. ಡ್ರೈವರ್‌ ಯಾರು ಅಂತ ಕೂಡ ಗೊತ್ತಿಲ್ಲ. ಇದು ಸಚಿವರ ಪ್ರಶ್ನೆ ಇಲ್ಲ. ಸಾಮಾನ್ಯ ಜನರಿಗೂ ಹೀಗೆ ಆಗಬಹುದು ಎಂದರು. ಮಿನಿಸ್ಟರ್‌ ಕಾರ್‌ ಮೇಲೆಯೇ ಹೀಗೆ ಬಂದರೆ ಸಾಮಾನ್ಯರಿಗೆ ಹೇಗಾಗಬೇಡ? ನಗರದಲ್ಲೇ ಆತ ಹೀಗೆ ಬಸ್‌ ನಡೆಸುತ್ತಾನೆಂದರೆ ಹೇಗೆ? ಅದಕ್ಕಾಗಿಯೇ ನಾನು ವಾರ್ನ್ ಮಾಡಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇನ್ನೂ ಧಾರವಾಡದ ಪೊಲೀಸ್‌ ಮಕ್ಕಳ ವಸತಿ ಶಾಲೆಯ ಶಿಕ್ಷಕರನ್ನು ಹೊರ ಹಾಕಿರುವುದು ಗೊತ್ತಿಲ್ಲ ಎಂದು ಹೇಳಿದ ಸಚಿವರು, ಈ ಬಗ್ಗೆ ಪರಿಶೀಲಿಸುವಂತೆ ಡಿಸಿಗೆ ಸೂಚನೆ ನೀಡಿದರು.
ಅರೇ ತಮ್ಮಾ.. ಉಶ್‌.. ಕೇಳು:

ಸುಳ್ಳು ಹೇಳಿದ್ರೆ ತುಳಜಾ ಭವಾನಿ ಶಾಪಾ ಕೊಡ್ತಾಳೆ ನೀನು ನಿಜಾ ಹೇಳಿದ್ರೆ ನಿನ್ನ ಆಯುಷ್ಯ ಹೆಚ್ಚಲಿ..ಆದ್ರೆ ನೀನು ಸುಳ್ಳ ಹೇಳಿದ್ರೆ ತುಳಜಾ ಭವಾನಿ ನಿನ್ನ ನೋಡ್ಕೊಳ್ಳಲಿ ಹೋಗು..ಅರೇ ಬಾಬಾ ಇಲ್ಲೆ ಹವಾಗುಣ ಚಲೋ ಇಲ್ಲೇನು..ಕೆಲ್ಸಾ ಯಾಕ ಮಾಡವಲ್ಲಿ ನೀನು? ಬಾ ಕಾರವಾರಕ್ಕೆ ಹಾಕತೇನಿ ನಿನ್ನಾ ಮೀನಾ ತಿನ್ನೊಕೊಂತ ಇರುವಂತೆ ಅಲ್ಲೆ.., ಏ ತಹಶೀಲ್ದಾರ ನಿನ್ನ ಮನ್ಯಾಗ ದಿನಾ ನೀರ ಬರ್ತಾವಿಲ್ಲೋ? ಹಾಂ.. ಕುಂದಗೋಳಕ್ಕ ಮಾತ್ರ 15 ದಿನಕ್ಕೊಮ್ಮೆ ನೀರು? ಹಿಂಗಾದ್ರ ಹೆಂಗ? ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳಿಗೆ ತಮ್ಮದೇ ಶೈಲಿಯಲ್ಲಿ ಚಾಟಿ ಬೀಸಿದ ಪರಿ ಇದು. 4ನೇ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ಮಾಡುವಾಗ ಅಧಿಕಾರಿಗಳ ಮೂಗು ಹಿಂಡಿದ ಸಚಿವರು, ಅವರ ತಪ್ಪುಗಳನ್ನು ಎತ್ತಿ ಹಿಡಿದು ಎಚ್ಚರಿಕೆ ನೀಡಿದರು. ಕಠಿಣ ಪ್ರಶ್ನೆ ಮತ್ತು ಉದಾಹರಣೆಗಳ ಮೂಲಕ ಸರಿಯಾಗಿ ತಮ್ಮ ಕೆಲಸ ನಿರ್ವಹಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.