ಕಡಲೆಗೆ ನಾಫೆಡ್ನಿಂದ 156 ಕೋಟಿ ರೂ.ಬಿಡುಗಡೆ: ಜೋಶಿ
Team Udayavani, May 21, 2020, 7:46 AM IST
ಹುಬ್ಬಳ್ಳಿ: ರಾಜ್ಯದ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದ ಕಡಲೆಗೆ ನಾಫೆಡ್ ಸಂಸ್ಥೆ ಕರ್ನಾಟಕ ರಾಜ್ಯ ಮಾರಾಟ ಮಹಾ ಮಂಡಳಿಗೆ 156.09 ಕೋಟಿ ರೂ. ಬಿಡುಗಡೆ ಮಾಡಿದ್ದು, ಮತ್ತೆ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಕಡಲೆಗೆ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ಗೆ 4,875ರೂ.ನಂತೆ ಖರೀದಿಸಲಾಗುತ್ತಿದೆ. ಕೇಂದ್ರ ಸರಕಾರದ ನಾಫೆಡ್ ಸಂಸ್ಥೆ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಳ, ಕರ್ನಾಟಕ ರಾಜ್ಯ ಸರಕಾರದ ಮೂಲಕ ಖರೀದಿಗೆ ಅವಕಾಶ ಕಲ್ಪಿಸಿದೆ. ಕಡಲೆ ಮಾರಾಟ ಮಾಡಿದ ರೈತರಿಗೆ ಹಣ ಸಂದಾಯವಾಗುತ್ತಿಲ್ಲವೆಂದು ರಾಜ್ಯದ ಅನೇಕ ರೈತರು ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಕೂಡಲೇ ನಾಫೆಡ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ರಾಜ್ಯದ ರೈತರಿಂದ ಖರೀದಿಸಿದ ಕಡಲೆಗೆ ತಕ್ಷಣ ಹಣ ಸಂದಾಯ ಮಾಡುವಂತೆ ಸೂಚಿಸಿದ್ದೆ. ಇದಕ್ಕೆ ಸ್ಪಂದಿಸಿ, ಈಗಾಗಲೇ ಸಂಸ್ಥೆಯಿಂದ ಕರ್ನಾಟಕ ರಾಜ್ಯ ಮಾರಾಟ ಮಹಾ ಮಂಡಳದವರಿಗೆ ಹಣ ಬಿಡುಗಡೆ ಮಾಡಲಾಗಿದೆ. ಮಾರಾಟ ಮಹಾಮಂಡಳಿಯೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಖರೀದಿಸಿದ ಕಡಲೆಯನ್ನು ಭಾರತೀಯ ಉಗ್ರಾಣ ನಿಗಮಕ್ಕೆ ಪೂರೈಸಿ ಅದರ ಮಾಹಿತಿ ನೀಡುವಂತೆ ಈಗಾಗಲೇ ಪತ್ರ ಮುಖೇನ ತಿಳಿಸಿದ್ದಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ.
ಈ ಒಡಂಬಡಿಕೆಯಂತೆಯೇ ಮಹಾಮಂಡಳಿ ಪ್ರತಿದಿನ ಖರೀದಿಸಿದ ಕಡಲೆಯನ್ನು ಉಗ್ರಾಣ ನಿಗಮಕ್ಕೆ ಪೂರೈಸಿ ಸಂಬಂಧಿಸಿದ ಮಾಹಿತಿಯನ್ನು ನಾಫೆಡ್ ಸಂಸ್ಥೆಗೆ ಸಲ್ಲಿಸಿ ಹಣ ಪಡೆದು ರೈತರ ಖಾತೆಗೆ ನಿಗದಿತ ಸಮಯದೊಳಗೆ ಹಣ ಸಂದಾಯ ಮಾಡಲು ಸೂಚಿಸಿದ್ದೇನೆಂದು ಜೋಶಿ ತಿಳಿಸಿದರು. ಈಗಾಗಲೇ ಬಿಡುಗಡೆ ಮಾಡಿರುವ ಹಣವನ್ನು ಮಹಾಮಂಡಳ ರೈತರ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್