ಶೀಘ್ರವೇ ಕಿಮ್ಸ್‌ 1,800 ಹಾಸಿಗೆ ಆಸ್ಪತ್ರೆ


Team Udayavani, Dec 4, 2019, 11:09 AM IST

huballi-tdy-2

ಹುಬ್ಬಳ್ಳಿ: ಪ್ರತಿನಿತ್ಯ 60-70 ರೋಗಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾಗುವ ಕಿಮ್ಸ್‌ನಲ್ಲಿ ವೈದ್ಯರು ಜೀವರಕ್ಷಣಾ ಕೌಶಲ್ಯಗಳ ತರಬೇತಿ ಪಡೆಯುವುದು ಅವಶ್ಯಕವಾಗಿದೆ ಎಂದು ಕಿಮ್ಸ್‌ ನಿರ್ದೇಶಕ ಡಾ| ರಾಮಲಿಂಗಪ್ಪ ಅಂತರತಾನಿ ಹೇಳಿದರು.

ಕಿಮ್ಸ್‌ನ ಗೋಲ್ಡನ್‌ ಜ್ಯುಬಿಲಿ ಸಭಾಂಗಣದಲ್ಲಿ ಮಂಗಳವಾರ ಸೊಸೈಟಿ ಆಫ್‌ ಕ್ರಿಟಿಕಲ್‌ ಕೇರ್‌ಮೆಡಿಸಿನ್‌ ಸಹಯೋಗದಲ್ಲಿ ಆಯೋಜಿಸಿದ ಎರಡು ದಿನಗಳ ಕ್ರಿಟಿಕಲ್‌ ಕೇರ್‌ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿರುವವರು ಆಸ್ಪತ್ರೆಗೆ ಬಂದಾಗ ಅವರ ಆರೋಗ್ಯ ಸಮಸ್ಯೆಯನ್ನರಿತು ಸಮರ್ಪಕ ಚಿಕಿತ್ಸೆ ನೀಡುವುದು ಅವಶ್ಯಕವಾಗಿದೆ. ಈ ಕುರಿತು ವೈದ್ಯರ ಜ್ಞಾನ ಹೆಚ್ಚಿಸಲು ಕಾರ್ಯಾಗಾರ ಆಯೋಜಿಸಲಾಗಿದೆ. ವೈದ್ಯರು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಂಡು ಅಪ್‌ ಗ್ರೇಡ್ ಆಗಿ ರೋಗಿಗಳ ಜೀವ ರಕ್ಷಣೆಗೆ ಮುಂದಾಗಬೇಕು ಎಂದರು.

ಪ್ರಸ್ತುತ 1200 ಬೆಡ್‌ಗಳ ಕಿಮ್ಸ್‌ನಲ್ಲಿ ಶೀಘ್ರದಲ್ಲಿಯೇ ಬೆಡ್‌ಗಳ ಸಂಖ್ಯೆ 1800ಕ್ಕೆ ಹೆಚ್ಚಲಿದ್ದು, ನಂತರ ರಾಜ್ಯದ ದೊಡ್ಡ ಆಸ್ಪತ್ರೆ ಎಂಬ ಖ್ಯಾತಿ ಗಳಿಸಲಿದೆ. ಆಸ್ಪತ್ರೆಯಲ್ಲಿ 2 ಎಕ್ಸೆಲ್‌ -1000 ಯಂತ್ರೋಪಕರಣಗಳು ಹಾರ್ಮೊನ್‌ ಆನಲೈಸರ್‌ ಸೇವೆ ಲಭ್ಯವಿದೆ. ಸದ್ಯ ಆಸ್ಪತ್ರೆಯಲ್ಲಿ 65 ವೆಂಟಿಲೇಟರ್‌ಗಳಿದ್ದು, ಇನ್ನೂ 30 ವೆಂಟಿಲೇಟರ್‌ ಗಳನ್ನು ಶೀಘ್ರದಲ್ಲೇ ಅಳವಡಿಸಲಾಗುವುದು. ಸದ್ಯ ಕಿಮ್ಸ್‌ ಐಸಿಯುನಲ್ಲಿ 120 ಬೆಡ್‌ಗಳಿದ್ದು, ಅವುಗಳ ಸಂಖ್ಯೆ ಹೆಚ್ಚಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಹೆರಿಗೆ ಸಂದರ್ಭದಲ್ಲಾಗುತ್ತಿರುವ ಮೃತ್ಯುದರ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ.ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಹೆರಿಗೆ ಸಂದರ್ಭದಲ್ಲಿನ ಮೃತ್ಯು ದರ ಹೆಚ್ಚಾಗಿದೆ. ಸದ್ಯ ರಾಜ್ಯದಲ್ಲಿ 1 ಲಕ್ಷದಲ್ಲಿ 62 ಜನರು ಹೆರಿಗೆ ಸಂದರ್ಭದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಿದೆ ಎಂದರು. ಅಮೆರಿಕ ಹಾಗೂ ಆಸ್ಟ್ರೇಲಿಯಾದಿಂದ ಸಂಪನ್ಮೂಲವ್ಯಕ್ತಿಗಳು ಕ್ರಿಟಿಕಲ್‌ ಕೇರ್‌ ಬಗ್ಗೆ ಉಪನ್ಯಾಸ ನೀಡಲು ಆಗಮಿಸಿದ್ದಾರೆ. ಇಲ್ಲಿನ ವೈದ್ಯರು ಅವರ ಅನುಭವವನ್ನು ಕೇಳಬೇಕು ಎಂದು ಹೇಳಿದರು. ಕಿಮ್ಸ್‌ ವೈದ್ಯಕೀಯ ಅಧೀಕ್ಷಕ ಡಾ| ಅರುಣಕುಮಾರ ಮಾತನಾಡಿ, ಕಿಮ್ಸ್‌ನಲ್ಲಿಯೇ ಕಲಿತು ವಿದೇಶದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ವೈದ್ಯರು ಇಲ್ಲಿ ಜೀವರಕ್ಷಣಾ ಕೌಶಲ ಕಾರ್ಯಾಗಾರ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

ಆಸ್ಟ್ರೇಲಿಯಾದ ಹಿರಿಯ ವೈದ್ಯ ಡಾ| ಭೀಮಸೇನಾಚಾರ್ಯ ಪ್ರಸಾದ ಏರ್‌ವೇ ಮ್ಯಾನೇಜ್‌ಮೆಂಟ್‌ ಕುರಿತು ಮಾತನಾಡಿ, ಜೀವನ್ಮರಣ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆತಂದಾಗ ಪ್ರಾಣವಾಯು ಬಗ್ಗೆ ವಿಶೇಷ ಗಮನಹರಿಸಬೇಕು. ಸಮರ್ಪಕವಾಗಿ ಆಮ್ಲಜನಕ ಪೂರೈಕೆ ಮಾಡಬೇಕು. ಇದರಿಂದ ಮಾತ್ರದೇಹದಲ್ಲಿರುವ 3 ಟ್ರಿಲಿಯನ್‌ ಜೀವಕೋಶಗಳನ್ನು ಕ್ರಿಯಾಶೀಲವಾಗಿಡಲು ಸಾಧ್ಯವಾಗುತ್ತದೆ. ಗಾಳಿ ದೇಹದ ಹೊರಗೆ ಹಾಗೂ ಒಳಗೆ, ರಕ್ತ ದೇಹದಾದ್ಯಂತ ಸಂಚರಿಸುತ್ತಿದೆ ಎಂಬುದನ್ನು ದೃಢಪಡಿಸಿಕೊಳ್ಳಬೇಕು. ಅತಿಯಾದ ಆಮ್ಲಜನಕ ಜೀವಕ್ಕೆ ಕುತ್ತು ತರಹುದಾಗಿದೆ ಎಂದರು.

ಅಮೆರಿಕದ ವೈದ್ಯ ಡಾ| ಕೃಷ್ಣ ಅಪರಂಜಿ ಮಾನಿಟರಿಂಗ್‌ ಆಕ್ಸಿಜನ್‌ ಬ್ಯಾಲೆನ್ಸ್‌ ಆ್ಯಂಡ್‌ ಆಸಿಡ್‌ ಬೇಸ್‌ ಸ್ಟೇಟಸ್‌ಕುರಿತು ಉಪನ್ಯಾಸ ನೀಡಿದರು. ಕಿಮ್ಸ್‌ ಪ್ರಾಚಾರ್ಯ ಡಾ| ಎಂ.ಸಿ. ಚಂದ್ರು, ಡಾ| ರಾಜೇಶ್ವರಿ ಜೈನಾಪುರ, ಡಾ| ಈಶ್ವರಹಸಬಿ, ಡಾ| .ಎಸ್‌. ಅಕ್ಕಮಹಾದೇವಿ, ಡಾ| ಬಿ.ಎಸ್‌. ಪಾಟೀಲ ಇದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.