19ರಿಂದ ಹವ್ಯಾಸಿ ರಂಗಭೂಮಿ ಸಮಾವೇಶ


Team Udayavani, Feb 17, 2017, 2:37 PM IST

hub7.jpg

ಧಾರವಾಡ: ಕರ್ನಾಟಕ ನಾಟಕ ಅಕಾಡೆಮಿ ಫೆ.19ರಿಂದ 23ರ ವರೆಗೆ ರಾಜ್ಯಮಟ್ಟದ ಪ್ರಥಮ ಹವ್ಯಾಸಿ ರಂಗಭೂಮಿ ಸಮಾವೇಶವನ್ನು ಇಲ್ಲಿನ ಆಲೂರು ವೆಂಕಟರಾವ್‌ ಭವನದಲ್ಲಿ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಇದೇ ಮೊಟ್ಟ ಮೊದಲು ಇಂತಹ ಸಮಾವೇಶ ನಡೆಯುತ್ತಿದ್ದು, ಅಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಸಮಾವೇಶ ಉದ್ಘಾಟಿಸಲಿದ್ದು, ಹಿರಿಯ ರಂಗಕರ್ಮಿ ಪ್ರಸನ್ನ ಅವರು ಈ ಸಮಾವೇಶದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. 

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ಶಾಸಕ ಅರವಿಂದ ಬೆಲ್ಲದ ವಹಿಸಿಕೊಳ್ಳಲಿದ್ದು, ನಾಟಕ ಅಕಾಡೆಮಿ ಅಧ್ಯಕ್ಷ ಶೇಖ್‌ ಮಾಸ್ತರ್‌ ಪ್ರಾಸ್ತಾವಿಕ ನುಡಿ ಆಡಲಿದ್ದಾರೆ. ರಂಗ ಸಂಪನ್ನರು ಮಾಲಿಕೆ ಪುಸ್ತಕ ಬಿಡುಗಡೆಯನ್ನು ನಟ ಮುಖ್ಯಮಂತ್ರಿ ಚಂದ್ರು ಮಾಡಲಿದ್ದು, ಜಿಲ್ಲಾ ರಂಗ ಮಾಹಿತಿ ಮಾಲಿಕೆಯನ್ನು ವಿನಯ ಕುಲಕರ್ಣಿ ಬಿಡುಗಡೆ ಮಾಡಲಿದ್ದಾರೆ. 

ಮೇಯರ್‌ ಮಂಜುಳಾ ಅಕ್ಕೂರ ಅವರಿಂದ ಏಳು ನಾಟಕಗಳು ಬಿಡುಗಡೆಗೊಳ್ಳಲಿದ್ದು, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಸೇರಿದಂತೆ ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಿರಿಯ ಸಾಹಿತಿಗಳಾದ ಡಾ| ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ| ಎ. ಮುರಿಗೆಪ್ಪ, ಟಿ.ಎಸ್‌. ನಾಗಾಭರಣ, ಮಂಡ್ಯ ರಮೇಶ, ಸತೀಶ ಕುಲಕರ್ಣಿ ಉಪಸ್ಥಿತರಿರುವರು. 

ಗೋಷ್ಠಿ-ಸಂವಾದ: ಫೆ.20ರಂದು ಬೆಳಗ್ಗೆ 10:00ಕ್ಕೆ ಹವ್ಯಾಸಿ ರಂಗಭೂಮಿ ಹೆಜ್ಜೆ ಗುರುತು ಸಂವಾದಗೋಷ್ಠಿ ನಡೆಯಲಿದೆ. ಚಳವಳಿಗಳು ಮತ್ತು ಸಿದ್ಧಾಂತಗಳ ಕುರಿತು ಡಾ| ಶಿವಾನಂದ ಶೆಟ್ಟರ್‌ ಮಾತನಾಡಲಿದ್ದಾರೆ. ಫೆ.21ರಂದು ಹೂಲಿ ಶೇಖರ್‌. ಎಚ್‌. ಜನಾರ್ಧನ (ಜನ್ನಿ) ಅವರಿಂದ ಹವ್ಯಾಸಿ ರಂಗಭೂಮಿ ಗ್ರಾಮೀಣ ಮತ್ತು ನಗರದ ನಡೆಗಳು, ಹವ್ಯಾಸ ಮತ್ತು ಚಳವಳಿ ಇಂದಿನ ಸ್ಥಿತಿ ಎಚ್‌. ಎಸ್‌. ಉಮೇಶ್‌ ಹಾಗೂ ರೆಪರ್ಟರ್‌ ಗಳ ಕುರಿತಾಗಿ ಪ್ರಕಾಶ ಬೆಳವಾಡಿ ಮಾತನಾಡುವರು. 

ಫೆ.22ರಂದು ಹವ್ಯಾಸಿ ರಂಗಭೂಮಿ ಮುನ್ನೋಟ ಕುರಿತು ಡಾ| ಸಿದ್ದನಗೌಡ ಪಾಟೀಲ ಹವ್ಯಾಸಿ ರಂಗಭೂಮಿಯ ಭವಿಷ್ಯ ಟಿ.ಪಿ.ಅಶೋಕ, ಕ್ರಿಯಾ ಯೋಜನೆ ಸ್ವರೂಪ ಗೋಪಾಲಕೃಷ್ಣ ನಾಯರಿ, ಸಲಹೆಗಳು ಪ್ರಭಾಕರ ಸಾತಖೇಡ ಮಾಡಲಿದ್ದಾರೆ. ಫೆ.23ರಂದು ಬೆಳಿಗ್ಗೆ 10:00ಕ್ಕೆ ರಂಗಭೂಮಿ ಅನುಭವದ ಕಥನ ಅಧ್ಯಕ್ಷತೆ ಶ್ರೀನಿವಾಸ ಜಿ. ಕಪ್ಪಣ್ಣ, ಬಿ. ಸುರೇಶ ನಿರ್ದೇಶಕರು, ನೇಪಥ್ಯ ಸುರೇಶ ಆನಗಳ್ಳಿ, ಸಂಘಟನೆ ಲಕ್ಷ್ಮೀ ಚಂದ್ರಶೇಖರ ಜಯಪ್ರಕಾಶ ಗೌಡ ಗ್ರಾಮೀಣ ರಂಗಭೂಮಿ ಸಂಘಟನೆ ಕುರಿತಾಗಿ ಮಾತನಾಡುವರು. 

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.