1975 ಪ್ರಕರಣ ರಾಜಿಯಲ್ಲಿ ಇತ್ಯರ್ಥ
Team Udayavani, Dec 15, 2019, 2:18 PM IST
ಧಾರವಾಡ: ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಈಶಪ್ಪ ಕೆ. ಭೂತೆ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಶನಿವಾರ ನಡೆಸಲಾಯಿತು.
ಧಾರವಾಡದಲ್ಲಿ 14, ಹುಬ್ಬಳ್ಳಿಯಲ್ಲಿ 18, ಕುಂದಗೋಳದಲ್ಲಿ 2 ಪೀಠಗಳನ್ನು, ನವಲಗುಂದ ಮತ್ತು ಕಲಘಟಗಿಯಲ್ಲಿ ತಲಾ 1 ಪೀಠ ಸ್ಥಾಪಿಸಿ ಸುಮಾರು 7,009ಕ್ಕಿಂತ ಹೆಚ್ಚು ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳಲಾಗಿತ್ತು. ಅದರಲ್ಲಿ 1,666 ಚಾಲ್ತಿ ಇರುವ ಪ್ರಕರಣಗಳನ್ನು ಹಾಗೂ 309 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸಲಾಯಿತು. ಸುಮಾರು 17 ಕೋಟಿ ಮೊತ್ತವನ್ನು ವಸೂಲು ಮಾಡಲಾಯಿತು. ಲೋಕ ಅದಾಲತ್ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿಧ ವಿಮೆ ಕಂಪನಿ ಅಧಿಕಾರಿಗಳು, ವಿಮೆ ಕಂಪನಿ ಪ್ಯಾನಲ್ ವಕೀಲರುಗಳು, ಅರ್ಜಿದಾರರ ಪರ ವಕೀಲರು, ವಾಕರಸಾಸಂ ಅಧಿಕಾರಿಗಳು, ಕಕ್ಷಿದಾರರು, ಜಿಲ್ಲೆಯ ವಕೀಲ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಹೈಕೋರ್ಟ್: ಇಲ್ಲಿಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಲೋಕ ಅದಾಲತ್ಗಾಗಿ ಸ್ಥಾಪಿಸಿದ್ದ ಮೂರು ಪೀಠದಲ್ಲಿ ಸುಮಾರು 1,825 ಪ್ರಕರಣಗಳನ್ನು ತೆಗೆದುಕೊಂಡು ಒಟ್ಟು 380 ಮೊಟಾರು ವಾಹನ ಪ್ರಕರಣಗಳನ್ನು ರಾಜಿ ಮಾಡಿಸಲಾಯಿತು. ಒಟ್ಟು ಪರಿಹಾರ 6,58,82,890 ರೂ. ಕೊಡಿಸಲಾಯಿತು. ನ್ಯಾಯಮೂರ್ತಿಗಳಾದ ಎಚ್.ಟಿ. ನರೇಂದ್ರ ಪ್ರಸಾದ್, ಅಶೋಕ ಜಿ. ನಿಜಗಣ್ಣನವರ್, ಪಿ.ಜಿ.ಎಂ. ಪಾಟೀಲ, ಎನ್.ಎಸ್. ಸಂಜಯಗೌಡ ಮತ್ತು ನಟರಾಜ್ ರಂಗಸ್ವಾಮಿ, ರವಿ ಎಸ್. ಬಾಳಿಕಾಯಿ, ಜೆ.ಎಸ್. ಶೆಟ್ಟಿ, ಎಸ್.ಎಸ್. ಬಡವಡಗಿ, ಎಂ.ಸಿ. ಹುಕ್ಕೇರಿ, ರಾಘವೇಂದ್ರ ಪುರೋಹಿತ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ