ರಾಜ್ಯದ 224 ಕ್ಷೇತ್ರಗಳು ಬಿಜೆಪಿಗೆ ಸವಾಲು: Nalin Kumar Kateel
Team Udayavani, Apr 26, 2023, 11:12 AM IST
ಹುಬ್ಬಳ್ಳಿ: ರಾಜ್ಯದ 224 ಕ್ಷೇತ್ರಗಳು ಬಿಜೆಪಿಗೆ ಸವಾಲು ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಹಲವು ನಾಯಕರು ರಾಜ್ಯಕ್ಕೆ ಬರುತ್ತಿದ್ದಾರೆ ವಿನಃ ಬಿಜೆಪಿ ದುರ್ಬಲವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಈ ಭಾಗದ ಪ್ರಮುಖ ಕೇಂದ್ರ ಸ್ಥಾನವಾಗಿದೆ. ಹೀಗಾಗಿ ಹಲವು ನಾಯಕರು ಈ ಭಾಗಕ್ಕೆ ಬರುತ್ತಿದ್ದಾರೆ ವಿನಃ ಹು-ಧಾ ಕೇಂದ್ರ ಕ್ಷೇತ್ರದ ಬಗ್ಗೆ ಅಷ್ಟೊಂದು ಒತ್ತು ನೀಡಿಲ್ಲ. ಈ ಕ್ಷೇತ್ರಕ್ಕೆ ನೀಡಿದಷ್ಟು ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ನೀಡಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದು ನಾಯಕರು, ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ ಎಂದರು.
ಬಂಡಾಯಗಾರರು ಗೆದ್ದಿಲ್ಲ: ಬಿಜೆಪಿಯಿಂದ ಬಂಡಾಯ ಎದ್ದವರು ಯಾರೂ ಗೆದ್ದಿಲ್ಲ. ಜಗದೀಶ ಶೆಟ್ಟರ ಅವರ ಭವಿಷ್ಯ ಮೇ 13 ನಂತರ ಗೊತ್ತಾಗಲಿದೆ. ಅವರಿಗೆ ಪಕ್ಷ ಹಲವು ಸ್ಥಾನಗಳನ್ನು ನೀಡಿದ್ದರೂ ಪಕ್ಷ ಬಿಟ್ಟಿದ್ದಾರೆ. ಈಗಲೂ ಉನ್ನತ ಸ್ಥಾನ ನೀಡುವ ಭರವಸೆ ನೀಡಿದರೂ ತಿರಸ್ಕರಿಸಿ ಹೊರ ಹೋಗಿದ್ದಾರೆ. ಅವರಿಗೆ ಟಿಕೆಟ್ ನಿರಾಕರಿಸಿದ್ದು ಕೇಂದ್ರ ಸಂಸದೀಯ ಮಂಡಳಿ ಅವರು ಹಿಂದೆ ಕಾರ್ಯಕಾರಣಿ ಸಮಿತಿಯಲ್ಲಿದ್ದರೂ ಎಲ್ಲರಿಗೂ ಟಿಕೆಟ್ ನೀಡಿದ್ದಾರೆಯೇ ಹಾಗಾದರೆ ಕುಂದಗೋಳದ ಚಿಕ್ಕನಗೌಡರಿಗೆ ಯಾಕೆ ತಪ್ಪಿಸಿದರು ಎಂದು ಪ್ರಶ್ನಿಸಿದರು.
ಬಿ.ಎಲ್. ಸಂತೋಷ ಸೇರಿದಂತೆ ಪ್ರಮುಖ ಸ್ಥಾನದಲ್ಲಿದ್ದವರ ಮೇಲೆ ಆರೋಪಗಳು ಸಾಮನ್ಯ. ಇದೀಗ ಶೆಟ್ಟರ ಪಕ್ಷ ಬಿಟ್ಟು ಹೊರ ಹೋಗಿದ್ದಾರೆ ಹೀಗಾಗಿ ಅವರು ಮಾತನಾಡುತ್ತಿದ್ದಾರೆ ಎಂದರು.
ಈಶ್ವರಪ್ಪ ಹಾಗೂ ಕೆಲ ನಾಯಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ತಮ್ಮ ಆಡಿಯೋ ವೈರಲ್ ಆಗಿರುವ ಬಗ್ಗೆ ಮಾತನಾಡಿದ ಅವರು, ಅದು ನ್ಯಾಯಾಲಯದಲ್ಲಿದೆ ಈ ಬಗ್ಗೆ ಮಾತನಾಡುವುದಿಲ್ಲ ತನಿಖೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದು ಜಾರಿಕೊಂಡರು.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದೆ. ಆ ಪಕ್ಷ ಒಂದು ಜಿಲ್ಲೆಗೆ ಸೀಮಿತವಾಗಲಿದೆ. ಕಾಂಗ್ರೆಸ್ 80 ಸೀಟುಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆಯಷ್ಟೆ. ಹೊಸಬರಿಗೆ ಅವಕಾಶ, ಹಿರಿಯರನ್ನು ಕೈ ಬಿಡುವ ಹೊಸ ಪ್ರಯೋಗ ಲೋಕಸಭಾ ಚುನಾವಣೆಗೆ ಅನ್ವಯವಾಗುತ್ತಾ ಎನ್ನುವ ಪ್ರಶ್ನೆಗೆ ಮುಂದೆ ಕಾದು ನೋಡಿ ಎಂದು ಪ್ರತಿಕ್ರಿಯೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ