ಸೋಂಕಿತರ ಚಿಕಿತ್ಸೆಗೆ 265 ರೈಲು ಬೋಗಿ

ಬೆಂಗಳೂರು-73, ಮೈಸೂರು-95, ಹುಬ್ಬಳ್ಳಿಯಲ್ಲಿ 90 ಐಸೋಲೇಷನ್‌ ಬೋಗಿ ಸಿದ್ಧ

Team Udayavani, May 10, 2021, 10:19 AM IST

hjghyutyuty

ವರದಿ : ಶಿವಶಂಕರ ಕಂಠಿ

ಹುಬ್ಬಳ್ಳಿ: ಕೋವಿಡ್‌-19ರ 2ನೇ ಅಲೆ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ಸೋಂಕಿತರಿಗೆ ಚಿಕಿತ್ಸೆಗೆ ಅನುಕೂಲವಾಗುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ವಲಯ ಸಿದ್ಧವಾಗಿದ್ದು, ಅದು ತನ್ನ ಮೂರು ವಿಭಾಗಗಳಲ್ಲಿ 265 ಐಸೋಲೇಷನ್‌ ಬೋಗಿಗಳನ್ನು ವಿನ್ಯಾಸಗೊಳಿಸಿದೆ.

ನೈರುತ್ಯ ರೈಲ್ವೆ ವಲಯದ ಬೆಂಗಳೂರು ವಿಭಾಗದಲ್ಲಿ 73, ಮೈಸೂರು 95, ಹುಬ್ಬಳ್ಳಿ ವಿಭಾಗದಲ್ಲಿ 90 ಸೇರಿ ಒಟ್ಟು 265 ಐಷೋಲೇಷನ್‌ ಬೋಗಿಗಳನ್ನು ವಿನ್ಯಾಸ ಪಡಿಸಿದೆ. ಪ್ರತಿ ಬೋಗಿಯಲ್ಲಿ ಒಬ್ಬರಿಗಾಗಿ ಎಂಟು ಬೆಡ್‌, ಇಬ್ಬರಿಗಾಗಿ 16 ಬೆಡ್‌ಗಳನ್ನು ಸಿದ್ಧಪಡಿಸಲಾಗಿದೆ. ಮನೆಯಲ್ಲಿ ಐಸೋಲೇಷನ್‌ ಪಡೆಯಲು ಸಾಧ್ಯವಾಗದಿದ್ದರೆ ಅಂಥವರು ಈ ಬೋಗಿಗಳಲ್ಲಿ ಇರಬಹುದಾಗಿದೆ.

ವಲಯವು ಕೋವಿಡ್‌-19ರ 1ನೇ ಅಲೆಯ ಸಂದರ್ಭದಲ್ಲೂ ಸೋಂಕಿತರಿಗಾಗಿ 320 ಬೋಗಿಗಳನ್ನು ಐಷೋಲೇಷನ್‌ ಆಗಿ ಪರಿವರ್ತಿಸಿತ್ತು. ಆದರೆ ರಾಜ್ಯ ಸರಕಾರದಿಂದ ಇವುಗಳಿಗೆ ಬೇಡಿಕೆ ಬಾರದ ಹಿನ್ನೆಲೆಯಲ್ಲಿ ಕೇವಲ 62 ಬೋಗಿಗಳನ್ನು ಇಲಾಖೆಯ ಉದ್ದೇಶಗಳಿಗಾಗಿ ಬಳಸಿಕೊಂಡಿತ್ತು. ಈಗ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಲಯವು ರಾಜ್ಯ ಸರಕಾರದಿಂದ ಬೇಡಿಕೆ ಬರಹುದೆಂಬ ನಿರೀಕ್ಷೆಯಲ್ಲಿ ಮುಂಜಾಗ್ರತೆಯಾಗಿ ಕಳೆದ ವರ್ಷ ಬಳಸಿಕೊಳ್ಳದಿರುವ 258 ಬೋಗಿಗಳನ್ನು ಮತ್ತೆ ಕೋವಿಡ್‌ ಐಷೋಲೇಷನ್‌ ಆಗಿ ಪರಿವರ್ತಿಸಿ ಕೊಡಲು ಸನ್ನದ್ಧಗೊಂಡಿದೆ.

ಐಷೋಲೇಷನ್‌ ಬೋಗಿಗಳನ್ನು ಬೆಂಗಳೂರಿನ ಕೆಎಸ್‌ಆರ್‌, ಯಶವಂತಪುರ, ಮೈಸೂರು, ಹುಬ್ಬಳ್ಳಿಯ ಕಾರ್ಯಾಗಾರಗಳಲ್ಲಿ ಸಿದ್ಧಪಡಿಸಿ ಇಡಲಾಗಿದೆ. ಸರಕಾರ ಇವುಗಳ ಬಳಕೆಗೆ ಕೋರಿದ ಕೂಡಲೇ ನೀಡಲು ಸಿದ್ಧವಾಗಿದೆ. ಕೋವಿಡ್‌ ಲಕ್ಷಣಗಳನ್ನು ಹೊಂದಿರದ ಹಾಗೂ ಯಾರಿಗೆ ಮನೆಯಲ್ಲಿ ಐಷೋಲೇಷನ್‌ ಮಾಡಿ ಕೊಳ್ಳಲು ಸೌಲಭ್ಯ ಇರುವುದಿಲ್ಲವೋ ಅಂಥವರಿಗೆ ಈ ಐಷೋಲೇಷನ್‌ ಬೋಗಿಗಳು ಉಪಯುಕ್ತವಾಗಿವೆ.

ಇಲ್ಲಿ ಕೋವಿಡ್‌-19ರ ಲಕ್ಷಣಗಳಿಲ್ಲದವರು ಪ್ರತ್ಯೇಕ ಆರೈಕೆ ಹಾಗೂ ಸಮಾಧಾನಕರ ರೀತಿ ವಿಶ್ರಾಂತಿ ಪಡೆಯಬಹುದಾಗಿದೆ. ರಾಜ್ಯ ಸರಕಾರ ಈಗಾಗಲೇ ಜಿಲ್ಲಾಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಕೇಂದ್ರಗಳನ್ನು ನಿರ್ಮಿಸಿದೆ. ಕಿಮ್ಸ್‌ ಆಸ್ಪತ್ರೆ ಸೇರಿದಂತೆ ಇನ್ನುಳಿದೆಡೆ ಬೆಡ್‌ಗಳ ಸಂಖ್ಯೆಯನ್ನು ಕಳೆದ ಬಾರಿಗಿಂತ ದುಪ್ಪಟ್ಟು ಮಾಡಿದೆ. ಈ ಬಾರಿಯಾದರೂ ನೈಋತ್ಯ ರೈಲ್ವೆ ವಲಯವು ಸಿದ್ಧಪಡಿಸಿದ ಐಸೋಲೇಷನ್‌ ಬೋಗಿಗಳನ್ನು ಬಳಕೆ ಮಾಡಿಕೊಳ್ಳುತ್ತದೆಯೋ ಇಲ್ಲವೋ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.