ಶ್ರಮಿಕ ರೈಲಿನಿಂದ 3.32 ಲಕ್ಷ ವಲಸಿಗರು ಪ್ರಯಾಣ
Team Udayavani, Jun 14, 2020, 6:17 AM IST
ಹುಬ್ಬಳ್ಳಿ: ಲಾಕ್ಡೌನ್ನಿಂದ ಸಿಲುಕೊಂಡಿದ್ದವರನ್ನು 229 ಶ್ರಮಿಕ ರೈಲುಗಳ ಮೂಲಕ 3.32ಲಕ್ಷ ವಲಸಿಗರನ್ನು ಅವರ ರಾಜ್ಯಗಳಿಗೆ ತಲುಪಿಸುವ ಕಾರ್ಯ ನೈರುತ್ಯ ರೈಲ್ವೆ ವಲಯದಿಂದ ನಡೆದಿದೆ.
ಶ್ರಮಿಕ ರೈಲುಗಳ ಮೂಲಕ ವಲಸಿಗರನ್ನು ಅವರ ರಾಜ್ಯಗಳಿಗೆ ತಲುಪಿಸಲು ಕೇಂದ್ರ ಸರಕಾರ ಸೂಚನೆ ಹಾಗೂ ರಾಜ್ಯ ಸರಕಾರಗಳ ಬೇಡಿಕೆ ಮೇರೆಗೆ ಮೊದಲ 13 ದಿನಗಳಲ್ಲಿ ಒಂದು ಲಕ್ಷ ಜನರನ್ನು ಅವರ ರಾಜ್ಯಗಳಿಗೆ ತಲುಪಿಸುವ ಕಾರ್ಯ ಮಾಡಲಾಯಿತು. ನಂತರ ಒಂದು ಲಕ್ಷ ಜನರನ್ನು 6 ದಿನಗಳಲ್ಲಿ ಅವರ ಸ್ಥಳಗಳಿಗೆ ಕಳುಹಿಸಲಾಯಿತು.
ಶನಿವಾರ ಕೂಡ ಒಂದು ಶ್ರಮಿಕ ರೈಲಿನ ಮೂಲಕ ಬೆಂಗಳೂರಿನಿಂದ ಗೌಹಾಟಿಗೆ ವಲಸಿಗರನ್ನು ಕಳುಹಿಸಲಾಯಿತು. ಇಲ್ಲಿಯವರೆಗೆ 17 ರಾಜ್ಯಗಳಿಗೆ ಶ್ರಮಿಕ ರೈಲುಗಳು ಸಂಚಾರ ಮಾಡಿವೆ. 1.07 ಲಕ್ಷ ಜನರು 73 ರೈಲುಗಳ ಮೂಲಕ ಬಿಹಾರ, 51 ರೈಲುಗಳ ಮೂಲಕ 73,498 ಜನರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ. ಪಶ್ಚಿಮ ಬಂಗಾಳ, ಜಾರ್ಖಂಡ್, ಓರಿಸ್ಸಾ, ಅಸ್ಸಾಂ, ರಾಜಸ್ಥಾನ, ಮಧ್ಯಪ್ರದೇಶ, ತ್ರಿಪುರಾ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಛತ್ತಿಸಗಡ, ಹಿಮಾಚಲಪ್ರದೇಶ, ಕೇರಳ, ಮಿಜೋರಾಂ, ನಾಗಾಲ್ಯಾಂಡ್ ರಾಜ್ಯಗಳಿಗೆ ಹುಬ್ಬಳ್ಳಿ, ಬೆಂಗಳೂರು, ಮೈಸೂರ, ಹಾಸನ, ಅಶೋಕಪುರಂ, ಹೊಸಪೇಟೆ, ಬಳ್ಳಾರಿ, ಕೊಪ್ಪಳ ಸೇರಿದಂತೆ ಇನ್ನಿತರೆ ಪ್ರದೇಶಗಳಿಂದ ಸಂಚಾರ ಮಾಡಿವೆ ಎಂದು ನೈರುತ್ಯ ರೈಲ್ವೆ ವಲಯದಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…