345 ಕೋಟಿ ರೂ. ಪ್ರೀಮಿಯಂ ಗುರಿ: ರವಿಕಿರಣ

•2,11,000 ಪಾಲಸಿ ಗುರಿ•ಸದ್ಯ 48,666 ಪಾಲಿಸಿ ಹೊಂದಿದೆ•121.34 ಕೋಟಿ ಪ್ರೀಮಿಯಂ

Team Udayavani, Sep 4, 2019, 9:18 AM IST

huballi-tdy-3

ಧಾರವಾಡ: ಎಲ್ಐಸಿ ಹಿರಿಯ ವಿಭಾಗಾಧಿಕಾರಿ ಹೆಚ್.ಕೆ.ರವಿಕಿರಣ ಮಾತನಾಡಿದರು.

ಧಾರವಾಡ: ಭಾರತೀಯ ಜೀವ ವಿಮಾ ನಿಗಮದ ಧಾರವಾಡ ವಿಭಾಗದ ವತಿಯಿಂದ 2019-20ರಲ್ಲಿ 345 ಕೋಟಿ ಒಟ್ಟು ಪ್ರೀಮಿಯಂ ಗುರಿ ಹೊಂದಲಾಗಿದೆ ಎಂದು ಹಿರಿಯ ವಿಭಾಗಾಧಿಕಾರಿ ಹೆಚ್.ಕೆ.ರವಿಕಿರಣ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 2,11,000 ಪಾಲಸಿ ಗುರಿ ಇದೆ. ಸದ್ಯ ಈವರೆಗೆ ನಮ್ಮ ಸಾಧನೆ ಅನ್ವಯ ಇಲ್ಲಿಯವರೆಗೆ 48,666 ಪಾಲಿಸಿ ಹೊಂದಿದ್ದು, 121.34 ಕೋಟಿ ಪ್ರೀಮಿಯಂ ಆಗಿದೆ. ಕಳೆದ 2018-19 ನೇ ಸಾಲಿನಲ್ಲಿ ಒಟ್ಟು 1,76,021 ಪಾಲಿಕೆ ಮಾರಾಟ ಆಗಿದ್ದು, 255.99 ಕೋಟಿ ಮೊದಲ ಪ್ರೀಮಿಯಂ ಸಂಗ್ರಹಣೆ ಆಗಿದೆ. ಸಂಗ್ರಹಣೆಯಾದ ಒಟ್ಟು ಆದಾಯ 1677.06 ಕೋಟಿಯಷ್ಟಿದ್ದು, ಸಂಗ್ರಹಣೆಯಾದ ಒಟ್ಟು ಪ್ರೀಮಿಯಂ ಆದಾಯ 1570.11 ಕೋಟಿ ಇದೆ ಎಂದರು.

ಮ್ಯಾಚ್ಯುರಿಟಿ ಬೆನಿಫಿಟ್ ಪಾಲಸಿಗಳ ಸಂಖ್ಯೆ 92,624 ಇದ್ದು, 655.79 ಕೋಟಿ ಸಂದಾಯವಾದ ಹಣವಾಗಿದೆ. 188.96 ಕೋಟಿಯ 88,437 ಸರ್ವೈವಲ್ ಬೆನಿಫಿಟ್ ಪಾಲಿಸಿಗಳಿದ್ದು,7933 ಡೆತ್‌ ಕ್ಲೇಮ್‌ ಪಾಲಿಸಿಗಳ ಸಂಖ್ಯೆ ಇದೆ. ಈ ಪೈಕಿ 90.86 ಕೋಟಿ ಹಣ ಸಂದಾಯವಾಗಿದೆ. 169.70 ಕೋಟಿ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡದ ಸರ್‌ಪ್ಲಾಸ್‌ ಹಣವಾಗಿದೆ ಎಂದರು.

ಧಾರವಾಡದ ಹಣಕಾಸು ಮತ್ತು ಲೆಕ್ಕ ಪತ್ರ ವಿಭಾಗದಿಂದ ಕಳೆದ ವರ್ಷದ ಆರ್ಥಿಕ ಲೆಕ್ಕ ಪತ್ರಗಳನ್ನು ಉನ್ನತ ಅಧಿಕಾರಿಗಳಿಗೆ ಸಮರ್ಪಿಸುವಲ್ಲಿ ಅಖೀಲ ಭಾರತ ಮಟ್ಟದಲ್ಲಿ ಮತ್ತು ವಲಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡಿದೆ. ಇನ್ನು ಕಳೆದ ಆರ್ಥಿಕ ವರ್ಷದಲ್ಲಿ 2 ವಿಮಾ ಗ್ರಾಮ, 8 ವಿಮಾ ಶಾಖೆಗಳನ್ನು ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ ಹಾಗೂ ಕಾರವಾರ ಜಿಲ್ಲೆ ವ್ಯಾಪ್ತಿ ಹೊಂದಿರುವ ಧಾರವಾಡ ವಿಭಾಗದಲ್ಲಿ 15 ಶಾಖಾ ಕಚೇರಿಗಳು ಹಾಗೂ 17 ಉಪಗ್ರಹ ಸಂಪರ್ಕ ಶಾಖೆಗಳಿವೆ. ಗ್ರಾಹಕರ ಬೇಡಿಕೆ ಅನುಗುಣವಾಗಿ ಒಂದು ಪ್ರತ್ಯೇಕ ಮಾರುಕಟ್ಟೆ ವಿಭಾಗ ಹಾಗೂ ಗ್ರಾಹಕರ ವಲಯ ಕಚೇರಿಯನ್ನು ಹುಬ್ಬಳ್ಳಿಯಲ್ಲಿ ಆರಂಭಿಸಿದ್ದೇವೆ ಎಂದರು.

1956 ಸೆ.1ರಂದು ಎಲ್ಐಸಿ ಅಸ್ತಿತ್ವಕ್ಕೆ ಬಂದಿದ್ದು, ನಿಗಮವು 63 ವರ್ಷಗಳ ಪಾಲಸಿದಾರರ ಸಾರ್ಥಕ ಸೇವೆ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಸೆ.1ರಿಂದ ಸೆ.7ರವರೆಗೆ ವಿಮಾ ಸಪ್ತಾಹ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪಾಲಸಿಗಳನ್ನು ಮಾರಾಟ ಮಾಡಲು ಹೆಚ್ಚು ಒತ್ತು ಕೊಡಲಾಗಿದ್ದು, ಕೆಲ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಂಡು ಪ್ರತ್ಯೇಕ ತರಬೇತಿ ನೀಡಲಾಗುತ್ತಿದೆ. ಪ್ರತಿನಿಧಿಗಳು ನಮ್ಮ ಸಂಸ್ಥೆಯ ಜೀವನಾಡಿ ಇದ್ದಂತೆ. ಅವರ ಮಾರಾಟ ಕೌಶಲ್ಯ ವೃದ್ಧಿಗೊಳಿಸುವ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಎಲ್ಐಸಿಯು ಸಾಮಾಜಿಕ ಕ್ಷೇತ್ರದಲ್ಲಿ 2.61ಲಕ್ಷ ಕೋಟಿ, ಕೇಂದ್ರ ಸರ್ಕಾರದ ಸೆಕ್ಯೂರಿಟಿಗಳಲ್ಲಿ 10.34 ಲಕ್ಷ ಕೋಟಿ, ಗೃಹ ನಿರ್ಮಾಣ ಸಂಸ್ಥೆಗಳಲ್ಲಿ 54,285 ಕೋಟಿ, ಇಂಧನ ಮತ್ತು ವಿದ್ಯುಚ್ಛಕ್ತಿ ಕ್ಷೇತ್ರಗಳಲ್ಲಿ 1.8 ಲಕ್ಷ ಕೋಟಿ ಹೀಗೆ ನೀರಾವರಿ, ರಸ್ತೆ ಅಂತಹ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಮಾಡಿದೆ. ಮೊದಲಿನಂತೆ ಗ್ರಾಹಕರು ಪ್ರೀಮಿಯಂ ಸಂದಾಯ ಮಾಡಲು ಕಚೇರಿಗೆ ಬರುವಂತಿಲ್ಲ. ಈ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ದೇಶಾದ್ಯಂತ 6 ಸಾವಿರ ಗ್ರಾಹಕ ಸೇವಾ ಕೇಂದ್ರ ಸ್ಥಾಪಿಸಲಾಗಿದೆ. ಗ್ರಾಹಕರ ವ್ಯಾಜ್ಯ ನಿರ್ವಹಣಾ ಸಮಿತಿಗಳಿವೆ. ಗ್ರಾಹಕ ಕುಂದುಕೊರತೆ ನಿವಾರಣೆ ಸಮಿತಿ ಇದೆ ಎಂದರು. ಸಂತೋಷ ಭಟ್, ಆರ್‌.ವಿ.ಮುಧೋಳ ಸೇರಿದಂತೆ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.