37.10 ಕೋಟಿ ಜಲಧನ ಬಳಕೆಗೆ ಅನುಮೋದನೆ
Team Udayavani, May 31, 2019, 1:26 PM IST
ಧಾರವಾಡ: ಪ್ರಸಕ್ತ ಸಾಲಿನ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಸರ್ಕಾರವು ಜಿಲ್ಲೆಗೆ ನಿಗದಿಪಡಿಸಿರುವ 37.10 ಕೋಟಿ ರೂ. ಅನುದಾನ ಬಳಕೆಗೆ ಜಿಪಂದಲ್ಲಿ ಗುರುವಾರ ಜರುಗಿದ ಸಭೆಯಲ್ಲಿ ಅನುಮೋದನೆ ದೊರೆಯಿತು.
ಕ್ರಿಯಾ ಯೋಜನೆ ತಯಾರಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಮಾತನಾಡಿ, ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರತಿ ವ್ಯಕ್ತಿಗೆ ಕನಿಷ್ಠ 55 ಲೀಟರ್ ನೀರು ಪ್ರತಿನಿತ್ಯ ಬೇಕಾಗುತ್ತದೆ. ಈಗಾಗಲೇ ಈ ಪ್ರಮಾಣದಲ್ಲಿ ನೀರು ಸರಬರಾಜು ಆಗುತ್ತಿರುವ ಗ್ರಾಮಗಳನ್ನು ಹೊರತುಪಡಿಸಿ ತೀವ್ರ ಸಂಕಷ್ಟದಲ್ಲಿರುವ ಜನವಸತಿಗಳನ್ನು ಗುರುತಿಸಿ, ವಿವರಗಳನ್ನು ಜೂ. 1ರೊಳಗೆ ಎಲ್ಲಾ ಸದಸ್ಯರು ಒದಗಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ಸಂಶಿ ಹಾಗೂ ಕುಂದಗೋಳ ಭಾಗದ ಗ್ರಾಮಗಳಲ್ಲಿ, ನವಲಗುಂದ ತಾಲೂಕು ಬೆನ್ನೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇವುಗಳ ನಿರ್ವಹಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 458 ಶುದ್ಧ ಕುಡಿಯುವ ನೀರು ಘಟಕಗಳು ಇವೆ. ಅವುಗಳಲ್ಲಿ 398 ಕಾರ್ಯ ನಿರ್ವಹಿಸುತ್ತಿದ್ದು, 60 ದುರಸ್ತಿಯಲ್ಲಿವೆ. ಆರ್ಒ ಘಟಕಗಳ ನಿರ್ವಹಣೆ ಗ್ರಾಪಂಗಳ ವ್ಯಾಪ್ತಿಗೆ ಬರುತ್ತದೆ. ಗ್ರಾಪಂಗಳ ವ್ಯಾಪ್ತಿಯಲ್ಲಿ ನುರಿತ ಕುಶಲಕರ್ಮಿಗಳು ಲಭ್ಯವಾಗದೇ ಎಲ್ಲೆಡೆ ಸಮಸ್ಯೆ ತಲೆದೋರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ನಿರ್ವಹಣೆ ಹೊಣೆಯನ್ನು ಮಹಾನಗರ ಪಾಲಿಕೆಗಳ ಮಾದರಿಯಲ್ಲಿ ಖಾಸಗಿ ಏಜೆನ್ಸಿಗಳಿಗೆ ವಹಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ವಿ. ಮುನವಳ್ಳಿ ಮಾತನಾಡಿ, 2019-20ನೇ ಸಾಲಿನಲ್ಲಿ ಜಿಲ್ಲೆಗೆ ರಾಷ್ಟ್ರೀಯ ಗಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದಡಿ 32.35 ಕೋಟಿ ಹಾಗೂ ಡಾ| ಡಿ.ಎಂ. ನಂಜುಂಡಪ್ಪ ವರದಿ ಆಧರಿಸಿ ರೂಪಿಸಲಾಗಿರುವ ವಿಶೇಷ ಅಭಿವೃದ್ಧಿ ಯೋಜನೆಯಡಿ 4.75 ಕೋಟಿ ರೂ. ಸೇರಿ ಒಟ್ಟು 37.10 ಕೋಟಿ ರೂ. ಅನುದಾನವನ್ನು ಸರ್ಕಾರ ನಿಗದಿಪಡಿಸಿದೆ ಎಂದರು. ವಿವಿಧ ಕ್ಷೇತ್ರದ ಜಿಪಂ ಸದಸ್ಯರು ತಮ್ಮ ಸಲಹೆ-ಸೂಚನೆ ನೀಡಿದರು. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಚನ್ನಮ್ಮ ಶಿವನಗೌಡರ, ಕಲ್ಲಪ್ಪ ಪುಡಕಲಕಟ್ಟಿ, ನಿಂಗಪ್ಪ ಘಾಟಿನ್, ಉಪಕಾರ್ಯದರ್ಶಿ ಎ.ಎಂ. ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
MUST WATCH
ಹೊಸ ಸೇರ್ಪಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್