ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ

ಅನಧಿಕೃತ ಕಾರ್ಖಾನೆಗಳ ಸಮೀಕ್ಷೆಗೆ ಸಚಿವರ ಸೂಚನೆ ; ಹೆಚ್ಚಿನ ಪರಿಹಾರ-ಮಾಲೀಕರ ವಿರುದ್ಧ ಕ್ರಮಕ್ಕೆ ಜನಾಗ್ರಹ

Team Udayavani, Jul 25, 2022, 2:13 PM IST

9

ಹುಬ್ಬಳ್ಳಿ: ತಾರಿಹಾಳದ ಕೈಗಾರಿಕೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಕುಟುಂಬದವರಿಗೆ ಸರಕಾರದಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ತಿಳಿಸಿದರು.

ಅಗ್ನಿ ಅವಘಡ ಸಂಭವಿಸಿದ ಕಾರ್ಖಾನೆ ಹಾಗೂ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಗಳನ್ನು ರವಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಸುದ್ದಿರಾರರೊಂದಿಗೆ ಅವರು ಮಾತನಾಡಿದರು.

ಮೃತರ ಕುಟುಂಬದವರು ಪರಿಹಾರ ಜೊತೆಗೆ ಮೃತ ಪಟ್ಟವರ ಮಕ್ಕಳಿಗೂ ಮುಂದಿನ ಭವಿಷ್ಯಕ್ಕಾಗಿ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮೃತರ ಮಕ್ಕಳಿಗೆ ಮೂರು ವರ್ಷ ಅನುದಾನ ನೀಡಬಹುದು. ಆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮಕ್ಕಳನ್ನು ಬಾಲವಿಕಾಸ ಮಂದಿರಕ್ಕೆ ಕಳುಹಿಸಲು ಕುಟುಂಬದವರು ಇಚ್ಛಿಸಿದರೆ ಅವರಿಗೂ ರಕ್ಷಣೆ ನೀಡಲಾಗು ವುದು ಎಂದು ಭರವಸೆ ನೀಡಿದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಅಗ್ನಿ ದುರಂತಕ್ಕೆ ಕಾರಣವಾದ ಮೆ. ಐ.ಸಿ. ಫ್ಲೆàಮ್‌ ಸ್ಪಾರ್ಕಲ್‌ ಕ್ಯಾಂಡಲ್‌ ತಯಾರಿಕಾ ಘಟಕ ಯಾವುದೇ ಅನುಮತಿ ಪಡೆದಿರಲಿಲ್ಲ. ಒಂದು ತಿಂಗಳ ಹಿಂದಷ್ಟೆ ಆರಂಭವಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಮೂವರು ಜೀವ ಕಳೆದುಕೊಳ್ಳುವಂತಾಯಿತು. ಕಾರ್ಖಾನೆಯಲ್ಲಿ ಶನಿವಾರ ಒಟ್ಟು 14 ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಘಟನೆಯಲ್ಲಿ 8 ಜನರು ಗಾಯಗೊಂಡಿದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದಾರೆ. ಲೋಪ ಎಸಗಿದ ಅಧಿಕಾರಿಗಳ ಹಾಗೂ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪು ಎಸಗಿದವರ ಹೆಡೆಮುರಿ ಕಟ್ಟಲಾಗುವುದು ಎಂದು ಹೇಳಿದರು.

ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್‌ ಆಯುಕ್ತ ಲಾಭೂ ರಾಮ, ಎಸ್ಪಿ ಲೋಕೇಶ ಜಗಲಾಸರ್‌, ಹುಬ್ಬಳ್ಳಿ ನಗರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ಮೊದಲಾದವರಿದ್ದರು.

ಬಡವರಿಗೊಂದು ಉಳ್ಳವರಿಗೊಂದು ನ್ಯಾಯವೇ?

ಬಡವರು ಚಹಾದ ಡಬ್ಟಾ ಅಂಗಡಿ ಮಾಡ ಬೇಕೆಂದರೂ ಪರವಾನಗಿ ಪಡೆಯ ಬೇಕೆನ್ನುತ್ತಾರೆ. ಆದರೆ, ಸಿಡ್ಡಿಮದ್ದು ತಯಾರಿಸುವ ಕಾರ್ಖಾನೆ ಪರವಾನಗಿ ಇಲ್ಲದೆ ನಡೆಸಲು ಹೇಗೆ ಅವಕಾಶ ಮಾಡಿಕೊಟ್ಟರು. ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಇನ್ನೊಂದು ನ್ಯಾಯವೇ? ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾರ್ಖಾನೆ ಮಾಲೀಕನ ವಿರುದ್ಧ ಸೂಕ್ತ ಕ್ರಮಗೊಳ್ಳಬೇಕೆಂದು ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಅವರಿಗೆ ಒತ್ತಾಯಿಸಿದರು.

ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಹಾಗೂ ಗಾಯಾಳುಗಳನ್ನು ಭೇಟಿ ಮಾಡಲು ಸಚಿವರು ರವಿವಾರ ಕಿಮ್ಸ್‌ ಆಸ್ಪತ್ರೆಗೆ ಭೇಟಿಕೊಟ್ಟಾಗ ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಹಾಗೂ ಕಾರ್ಖಾನೆ ಮಾಲಿಕನ ನಿರ್ಲಕ್ಷéದಿಂದಾಗಿ ಅಮಾಯಕರು ಜೀವ ಕಳೆದುಕೊಳ್ಳುವಂತಾಗಿದೆ. ತಂದೆಯ ಮುಖವನ್ನೇ ನೋಡದ ಮಗುವಿನ ಗತಿ ಏನು? ದಿನದ ದುಡಿಮೆಯಿಂದಲೇ ಮನೆ ನಡೆಸುತ್ತಿದ್ದ ಮಹಿಳೆಯರು ಜೀವ ತೆತ್ತಿದ್ದಾರೆ. ಅವರಿಗೆ ಸರಕಾರ ಕೊಡುವ 5 ಲಕ್ಷ ರೂ. ಪರಿಹಾರ ಏತಕ್ಕೂ ಸಾಲದು. ಕನಿಷ್ಟ 15 ಲಕ್ಷ ರೂ.ವನ್ನಾದರೂ ಕೊಡಿ. ಕಾರ್ಖಾನೆಯ ಮಾಲೀಕರಿಂದಲೂ ಪರಿಹಾರ ಕೊಡಿಸಿ. ಅಂದಾಗ ಅವರಿಗೂ ಜವಾಬ್ದಾರಿ ಅರಿವಾಗುತ್ತದೆ ಎಂದು ಆಗ್ರಹಿಸಿದರು. ಸಚಿವರು ತಪ್ಪಿತಸ್ಥರ ಮೇಲೆ ಕ್ರಮದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ತಾರಿಹಾಳದಲ್ಲಿ ಮುಖ್ಯರಸ್ತೆ ತಡೆದು ನಡೆಸಲುದ್ದೇಶಿಸಿದ್ದ ಪ್ರತಿಭಟನೆ ನಿರ್ಧಾರದಿಂದ ಹಿಂದೆ ಸರಿದರು.

ತಂದೆ ಮುಖವನ್ನೇ ನೋಡದ ಮಗು

ಅಗ್ನಿ ದುರಂತದಲ್ಲಿ ಮೃತಪಟ್ಟ ಮಾಲೇಶ ಹದಣ್ಣನವರ ಅವರ ಮಗು ಈಗ ತಾನೇ 5 ತಿಂಗಳದ್ದಾಗಿದೆ. ಅದು ತಂದೆಯ ಮುಖವನ್ನೇ ನೋಡಿಲ್ಲ. ಮಗುವಿನ ಮುಂದಿನ ಜೀವನ, ಭವಿಷ್ಯ ಹೇಗೆ? ಸರಕಾರ 5 ಲಕ್ಷ ರೂ. ಪರಿಹಾರ ಕೊಟ್ಟರೆ ಏತಕ್ಕೆ ಸಾಲುತ್ತದೆ. ಸರಕಾರ ಮಗುವಿಗೆ ಉಚಿತವಾಗಿ ಶಿಕ್ಷಣ ಒದಗಿಸುವ ವ್ಯವಸ್ಥೆ ಮಾಡಬೇಕು. ಅವರು ಜೀವನ ಸಾಗಿಸಲು ಹೆಚ್ಚಿನ ಪರಿಹಾರ ನೀಡಬೇಕೆಂದು ಮೃತ ಮಾಲೇಶರ ಕುಟುಂಬಸ್ಥರು ಸಚಿವರಲ್ಲಿ ಆಗ್ರಹಿಸಿದರು.

ಜಿಲ್ಲೆಯ 14 ವಲಯಗಳಲ್ಲಿರುವ ಕೈಗಾರಿಕಾ ಪ್ರದೇಶಗಳಲ್ಲಿ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳನ್ನು ತಕ್ಷಣ ಪರಿಶೀಲನೆ ನಡೆಸಬೇಕು. ಕಾನೂನುಬಾಹಿರ ಕೈಗಾರಿಕೆಗೆ ಅವಕಾಶ ನೀಡಬಾರದು. ಅನಧಿಕೃತ ಕಾರ್ಖಾನೆಗಳಿದ್ದರೆ ಕೂಡಲೇ ಅಂಥವುಗಳ ಮೇಲೆ ಕಾನೂನು ಕ್ರಮಕೈಗೊಳ್ಳಲು ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಘಟನೆಗೆ ಸಂಬಂಧಿಸಿ ಇದುವರೆಗೂ ಯಾರನ್ನು ಬಂಧಿಸಿಲ್ಲ. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ಕೈಗಾರಿಕೆಯ ಮಾಲೀಕ ಮುಂಬಯಿಯಲ್ಲಿದ್ದು, ಅವರನ್ನು ಕರೆತರಲು ಪೊಲೀಸ್‌ ತಂಡ ತೆರಳಿದೆ. –ಹಾಲಪ್ಪ ಆಚಾರ, ಜಿಲ್ಲಾ ಉಸ್ತುವಾರಿ ಸಚಿವ

ಅಗ್ನಿದುರಂತದಲ್ಲಿ ಜೀವ ಕಳೆದುಕೊಂಡ ವಿಜಯಲಕ್ಷ್ಮೀ ಯಚ್ಚಲಗಾರ ಕಾರ್ಖಾನೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಕೆಲಸ ಮಾಡುತ್ತಿದ್ದರು. ಇವರು ದುಡಿದರೆ ಜೀವನ. ಗದುಗಿನಲ್ಲಿ ಜೀವನ ಸಾಗದ್ದಕ್ಕೆ ತಾರಿಹಾಳಕ್ಕೆ ಬಂದಿದ್ದರು. ಪತಿ ತಾರಿಹಾಳದ ಕಾರ್ಖಾನೆಯೊಂದರಲ್ಲಿ ವಾಚ್‌ ಮನ್‌ ಆಗಿದ್ದು, 10 ಮತ್ತು 8 ವರ್ಷ ವಯಸ್ಸಿನ ಹೆಣ್ಣು ಮಕ್ಕಳಿದ್ದಾರೆ. ಘಟನೆಯಿಂದ ಅವರಿಗೆ ಏನು ತೋಚದಂತಾಗಿದೆ. ಉಳಿದವರ ಜೀವನ ಸಾಗಿಸಲು ಸರಕಾರ ಮೃತರ ಕುಟುಂಬಕ್ಕೆ 10-15 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವ ವ್ಯವಸ್ಥೆ ಮಾಡಬೇಕು. –ಪ್ರಕಾಶ ಹೂಳಿಕೇರಿ, ಗರಗ, ಮೃತ ವಿಜಯಲಕ್ಷ್ಮೀ ಸಂಬಂಧಿ

 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.