ಯುವಕರಿಗೆ ಶೇ.50 ಟಿಕೆಟ್‌


Team Udayavani, Mar 9, 2020, 11:40 AM IST

ಯುವಕರಿಗೆ ಶೇ.50 ಟಿಕೆಟ್‌

ಹುಬ್ಬಳ್ಳಿ: ಜಾತ್ಯತೀತ ಜನತಾದಳ ಮುಂದಿನ ಎಲ್ಲ ಚುನಾವಣೆಗಳಲ್ಲಿ ಶೇ.50 ಯುವಕರಿಗೆ ಟಿಕೇಟ್‌ ನೀಡಲು ನಿರ್ಧರಿಸಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ನಗರದ ವಾಸವಿ ಮಹಲ್‌ನಲ್ಲಿ ಆಯೋಜಿಸಿದ್ದ ಮುಂಬೈ ಕರ್ನಾಟಕದ 7 ಜಿಲ್ಲೆಗಳ ಬೆಳಗಾವಿ ವಿಭಾಗ ಮಟ್ಟದ ತರಬೇತಿ ಶಿಬಿರ ಹಾಗೂ ಕಾರ್ಯಕರ್ತರ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಪಕ್ಷ ಬೆಳೆಸುವ ನಿಟ್ಟಿನಲ್ಲಿ ಯುವಕರಿಗೆ ಆದ್ಯತೆ ನೀಡುವುದು ಅವಶ್ಯಕವಾಗಿದೆ ಎಂದರು.

ಪಕ್ಷದ ಶಕ್ತಿ ವೃದ್ಧಿಸಿಕೊಳ್ಳಲು ಕಾರ್ಯಾಗಾರ ಆಯೋಜಿಸಲಾಗಿತ್ತು. ಮುಖಂಡರು ಹಾಗೂ ಕಾರ್ಯಕರ್ತರಅಭಿಪ್ರಾಯ ಆಲಿಸಿದ ನಂತರ ಪಕ್ಷ ಮುಂಬೈ ಕರ್ನಾಟಕ ಭಾಗದಲ್ಲಿ ಮತ್ತೆ ಚೇತರಿಸಿಕೊಳ್ಳುವ ವಿಶ್ವಾಸ ಮೂಡಿದೆ. ನನ್ನ ಜೀವಿತಾವಧಿವರೆಗೂ ಪಕ್ಷ ಗಟ್ಟಿಗೊಳಿಸಲು ಶ್ರಮಿಸುತ್ತೇನೆ ಎಂದರು.

ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿ ಹೋರಾಟ ಹಮ್ಮಿಕೊಳ್ಳುವುದು ಅವಶ್ಯ. ಇದಕ್ಕೆ ನಾವೆಲ್ಲ ಮುಖಂಡರು ಬೆಂಬಲ ನೀಡುತ್ತೇವೆ. ನಾನು ಬಂದು ಹೋರಾಟದಲ್ಲಿ ಪಾಲ್ಗೊಳ್ಳುತ್ತೇನೆ. ಜನರಿಗೆ ಅನುಕೂಲವಾಗುವ ವಿಷಯಾಧಾರಿತ ಹೋರಾಟಗಳನ್ನು ಕೈಗೊಂಡರೆ ಪಕ್ಷ ಗಟ್ಟಿಗೊಳಿಸಲು ಸಾಧ್ಯವಾಗುವುದು. ಜನರಿಗೆ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ಮನವರಿಕೆ ಮಾಡಿಕೊಡಬೇಕು. #ಪ್ರಾದೇಶಿಕ ಪಕ್ಷ ಬೆಳೆಸುವುದನ್ನು ನಾವು ತಮಿಳರಿಂದ ಕಲಿಯಬೇಕು ಎಂದರು.

ನನ್ನ ಬಗ್ಗೆ ನಿರಂತರ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ನಾನು ಉತ್ತರ ಕರ್ನಾಟಕ ವಿರೋಧಿ ಎಂದೇ ಕೆಲವರು ಆರೋಪಿಸುತ್ತಾರೆ. ನಾನು ಉತ್ತರ ಕರ್ನಾಟಕಕ್ಕೆ ನೀಡಿದ ಕೊಡುಗೆಯನ್ನು ಕಾರ್ಯಕರ್ತರು ತಿಳಿದುಕೊಂಡು ಅದನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು. ವಿಧಾನ ಪರಿಷತ್‌ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶಿವಶಂಕರ ಕಲ್ಲೂರ ಅವರನ್ನು ಪಕ್ಷದ ವತಿಯಿಂದ ಕಣಕ್ಕಿಳಿಸುತ್ತಿದ್ದು, ಅವರನ್ನು ಗೆಲ್ಲಿಸಲು ಎಲ್ಲ ಮುಖಂಡರು ಶಕ್ತಿಮೀರಿ ಪ್ರಯತ್ನಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ನಾನು ರಾಜಕೀಯದಲ್ಲಿ ಉಳಿಯಲು ಪಕ್ಷದ ವರಿಷ್ಠರಾದ ಎಚ್‌.ಡಿ.ದೇವೇಗೌಡ ಅವರೇ ಕಾರಣ. ನಾನು ಕಳೆದ 40 ವರ್ಷಗಳಿಂದ ವಿಧಾನ ಪರಿಷತ್‌ ಸದಸ್ಯನಾಗಿದ್ದೇನೆ. 16 ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಸದ್ಯದ ರಾಜಕೀಯ ನನಗೆ ಬೇಸರ ಮೂಡಿಸಿದೆ. ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯಬಾರದೆನಿಸುತ್ತದೆ. ಕೆಲ ದಿನಗಳಿಂದ ನಾನು ನಿರ್ಲಿಪ್ತನಾಗಿದ್ದೆ. ಆದರೆ 86ರ ಹರೆಯದಲ್ಲಿಯೂ ದೇವೇಗೌಡರು ಉತ್ಸಾಹದಿಂದ ಪಕ್ಷ ಸಂಘಟಿಸುವುದನ್ನು ನೋಡಿದರೆ ನನಗೆ ಸ್ಫೂರ್ತಿ ಬರುತ್ತದೆ. ನಾನು ಮುಕ್ತವಾಗಿ ಮಾತನಾಡುತ್ತೇನೆ. ಎಚ್‌.ಡಿ.ಕುಮಾರಸ್ವಾಮಿ ಈ ಭಾಗದ ಮುಖಂಡರನ್ನು ಕಡೆಗಣಿಸಿ ಟಿಕೇಟ್‌ ನೀಡುವಾಗ ಕೆಲ ತಪ್ಪು ನಿರ್ಣಯತೆಗೆದುಕೊಂಡರು. ಅವರು ಪಕ್ಷಕ್ಕೆ ಕರೆತಂದು ಟಿಕೇಟ್‌ ಕೊಟ್ಟ ಕೆಲವರು ಕೈಕೊಟ್ಟು ಹೋದರು. ನಾನು ಹಿರಿಯ ನಾಯಕ ದೇವೇಗೌಡರ ಹುಮ್ಮಸ್ಸು ನೋಡಿ ಇಲ್ಲಿಗೆ ಬಂದಿದ್ದೇನೆ ಎಂದರು.

ನನ್ನ ವಿರುದ್ಧ ಇಲ್ಲಸಲ್ಲದ ಆರೋಪಿಸಲಾಗುತ್ತದೆ. ನಾನು 1983ರಿಂದ ಪಕ್ಷ ನಿಷ್ಠೆ ಬದಲಿಸಿಲ್ಲ. ಹೊರಟ್ಟಿ ಅವರು ಬಿಜೆಪಿ ಸೇರುತ್ತಾರೆಂದು ಕೆಲವರು ಸುದ್ದಿ ಹರಡಿಸಿದರು. ಆದರೆ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ. ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಸಚಿವನನ್ನಾಗಿ ಮಾಡಿದೆ. ನಾನು ಸಚಿವನಾಗಿದ್ದಾಗ ಒಳ್ಳೆ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದರು.

ಪಕ್ಷದ ಮುಖಂಡ ವೈಎಸ್‌ವಿ ದತ್ತಾ ಮಾತನಾಡಿ, “ಬಿಜೆಪಿ ಹಾಗೂ ಕಾಂಗ್ರೆಸ್‌ ಆಡಳಿತ ದೆಹಲಿಯಿಂದ ಆದರೆ ಜೆಡಿಎಸ್‌ ಆಡಳಿತ ಕರ್ನಾಟಕದಿಂದಲೇ’ ಎಂಬ ಸಂದೇಶ ಜನರಿಗೆ ತಲುಪಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ. ಸಿದ್ದರಾಮಯ್ಯ ಅವರು ಏನೇ ನಿರ್ಧಾರ ತಗೆದುಕೊಳ್ಳಲು ಸೋನಿಯಾಗಾಂಧಿ ಅನುಮತಿ ಬೇಕು. ಅದೇ ರೀತಿ ಜಗದೀಶ ಶೆಟ್ಟರ ಯಾವುದೇ ನಿರ್ಣಯ ಕೈಗೊಳ್ಳಲು ಮೋದಿ ಅಮಿತ್‌-ಶಾ ಅನುಮತಿ ಬೇಕು. ಆದರೆ ಜೆಡಿಎಸ್‌ ಹೈಕಮಾಂಡ್‌ ಕರ್ನಾಟಕದಲ್ಲೇ ಇದೆ ಎಂದರು.

ಮಾಜಿ ಶಾಸಕ ಎನ್‌.ಎಚ್‌.ಕೋನರಡ್ಡಿ ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಶಾಸಕ ಎಂ.ಎಸ್‌.ಅಕ್ಕಿ, ಶಿವಾನಂದ ಅಂಬಡಟ್ಟಿ, ಗುರುರಾಜ ಹುಣಶಿಮರದ, ರಾಜಣ್ಣ ಕೊರವಿ, ಬಿ.ಬಿ.ಗಂಗಾಧರಮಠ, ಶಿವಶಂಕರ ಕಲ್ಲೂರ ವೇದಿಕೆ ಮೇಲಿದ್ದರು.

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.