ಪ್ರವಾಹದಿಂದ ಹದಗೆಟ್ಟ ರಸ್ತೆ ದುರಸ್ತಿಗೆ 500 ಕೋಟಿ ರೂ
Team Udayavani, Aug 31, 2019, 10:35 AM IST
ಹುಬ್ಬಳ್ಳಿ: ಪ್ರವಾಹ ಹಾಗು ಮಳೆ ಯಿಂದ ಹದಗೆಟ್ಟ ರಸ್ತೆಗಳ ದುರಸ್ತಿಗೆ 500 ಕೋಟಿ ರೂಪಾಯಿ ಮೀಸಲಾಗಿದೆ ಎಂದು ಡಿಸಿಎಂ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ವಿಮಾನ ನಿಲ್ದಾಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕೈಗೊಳ್ಳಲಾಗುವುದು. ಸಂಪರ್ಕ ರಸ್ತೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.
ಸೆ.7ರಂದು ರಾಜ್ಯಕ್ಕೆ ಪ್ರಧಾನಿ ಆಗಮಿಸಲಿದ್ದು, ನೆರೆ ಪೀಡಿತ ಪ್ರದೇಶಗಳ ಮಾಹಿತಿ ಪಡೆದಿದ್ದಾರೆ.
ಎರಡು ದಿನಗಳ ಬಾಗಲಕೋಟೆ ಪ್ರವಾಸ ನಂತರ ತಾವು ಮೈಸೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಇ.ಡಿ. ವಿಚಾರಣೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.