ವಾಯವ್ಯ ಸಾರಿಗೆಗೆ 66 ಕೋಟಿ ನಷ್ಟ

 ಗಾಯದ ಮೇಲೆ ಕೊರೊನಾ ಬರೆ!  ­ಡೀಸೆಲ್‌-ಬಿಡಿಭಾಗಕ್ಕೂ ಸಾಲದು ಆದಾಯ

Team Udayavani, Apr 29, 2021, 5:35 PM IST

yutyu

ವರದಿ : ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ನೌಕರರು ನಡೆಸಿದ ಮುಷ್ಕರದಿಂದಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 14 ದಿನಗಳಲ್ಲಿ 66.03 ಕೋಟಿ ರೂ. ಸಾರಿಗೆ ಆದಾಯ ಖೋತಾ ಆಗಿದ್ದು, ಮುಷ್ಕರ ಮುಗಿದು ಸಹಜ ಸ್ಥಿತಿಗೆ ಬರಲಿದೆ ಎನ್ನುವುದರೊಳಗೆ ಕೊರೊನಾ ಎರಡನೇ ಅಲೆ, ಕರ್ಫ್ಯೂ ನಷ್ಟದ ಪ್ರಮಾಣ ಹೆಚ್ಚುವಂತೆ ಮಾಡಿದೆ.

ಆರ್ಥಿಕವಾಗಿ ಸಂಪೂರ್ಣ ಕುಸಿದಿರುವ ವಾಯವ್ಯ ಸಾರಿಗೆ ಸಂಸ್ಥೆ ಕಳೆದ ವರ್ಷದ ಲಾಕ್‌ಡೌನ್‌ ಪರಿಣಾಮ ಚೇತರಿಸಿಕೊಳ್ಳದ ಪರಿಸ್ಥಿತಿಯಲ್ಲಿದೆ. ಹೀಗಿರುವಾಗ ಸಾರಿಗೆ ನೌಕರರು ಏ.7ರಿಂದ 20ರವರೆಗೆ ನಡೆಸಿದ 14 ದಿನಗಳ ಮುಷ್ಕರದಿಂದಾಗಿ 66.03 ಕೋಟಿ ರೂ. ಸಾರಿಗೆ ಆದಾಯ ನಷ್ಟವಾಗಿದೆ. ಸಂಸ್ಥೆಯ 3380 ಬಸ್‌ ಗಳ ಕಾರ್ಯಾಚರಣೆಯಿಂದ ಪ್ರತಿನಿತ್ಯ 4.5-4.75 ಕೋಟಿ ರೂ. ಸಾರಿಗೆ ಆದಾಯವಿದೆ. ಮುಷ್ಕರವೇನೋ ಮುಗಿಯಿತು. ಮದುವೆ, ಸಭೆ ಸಮಾರಂಭಗಳ ಸೀಸನ್‌ ಇರುವುದರಿಂದ ಒಂದಿಷ್ಟು ಹೆಚ್ಚುವರಿ ಸಾರಿಗೆ ಆದಾಯ ನಿರೀಕ್ಷೆಗೆ ಕೊರೊನಾ ಎರಡನೇ ಅಲೆ ತಣ್ಣೀರು ಎರಚಿದೆ.

ಮುಷ್ಕರದ ಮೊದಲ ದಿನ ಕೇವಲ 21 ಬಸ್‌ ಸಂಚಾರ ಮಾಡಿದ್ದವು. ಕೆಲ ವಿಭಾಗಗಳಲ್ಲಿ ಒಂದು ಬಸ್‌ ಕೂಡ ಹೊರಬರಲಿಲ್ಲ. 2ನೇ ದಿನ 48, 3ನೇ ದಿನ 107, 4ನೇ ದಿನ 389 ಹೀಗೆ 14ನೇ ದಿನದಂದು 1539 (ಶೇ.45) ಬಸ್‌ಗಳು ಸಂಚಾರ ಮಾಡಿದ್ದವು. ಏ.20ರಂದು ಹೈಕೋರ್ಟ್‌ ಆದೇಶ ನೀಡಿದ ಪರಿಣಾಮ ಏ.21ರಂದು ಶೇ.89 ಬಸ್‌ಗಳು ಸಂಚರಿಸುವ ಮೂಲಕ ಸಾರಿಗೆ ಸೇವೆ ಸಹಜ ಸ್ಥಿತಿಗೆ ಬಂದಿತು. ಓಡಿಸಿದ್ದೇ ಹೆಚ್ಚುವರಿ ನಷ್ಟ: 14 ದಿನಗಳಲ್ಲಿ ಸಂಚಾರ ಮಾಡಿದ ಒಟ್ಟು 8458 ಬಸ್‌ ಗಳಿಂದ ಬಂದ ಸಾರಿಗೆ ಆದಾಯ 46.6 ಲಕ್ಷ ರೂ. ಮಾತ್ರ. ಸಾಮಾನ್ಯ ದಿನಗಳಲ್ಲಿ ಪ್ರತಿ ಕಿಮೀ ಕಾರ್ಯಾಚರಣೆಗೆ 41-42 ರೂ. ಖರ್ಚಾಗುತ್ತದೆ. ಆದರೆ ಮುಷ್ಕರದ ಸಂದರ್ಭದಲ್ಲಿ ಜನರೇ ಇಲ್ಲದೆ ಒಂದಿಷ್ಟು ಬಸ್‌ಗಳನ್ನು ಓಡಿಸಿದ ಪರಿಣಾಮ ಪ್ರತಿ ಕಿಮೀ ಕಾರ್ಯಾಚರಣೆಗೆ ಸುಮಾರು 115 ರೂ. ಖರ್ಚು ತಗುಲಿದೆ. ಈ ಕಾರ್ಯಚರಣೆಗಳಿಂದ ಸಂಸ್ಥೆಗೆ ಬರೋಬ್ಬರಿ 15.40 ಕೋಟಿ ರೂ. ನಷ್ಟವಾಗಿದೆ!

ಯಾರಿಗೆ ಕರ್ತವ್ಯ ನೀಡಬೇಕು?: ನೈಟ್‌ ಕರ್ಫ್ಯೂ ಹಿನ್ನೆಲೆಯಲ್ಲಿ ರಾತ್ರಿ ಪಾಳಿಯ ಬಸ್‌ಗಳು ಬಹುತೇಕ ರದ್ದಾಗಿವೆ. ಇನ್ನೂ ಹಗಲು ವೇಳೆಯಲ್ಲಿ ಪ್ರಯಾಣಿಕರ ಸಂಖ್ಯೆ ಕೂಡ ಕಡಿಮೆಯಾಗಿದೆ. ಇದರಿಂದ ನೌಕರರಿಗೆ ಕರ್ತವ್ಯ ನಿಯೋಜನೆ ಬದಲು ರಜೆ ಹಾಕಿ ಮನೆಗೆ ಹೋಗಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಏ.7ರಿಂದ 21ರವರೆಗೆ ಕರ್ತವ್ಯ ನಿರ್ವಹಿಸಿದ ಶೇ.50 ಸಿಬ್ಬಂದಿ ಹೊರತುಪಡಿಸಿ ಉಳಿದವರಿಗೆ ಮಾರ್ಚ್‌ ತಿಂಗಳ ವೇತನ ಪಾವತಿಸಿಲ್ಲ. ಇದೀಗ ಕರ್ಫ್ಯೂವಿನಿಂದಾಗಿ ಪ್ರಯಾಣಿಕರ ಕೊರತೆ. ಮೇಲಾಗಿ ಶೇ.50 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಿದೆ. ಬಸ್‌ಗಳು ಕಾರ್ಯಾಚರಣೆಯಿಂದ ನಷ್ಟದ ಪ್ರಮಾಣ ಹೆಚ್ಚಾಗಲಿದೆ. ಬರುವ ಆದಾಯ ಡೀಸೆಲ್‌, ಬಿಡಿ ಭಾಗ ಖರೀದಿಗೆ ವೆಚ್ಚಕ್ಕೇ ಸಾಕಾಗುವುದಿಲ್ಲ. ಏಪ್ರಿಲ್‌ ತಿಂಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ವೇತನ ನೀಡುವುದಾದರೂ ಹೇಗೆ ಎನ್ನುವ ಪರಿಸ್ಥಿತಿ ಬಂದೊದಗಲಿದೆ ಎನ್ನುವ ಆತಂಕವಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.