7.65 ಲಕ್ಷ ರೂ. ಉಳಿತಾಯ ಬಜೆಟ್ ಮಂಡನೆ
2022-23ರ ಸಾಲಿನ 11.88 ಕೋಟಿ ಬಜೆಟ್
Team Udayavani, Apr 1, 2022, 10:33 AM IST
ಕುಂದಗೋಳ: ಪಟ್ಟಣ ಪಂಚಾಯಿತಿಯ 2022-23ರ ಸಾಲಿನ 11,88,44000 ರೂ. ಬಜೆಟ್ ಅನ್ನು ಅಧ್ಯಕ್ಷ ಪ್ರಕಾಶ ಕೊಕಾಟೆ ಓದಿ 7.65 ಲಕ್ಷ ಉಳಿತಾಯ ಬಜೆಟ್ ಸೋಮವಾರ ಮಂಡಿಸಿದರು.
ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ನಡೆದ ಬಜೆಟ್ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಪಟ್ಟಣದ ಏಳ್ಗೆ ಹಾಗೂ ಕನಸು ಹೊತ್ತು ಜನಸೇವೆಗಾಗಿ ಅಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಸರಕಾರದ ಮುಕ್ತನಿಧಿ ಅನುದಾನ 22 ಲಕ್ಷ, 15ನೇ ಹಣಕಾಸು ಯೋಜನೆ 77 ಲಕ್ಷ, ವಿದ್ಯುತ್ಛಕ್ತಿ ಅನುದಾನ 42 ಲಕ್ಷ, ವಿಶೇಷ ಅನುದಾನ 400 ಲಕ್ಷ, ನಗರೋತ್ಥಾನ ಅನುದಾನ 425 ಲಕ್ಷ ನಿರೀಕ್ಷೆ ಇದೆ. ಅದೆ ರೀತಿ ಆಸ್ತಿ ತೆರಿಗೆಯಿಂದ 30 ಲಕ್ಷ, ನೀರು ಸರಬರಾಜು ಕರ 35 ಲಕ್ಷ, ವಾಣಿಜ್ಯ ಸಂಕೀರ್ಣ ಬಾಡಿಗೆ 5.28 ಲಕ್ಷ, ಮಾರುಕಟ್ಟೆ ಶುಲ್ಕ 5.25 ಲಕ್ಷ, ಎಸ್.ಡಬ್ಲು.ಎಮ್ 4.50 ಲಕ್ಷ, ಇತರೆ ಮೂಲದ 16.03 ಲಕ್ಷ ಹೀಗೆ ಒಟ್ಟು 101.40 ಲಕ್ಷ ಆದಾಯ ನಿರೀಕ್ಷಿಸಲಾಗಿದೆ.
ನೀರು ಸರಬರಾಜು ನಿರ್ವಹಣೆಗೆ 70 ಲಕ್ಷ, ಕಂದಾಯ ವಿಭಾಗ ನಿರ್ವಹಣೆಗೆ 22.70 ಲಕ್ಷ, ಘನ ತ್ಯಾಜ್ಯ ನಿರ್ವಹಣೆಗೆ 97.05 ಲಕ್ಷ, ರಸ್ತೆ ಚರಂಡಿ ದುರಸ್ತಿಗೆ 17.30 ಲಕ್ಷ, ಬೀದಿ ದೀಪ ನಿರ್ವಹಣೆಗೆ 23 ಲಕ್ಷ, ವಾಣಿಜ್ಯ ಮಳಿಗೆ ನಿರ್ವಹಣೆಗೆ 50 ಸಾವಿರ, ಜನಗಣತಿಗೆ 50 ಸಾವಿರ ಬಜೆಟ್ ವಿವರಣೆ ನೀಡಿ ಒಟ್ಟು 7.65 ಲಕ್ಷ ಉಳಿತಾಯ ಗುರಿ ಹೊಂದಲಾಗಿದೆ ಎಂದರು.
ಬಜೆಟ್ ಅನ್ನು ನಂತರ ಸರ್ವಾನುಮತದಿಂದ ಒಪ್ಪಿ ಅನುಮೋದನೆ ನೀಡಲಾಯಿತು.
ಪಪಂ ಸದಸ್ಯ ಮಲ್ಲಿಕಾರ್ಜುನ ಕಿರೇಸೂರ ಮಾತನಾಡಿ, ಪಟ್ಟಣದಲ್ಲಿ ಎಲ್ಲ ವಾರ್ಡ್ಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸುವುದು ಅವಶ್ಯವಿದ್ದು, ಅದರ ಬಗ್ಗೆ ಗಣನೆ ತೆಗೆದುಕೊಳ್ಳಲು ಹೇಳಿದರು. ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಾರ್ಯ ಮಾಡುತ್ತೇವೆಂದು ಪಪಂ ಮುಖ್ಯಾಧಿಕಾರಿ ನಾರಾಯಣ ಡೊಂಬರ ಹೇಳಿದರು.
ಶೌಚಾಲಯ ನಿರ್ಮಾಣದಲ್ಲಿ ಅನೇಕ ಸಮಸ್ಯೆಗಳಿದ್ದು ಫಲಾನುಭವಿಗಳಿಗೆ ಸರಿಯಾಗಿ ಹಣ ಪಾವತಿಯಾಗಿಲ್ಲ ಎಂದು ಸದಸ್ಯ ಬಸವರಾಜ ತಳವಾರ ಗಮನಕ್ಕೆ ತಂದರು. ಇದರ ಸವಿಸ್ತಾರ ಮಾಹಿತಿ ನೀಡುವುದಾಗಿ ಅಧಿಕಾರಿ ಡೊಂಬರ ಸದಸ್ಯರಿಗೆ ತಿಳಿಸಿದರು.
ಉಪಾಧ್ಯಕ್ಷ ಹನಮಂತಪ್ಪ ರಣತೂರ, ಸ್ಥಾಯಿ ಸಮಿತಿ ಅಧ್ಯಕ್ಷ ದೀಲಿಪ ಕಲಾಲ, ಸದಸ್ಯರಾದ ಶಾಮ್ ದೇಸಾಯಿ, ಮಂಜುನಾಥ ಹಿರೇಮಠ, ವಾಗೇಶ ಗಂಗಾಯಿ, ಹನಮಂತಪ್ಪ ಮೇಲಿನಮನಿ, ಪ್ರವೀಣ ಬಡ್ನಿ, ಸುನಿತಾ ಪಾಟೀಲ, ಬಸಮ್ಮ ಕುಂದಗೋಳ, ಮಲ್ಲಿಕ ಶಿರೂರ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?