75 ಕೋಟಿ ಸೂರ್ಯ ನಮಸ್ಕಾರ ಮಹಾಯಜ್ಱಕ್ಕೆ ಚಾಲನೆ
Team Udayavani, Jan 2, 2022, 8:56 PM IST
ಹುಬ್ಬಳ್ಳಿ: ಸ್ವಾತಂತ್ರ ಅಮೃತ ಮಹೋತ್ಸವ ಅಂಗವಾಗಿ 75 ಕೋಟಿ ಸೂರ್ಯ ನಮಸ್ಕಾರ ಮಹಾಯಜ್ಞ ಅಭಿಯಾನ ಉದ್ಘಾಟನಾ ಕಾರ್ಯಕ್ರಮ ಶನಿವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಹರಿದ್ವಾರದ ಪತಂಜಲಿ ಯೋಗಪೀಠ, ಗೀತಾ ಪರಿವಾರ, ಕ್ರೀಡಾ ಭಾರತಿ ನ್ಯಾಶನಲ್ ಯೋಗಾಸನ ನ್ಪೋರ್ಟ್ಸ್ ಫೆಡರೇಶನ್, ಕರ್ನಾಟಕ ಯೋಗಾಸನ ಸ್ಫೋರ್ಟ್ಸ್ ಅಸೋಸಿಯೇಶನ್, ಸ್ವಾಮಿ ವಿವೇಕಾನಂದ ಯೋಗ ಯುನಿವರ್ಸಿಟಿ ಹಾಟು#ìಲೆ°ಸ್, ಆರ್ಟ್ ಆಫ್ ಲಿವಿಂಗ್, ಕೇಂದ್ರ ಸರಕಾರದ ಆಯುಷ್ ಇಲಾಖೆ, ಶಿಕ್ಷಣ ಇಲಾಖೆ, ಕ್ರೀಡಾ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪತಂಜಲಿ ಯೋಗ ಪೀಠದ ರಾಜ್ಯ ಸಂಯೋಜಕ ಭವರಲಾಲ್ ಆರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಎಲ್ಲ ಯೋಗ ಸಂಸ್ಥೆಗಳು ಒಂದುಗೂಡಿ 75 ಕೋಟಿ ಸೂರ್ಯ ನಮಸ್ಕಾರ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದೊಂದು ವಿಶ್ವದಾಖಲೆ ಯತ್ನ ಆಗಲಿದೆ. ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಅಭಿಯಾನ ಆರಂಭಿಸಲಾಗಿದೆ. ಜ.1ರಿಂದ ಫೆ. 20ರವರೆಗೆ ಮಹಾಯಜ್ಞ ಅಭಿಯಾನ ದೇಶಾದ್ಯಂತ ನಡೆಯಲಿದ್ದು, 21 ದಿನಗಳವರೆಗೆ 13 ಸೂರ್ಯ ನಮಸ್ಕಾರಗಳನ್ನು ನಿತ್ಯ ಮಾಡುವ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದರು.
ವಿವೇಕಾನಂದ ಶಿಕ್ಷಣ ಸಂಸ್ಥೆಯ ರವೀಂದ್ರ ದಂಡಿನ್ ಮಾತನಾಡಿದರು. ಪ್ರಾಂಶುಪಾಲ ಸಂದೀಪ ಬೂದಿಹಾಳ, ಗಿರಿಜಾ ಅಂತೋನಿ, ಸರ್ವಮಂಗಲಾ ಪಾಠಕ, ವಾಮನ ಶಾನಭಾಗ, ಪೂರ್ಣಿಮಾ ಹರವಿ, ಹರ್ಷಿತ ಅಡವಿ ಪಾಲ್ಗೊಂಡಿದ್ದರು. ಸಾವಿರಾರು ವಿದ್ಯಾರ್ಥಿಗಳು, ಯೋಗಾರ್ಥಿಗಳಾಗಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು