ಕಲೆಗಳತ್ತ ಒಲವು ತೋರಿದರೆ ಏಕಾಗ್ರತೆ ವೃದ್ಧಿ

ದರ್ಬಾರ ಸಂಗೀತ ಕಲಾ ಸಂಸ್ಥೆ ವಾರ್ಷಿಕೋತ್ಸವ

Team Udayavani, May 3, 2022, 2:05 PM IST

13

ಧಾರವಾಡ: ಕಲೆ, ಸಾಹಿತ್ಯ, ರಂಗಭೂಮಿ, ಸಂಗೀತದ ಕಡೆ ಮಕ್ಕಳು ಹೆಚ್ಚು ಒಲವು ತೋರಿದರೆ ಏಕಾಗ್ರತೆಯೂ ಹೆಚ್ಚುತ್ತದೆ ಎಂದು ಪಂ| ಸೋಮನಾಥ ಮರಡೂರ ಹೇಳಿದರು.

ಆಲೂರು ವೆಂಕಟರಾವ್‌ ಸಾಂಸ್ಕೃತಿಕ ಭವನದಲ್ಲಿ ದರ್ಬಾರ ಸಂಗೀತ ಕಲಾ ಸಂಸ್ಥೆಯು ಪದ್ಮವಿಭೂಷಣ ಪಂ| ಪುಟ್ಟರಾಜ ಕವಿ ಗವಾಯಿಗಳ 109ನೇ ಜನ್ಮದಿನೋತ್ಸವ ಹಾಗೂ ಕಲಾ ಸಂಸ್ಥೆಯ 7ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಂಗೀತೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲೆಗಳು ತಲೆತಲಾಂತರಗಳಿಂದ ನಮಗೆ ಬಳುವಳಿಯಾಗಿ ಬಂದಿವೆ. ಅವುಗಳನ್ನು ಅಷ್ಟೇ ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ಹೋಗಲು ಶ್ರಮಿಸಬೇಕಾಗಿದೆ. ಅದರಲ್ಲೂ ಸಂಗೀತವನ್ನು ನಾವು ನಮ್ಮ ಸಂತೋಷಕ್ಕಾಗಿ ಶ್ರದ್ಧಾ ಭಕ್ತಿಯಿಂದ ಕಲಿಯಬೇಕು ಎಂದರು.

ಕವಿವಿ ಲಲಿತಕಲಾ ಮತ್ತು ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಶಾಂತಾರಾಮ ಹೆಗಡೆ ಮಾತನಾಡಿ, ನಮ್ಮ ಸಂಗೀತ ಪರಂಪರೆಯ ಇತಿಹಾಸವನ್ನು ಅವಲೋಕಿಸಬೇಕು. ಸಂಗೀತ ಕ್ಷೇತ್ರದಲ್ಲಿ ಗುರು-ಶಿಷ್ಯ ಪರಂಪರೆ ಅವ್ಯಾಹತವಾಗಿ ನಡೆದು ಬಂದಿದ್ದು, ಆ ಪರಂಪರೆಯ ಭಾಗವಾಗಿಯೇ ಈಗ ಸಂಗೀತೋತ್ಸವ ಜರುಗುತ್ತಿರುವುದು ಅಭಿನಂದನೀಯ ಎಂದು ಹೇಳಿದರು.

ಪಂ| ಪುಟ್ಟರಾಜ ಕವಿ ಗವಾಯಿಗಳ ಹೆಸರನ್ನು ತೆಗೆದುಕೊಂಡಾಗ ಅವರ ಕೆಲವೊಂದು ಆದರ್ಶಗಳು ಮೂರ್ತ ಸ್ವರೂಪವಾಗಿ ನಮ್ಮ ಕಣ್ಣೆದುರು ಬರುತ್ತವೆ. ಗುರುವಂದನಾ ಪರಿಪಾಲನೆ, ಶಿವಭಕ್ತಿ ಅನುಷ್ಠಾನ, ದೈವಿಕ ಭೋಗಗಳ ತ್ಯಾಗ, ಜಾತ್ಯತೀತ ಸಮಾನತೆಯ ಭಾವ ಇವೆಲ್ಲವೂ ಮೂರ್ತ ರೂಪವಾಗಿ ಕಂಡುಬರುತ್ತವೆ. ಪಂ| ಪುಟ್ಟರಾಜ ಕವಿಗವಾಯಿಗಳು ಒಬ್ಬ ಶ್ರೇಷ್ಠ ಸಂಗೀತ ಸಂತರಾಗಿ, ಶ್ರೇಷ್ಠ ಗುರುಗಳಾಗಿ, ದೀನ-ದಲಿತರಿಗೆ ದಾರಿದೀಪವಾಗಿ ಬೆಳಕನ್ನು ಕೊಟ್ಟವರಾಗಿದ್ದಾರೆ ಎಂದರು.

ಪಂ| ರಾಜಶೇಖರ ಮನಸೂರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಡಾ| ವಿಜಯಮಹಾಂತೇಶ ಪೂಜಾರ ಅವರನ್ನು ಸನ್ಮಾನಿಸಲಾಯಿತು.

ಶ್ರೀ ಕುಮಾರೇಶ್ವರ ಕಲ್ಚರಲ್‌ ಸೊಸೈಟಿ ಅಧ್ಯಕ್ಷ ಪ್ರಕಾಶ ಬಾಳಿಕಾಯಿ, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಸಿ.ವಿ. ಹಾವನೂರ, ಕಲಾವಿದರಾದ ಸಾತಲಿಂಗಪ್ಪ ಕಲ್ಲೂರ ದೇಸಾಯಿ, ಡಾ| ಶ್ರೀಧರ ಕುಲಕರ್ಣಿ, ಡಾ|ಎ.ಎಲ್‌. ದೇಸಾಯಿ, ಡಾ| ಗುರುಬಸವ ಮಹಾಮನೆ, ಅನಿಲ ಮೇತ್ರಿ, ಮಹಾದೇವ ಸರಶೆಟ್ಟಿ, ಡಾ| ವೆಂಕಟೇಶ ಮುತ್ತಣ್ಣವರ, ಸುರೇಶ ಶಿಂಗನಳ್ಳಿ, ವಿನಾಯಕ ಇನಾಂದಾರ, ಶರಣಪ್ಪ ಪೂಜಾರ, ಕಲ್ಮೇಶ ಹೂಗಾರ, ವಿನುತ ಆರ್‌., ಮಂಜುನಾಥ ಅಂಜೂಟಿ, ಬಸವರಾಜ ಶಿರೋಸಿ, ವಿ.ಆರ್‌. ಪಾಟೀಲ ಇದ್ದರು. ಎನ್‌.ಬಿ. ದ್ಯಾಪುರ ನಿರೂಪಿಸಿದರು. ಬಸವರಾಜ ಹೂಗಾರ ಸ್ವಾಗತಿಸಿದರು. ಮಲ್ಲೇಶ ಹೂಗಾರ ವಂದಿಸಿದರು.

 ಸಂಗೀತೋತ್ಸವ: ನಂತರ ಜರುಗಿದ ಸಂಗೀತೋತ್ಸವದಲ್ಲಿ ಶ್ರೀಧರ ಭಜಂತ್ರಿಯವರ ಶಹನಾಯಿ ವಾದನಕ್ಕೆ ಕಲ್ಮೇಶ ಬಣ್ಣದನೂಲಮಠ ತಬಲಾ ಸಾಥ್‌ ನೀಡಿದರು. ಕಲಬುರಗಿಯ ಬದರಿನಾಥ ಮುಡಬಿಯವರ ವಯೋಲಿನ್‌ ವಾದನಕ್ಕೆ ತಬಲಾದಲ್ಲಿ ರಾಜಕುಮಾರ ಮುಡಬಿ ಸಾಥ್‌ ನೀಡಿದರು. ಕುಮಾರ ಮರಡೂರ ಅವರ ಗಾಯನಕ್ಕೆ ತಬಲಾದಲ್ಲಿ ಶ್ರೀಧರ ಮಾಂಡ್ರೆ ಮತ್ತು ಹಾರ್ಮೋನಿಯಂದಲ್ಲಿ ವಿನೋದ ಪಾಟೀಲ ಸಾಥ್‌ ನೀಡಿದರು. ತಾನಪೂರದಲ್ಲಿ ಕೃಷ್ಣಾ ಸುತಾರ ಮತ್ತು ಮಣಿಕಂಠ ನಿರ್ವಹಿಸಿದರು. ದರ್ಬಾರ ಸಂಗೀತ ಕಲಾ ಸಂಸ್ಥೆಯ ವಿದ್ಯಾರ್ಥಿಗಳು ಗಾಯನ ಪ್ರಸ್ತುತಪಡಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.