ಸರಕಾರಿ ನೌಕರರಿಗೆ 8 ದಿನ ಯೋಗ ತರಬೇತಿ
Team Udayavani, Jun 8, 2019, 12:18 PM IST
ಹುಬ್ಬಳ್ಳಿ: ಮಿನಿವಿಧಾನಸೌಧದಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಶಶಿಧರ ಮಾಡ್ಯಾಳ ಮಾತನಾಡಿದರು.
ಹುಬ್ಬಳ್ಳಿ: ಸರಕಾರಿ ನೌಕರರಿಗೆ ಮಿನಿ ವಿಧಾನಸೌಧದಲ್ಲಿ 8 ದಿನಗಳ ಯೋಗ ತರಬೇತಿ ಶಿಬಿರ ಆಯೋಜಿಸುವುದಾಗಿ ತಹಶೀಲ್ದಾರ್ ಶಶಿಧರ ಮಾಡ್ಯಾಳ ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸರಕಾರಿ ನೌಕರರು ನಿರಂತರ ಕಚೇರಿ ಕೆಲಸದಲ್ಲಿ ಮುಳುಗಿದ್ದು, ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇದರಿಂದಾಗಿ ಅವರಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಕಚೇರಿ ಕೆಲಸದ ಒತ್ತಡದಲ್ಲಿ ಅವರ ಮಾನಸಿಕ ಸ್ವಾಸ್ಥ್ಯವೂ ಹದಗೆಡುತ್ತದೆ. ನೌಕರರಿಗಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗ ತರಬೇತಿ ಶಿಬಿರ ಆಯೋಜಿಸಲಾಗುವುದು ಎಂದರು.
ಜೂ. 10ರಿಂದ ಸಂಜೆ 5:30ರ ನಂತರ ಹುಬ್ಬಳ್ಳಿ ಮಿನಿವಿಧಾನ ಸೌಧದಲ್ಲಿ ನೌಕರರಿಗೆ ಯೋಗ ತರಬೇತಿ ನೀಡಲಾಗುವುದು. ಅತ್ಯುತ್ತಮವಾಗಿ ತರಬೇತಿ ಪಡೆದ ನೌಕರರಿಗೆ ತಾಪಂ ಹಾಗೂ ತಾಲೂಕಾಡಳಿತ ವತಿಯಿಂದ ಜೂ.21ರಂದು ಸನ್ಮಾನಿಸಲಾಗುವುದು ಎಂದು ಹೇಳಿದರು.
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಜುನಾಥ ಮಾತನಾಡಿ, ಸಂಸ್ಥೆಯಿಂದ ಹುಬ್ಬಳ್ಳಿಯಲ್ಲಿ 36 ಕೇಂದ್ರ ತೆರೆದು ಉಚಿತವಾಗಿ ಯೋಗ ಶಿಕ್ಷಣ ನೀಡಲಾಗುತ್ತಿದೆ. ಸಂಸ್ಥೆಯಲ್ಲಿ ಅಲ್ಪಾವಧಿ ಹಾಗೂ ದೀರ್ಘಾವಧಿಯ ಯೋಗ ತರಬೇತಿ ನೀಡಲಾಗುತ್ತಿದೆ ಎಂದರು.
ತಾಪಂ ಇಒ ಎಂ.ಎಂ. ಸವದತ್ತಿ, ಅಪರ ತಹಶೀಲ್ದಾರ್ ಪ್ರಕಾಶ ನಾಸಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ