Dharwad ಜಿಲ್ಲೆಯಲ್ಲಿ 81 ಕೆರೆಗಳನ್ನು ತುಂಬಿಸಲಾಗಿದೆ: ಡಿಸಿ ಗುರುದತ್ತ ಹೆಗಡೆ
Team Udayavani, Oct 21, 2023, 11:00 AM IST
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲವಾಗಿದ್ದು, ಗ್ರಾಮೀಣ ಪ್ರದೇಶಕ್ಕೆ ಅನುಕೂಲವಾಗುವಂತೆ ಸುಮಾರು 81 ಕೆರೆಗಳನ್ನು ತುಂಬಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಇಲ್ಲಿನ ಹಳೇ ಸಿ. ಆರ್. ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರಿನ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ ಎಲ್ಲೆಲ್ಲಿ ಅನುಕೂಲತೆ ಇದೆಯೋ ಅಲ್ಲಿಯ ಎಲ್ಲ ಕೆರೆಗಳನ್ನು ತುಂಬಿಸಲಾಗಿದ್ದು ಎಲ್ಲಿಯೂ ಸಹ ಟ್ಯಾಂಕರ್ ಮೂಲಕ ನೀರನ್ನು ಸದ್ಯಕ್ಕೆ ಪೂರೈಕೆ ಮಾಡುತ್ತಿಲ್ಲ ಎಂದರು.
ಮಳೆಯ ಕೊರತೆಯ ನಡುವೆಯೂ ಹುಬ್ಬಳ್ಳಿ ಧಾರವಾಡ ಸೇರಿದಂತೆ ಜಿಲ್ಲೆಯಲ್ಲಿ ಇನ್ನು ಮೂರ್ನಾಲ್ಕು ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದು. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರತಿವಾರ ಸಂಬಂಧಿಸಿದ ಇಲಾಖೆ ಹಾಗೂ ನೀರು ಪೂರೈಕೆ ಕಂಪನಿಯೊಂದಿಗೆ ಚರ್ಚೆ ನಡೆಸುತ್ತಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ಸುಮಾರು 15 ರಿಂದ 16 ಕಡೆ ಆರ್ ಓ ಪ್ಲಾಂಟ್ ಗಳು ದುರಸ್ತಿಯಲ್ಲಿವೆ ಎಂಬ ಮಾಹಿತಿ ಇದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದರು
ಮಳೆಯ ಕೊರತೆಯಿಂದಾಗಿ ಮುಂಗಾರು ಬೆಳೆ ಹಾನಿಗೀಡಾಗಿದ್ದು ಹಿಂಗಾರು ಹಂಗಾಮಿಗೆ ಜಿಲ್ಲೆಯ ಹಲವು ಕಡೆಗಳಲ್ಲಿ ರೈತರು ಬಿತ್ತನೆ ಮಾಡಿದ್ದು ಒಂದು ವೇಳೆ ಮುಂದಿನ ತಿಂಗಳು ಮಳೆಯಾಗದಿದ್ದರೆ ಬಿತ್ತಿದ ಬೆಳೆ ಸಹ ಹಾನಿ ಆಗಲಿದೆ ಎಂದರು.
ಬೆಳೆ ವಿಮೆ ಪರಿಹಾರ ನಿಟ್ಟಿನಲ್ಲಿ ಬರ ಅಥವಾ ಅತಿವೃಷ್ಟಿ ಸಂದರ್ಭದಲ್ಲಿ ತಕ್ಷಣಕ್ಕೆ ಶೇಕಡ 25 ರಷ್ಟು ಮಧ್ಯಂತರ ಪರಿಹಾರವನ್ನು ನೀಡಬೇಕೆಂಬ ನಿಯಮ ಇರುವುದು ನಿಜ ವಿಮಾ ಕಂಪನಿ ಈ ಬಗ್ಗೆ ಈ ಬಗ್ಗೆ ಒಪ್ಪಿರಲಿಲ್ಲ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ವಿಮಾ ಕಂಪನಿಯವರೊಂದಿಗೆ ಸಭೆ ನಡೆಸಿ ಒತ್ತಾಯ ಮಾಡಿದ್ದರಿಂದ ವಿಮಾ ಕಂಪನಿಯವರು ಶೇಕಡ 25ರಷ್ಟು ಮಧ್ಯಂತರ ಪರಿಹಾರ ನೀಡಲು ಒಪ್ಪಿದ್ದು ಇನ್ನೊಂದು ವಾರದಲ್ಲಿ ಮಧ್ಯಂತರ ಪರಿಹಾರ ಬಿಡುಗಡೆಯಾಗುವ ವಿಶ್ವಾಸವಿದೆ ಎಂದರು.
ಬರಗಾಲ ಸ್ಥಿತಿಯನ್ನು ಕೇಂದ್ರ ಅಧ್ಯಯನ ತಂಡ ವೀಕ್ಷಿಸಿದ್ದು ನರೇಗಾ ಅಡಿಯಲ್ಲಿ 150 ದಿನಗಳ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ