ಮನೋಹರ ಗ್ರಂಥಮಾಲೆ 87ನೇ ವರ್ಷಾಚರಣೆ


Team Udayavani, Aug 16, 2019, 9:32 AM IST

huballi-tdy-4

ಧಾರವಾಡ: ರಂಗಾಯಣ ಸಾಂಸ್ಕೃತಿಕ ಭವನದಲ್ಲಿ ಮನೋಹರ ಗ್ರಂಥ ಮಾಲೆಯ 87ನೇ ವರ್ಷಾಚರಣೆ ಅಂಗವಾಗಿ 4 ಪುಸ್ತಕಗಳನ್ನು ಅಂಕಣಕಾರ ಜೋಗಿ ಬಿಡುಗಡೆಗೊಳಿಸಿದರು.

ಧಾರವಾಡ: ಮನೋಹರ ಗ್ರಂಥಮಾಲೆಯ 87ನೇ ವರ್ಷಾಚರಣೆ ಅಂಗವಾಗಿ ನಗರದ ರಂಗಾಯಣದ ಸಾಂಸ್ಕೃತಿಕ ಭವನದಲ್ಲಿ ಜರುಗಿದ ಸಮಾರಂಭದಲ್ಲಿ ಕೇರಳ ಕಾಂತಾಸಮ್ಮಿತ, ಸಾವಿನ ಸೆರಗಿನಲ್ಲಿ, ಉಮೇದುವಾರರು, ಓ ಹೆನ್ರಿ ಕಥೆಗಳು ಎಂಬ ನಾಲ್ಕು ಪುಸ್ತಕಗಳು ಬಿಡುಗಡೆಗೊಂಡವು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಆನಂದ ಝಂಜರವಾಡ ಮಾತನಾಡಿ, ಈಗಿನ ಬಹುತೇಕ ಕೃತಿಗಳ ಹಿಂದೆ ಸಾಂಸ್ಕೃತಿಕ ಒತ್ತಡ ಇದೆಯೇ ಹೊರತು ಸಂಸ್ಕೃತಿಯ ಒತ್ತಡ ಇಲ್ಲ. ಯೋಜಿತವಾಗಿ ಕೃತಿಗಳನ್ನು ಬರೆಯುತ್ತಿದ್ದಾರೆಯೇ ಹೊರತು ಸೃಜನಶೀಲವಾಗಿ ಬರೆಯುತ್ತಿಲ್ಲ. ಕನ್ನಡದಲ್ಲಿ ಸಾವಿರಾರು ಕೃತಿಗಳ ಪ್ರವಾಹದಲ್ಲಿ ಸೃಜನಶೀಲತೆ ಕೊಚ್ಚಿ ಹೋಗುತ್ತಿದೆ. ಸೃಜನಾತ್ಮಕ ಕೃತಿಗಳ ಅಗತ್ಯತೆ ನಮಗಿದೆ ಎಂದು ಹೇಳಿದರು.

ಅಂಕಣಕಾರ ಜೋಗಿ ಮಾತನಾಡಿ, ಬಹುತೇಕ ಪ್ರಕಾಶಕರು ಪ್ರತಿಭಾಪೂರ್ಣ ಸಲಹಾ ಸಮಿತಿಯಿಂದ ವಂಚಿತರಾಗಿದ್ದು, ಸರಿಯಾದ ಮಾರ್ಗದರ್ಶನವಿಲ್ಲದೇ ಕೃತಿಗಳನ್ನು ಮುದ್ರಿಸುತ್ತಿದ್ದಾರೆ. ಹೀಗಾಗಿ ಉತ್ತಮ ಕೃತಿಗಳ ಬದಲು ವಿಕೃತಿಗಳು ಬರುವಂತಾಗಿದೆ. ಈಗಿನ ಹಲವು ಪ್ರಕಾಶಕರು ಓದುವ ಹವ್ಯಾಸ ಬೆಳೆಸಿಕೊಳ್ಳುತ್ತಿಲ್ಲ. ಅವರಿಗೆ ಸರಿಯಾದ ಕೃತಿಗಳನ್ನು ಮುದ್ರಿಸಲು ಸಲಹೆ ಸಹ ನೀಡುವವರಿಲ್ಲ ಎಂದರು.

ಕೃತಿಗಳನ್ನು ಗ್ರಂಥಾಲಯಕ್ಕೆ ಕಳುಹಿಸುವ ಉದ್ದೇಶ ಮಾತ್ರ ಈಡೇರುತ್ತಿದ್ದು, ಉತ್ತಮ ಕೃತಿಗಳ ಕೊರತೆ ಸಾರಸ್ವತ ಲೋಕದಲ್ಲಿ ಎದ್ದು ಕಾಣುತ್ತಿದೆ. ಕೃತಿಗಳ ಕುರಿತು ಸರಿಯಾದ ಟೀಕೆ ಮಾಡುವವರೂ ಇಲ್ಲದಾಗಿದ್ದು, ಬರೀ ಪಂಥ ಬದ್ಧವಾಗಿ ವಿಮರ್ಶೆಗಳು ಬರುತ್ತಿವೆಯೇ ಹೊರತು ಕೃತಿ ಬದ್ಧವಾಗಿ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಮಲಾ ಹೆಮ್ಮಿಗೆ ಅವರ ಕೇರಳ ಕಾಂತಾಸಮ್ಮಿತ (ಮಲೆಯಾಳಂ ಕಥೆಗಳು), ನಿವೃತ್ತ ಪೊಲೀಸ ಅಧಿಕಾರಿ ಡಾ| ಡಿ.ವಿ. ಗುರುಪ್ರಸಾದ ಅವರ ಸಾವಿನ ಸೆರಗಲ್ಲಿ (ಕಥೆಗಳು), ಡಾ| ಲೋಹಿತ ನಾಯ್ಕರ ಅವರ ಉಮೇದುವಾರರು (ರಾಜಕೀಯ ಕಾದಂಬರಿ) ಹಾಗೂ ಡಾ| ಗುರುರಾಜ ಕರ್ಜಗಿ ಅವರ ಓ ಹೆನ್ಸಿ ಕಥೆಗಳು (ಕತೆಗಳು) ಕುರಿತು ಜೋಗಿ ಅವರು ವಿಶ್ಲೇಷಿಸಿದರು.

ಡಾ| ಡಿ.ವಿ. ಗುರುಪ್ರಸಾದ, ಕಮಲಾ ಹೆಮ್ಮಗೆ ಹಾಗೂ ಲೋಹಿತ ನಾಯ್ಕರ್‌ ಮಾತನಾಡಿದರು. ಡಾ| ರಮಾಕಾಂತ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಹ.ವೆಂ. ಕಾಖಂಡಕಿ ನಿರೂಪಿಸಿದರು. ಹಿರಿಯ ಸಾಹಿತಿಗಳಾದ ಹೇಮಾ ಪಟ್ಟಣಶೆಟ್ಟಿ, ಶ್ಯಾಮಸುಂದರ ಬಿದರಕುಂದಿ, ರಾಘವೇಂದ್ರ ಪಾಟೀಲ, ಮಲ್ಲಿಕಾರ್ಜುನ ಹಿರೇಮಠ, ಮಾಲತಿ ಪಟ್ಟಣಶೆಟ್ಟಿ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.